ಮೈಕ್ರೋ ಫೈನಾನ್ಸ್​​​​​​​ ಕಿರುಕುಳಕ್ಕೆ ಕಡಿವಾಣ: 2-3 ದಿನಗಳಲ್ಲಿ ಸುಗ್ರೀವಾಜ್ಞೆ ಎಂದ ಪರಮೇಶ್ವರ್‌

Sampriya
ಶುಕ್ರವಾರ, 31 ಜನವರಿ 2025 (15:43 IST)
ಬೆಂಗಳೂರು: ಮೈಕ್ರೋ ಫೈನಾನ್ಸ್​​​​​​​ ಕಿರುಕುಳಕ್ಕೆ ಕಡಿವಾಣ ಹಾಕುವ ಸುಗ್ರೀವಾಜ್ಞೆ ಬಗ್ಗೆ ಸಿಎಂ ಸಿದ್ದರಾಮಯ್ಯ ಅವರು 2-3 ದಿನಗಳಲ್ಲಿ  ಅಂತಿಮ ತೀರ್ಮಾನ ತೆಗೆದುಕೊಳ್ಳುತ್ತಾರೆ ಎಂದು ಗೃಹ ಸಚಿವ ಜಿ.ಪರಮೇಶ್ವರ್​​​ ತಿಳಿಸಿದರು.

ಇನ್ನೆರಡು ಮೂರು ದಿನಗಳಲ್ಲಿ ಸುಗ್ರೀವಾಜ್ಞೆ ಬಗ್ಗೆ ಅಂತಿಮ ತಿರ್ಮಾನವನ್ನು ಸಿಎಂ ತಗೋತಾರೆ. ಸಿಎಂ ಅಧಿಕಾರಿಗಳ ತಂಡ ರಚನೆ ಮಾಡಿದ್ದಾರೆ. ಕಾನೂನು, ಸಂಸದೀಯ ವ್ಯವಹಾರ, ಆರ್ಥಿಕ‌ ಇಲಾಖೆ ಅಧಿಕಾರಿಗಳ ತಂಡ ರಚನೆ ಮಾಡಿದ್ದಾರೆ. ಈಗಾಗಲೇ ಹಲವು ಕಾನೂನುಗಳಿವೆ ಈ ಕಾನೂನುಗಳ ಅಧ್ಯಯನ ನಡೆಸಿ ಹೊಸ ಕಾನೂನು ಮಾಡಲಾಗುತ್ತದೆ ಎಂದು ಹೇಳಿದರು.

ಯಾವಾಗ ಸುಗ್ರೀವಾಜ್ಞೆ ಹೊರಡಿಸಬೇಕು ಅಂತ ಸಮಯ ನಿಗದಿಗೊಳಿಸಿಲ್ಲ. ಜನರಿಗೆ ಕಿರುಕುಳ ಮಾಡುತ್ತಿರುವ ಘಟನೆಗಳು ನಡೆಯುತ್ತಿವೆ, ಆತ್ಮಹತ್ಯೆ, ಊರು ಬಿಡುವ ಘಟನೆಗಳು ಆಗುತ್ತಿವೆ. ಇದು ನಿಲ್ಲಬೇಕು, ನೋಂದಣಿಯಾಗದ ಮೈಕ್ರೋಫೈನಾನ್ಸ್ ಸಂಸ್ಥೆಗಳಿಗೂ ಕಡಿವಾಣ ಹಾಕಬೇಕು ಎಂದರು.

ಕಾನೂನು ಮೂಲಕ ಕಿರುಕುಳ ನಿಯಂತ್ರಣ ಮಾಡೋದು ನಮ್ಮ ಉದ್ದೇಶ. ನಾವು ತರುವ ಕಾನೂನನ್ನು ಕೋರ್ಟಿನಲ್ಲಿ ಮೈಕ್ರೋಫೈನಾನ್ಸ್ ಸಂಸ್ಥೆಗಳು ಪ್ರಶ್ನೆ ಮಾಡದಂತೆ ರೂಪಿಸುತ್ತೇವೆ. ಬೇರೆ ರಾಜ್ಯಗಳ ಕಾನೂನು ಅಧ್ಯಯನ ಮಾಡಿ ಹೊಸ ಕಾನೂನು ತರುತ್ತೇವೆ ಎಂದು ತಿಳಿಸಿದರು.
 <>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ವಿಧಾನಸೌಧದ ಎದುರು ಕಿತ್ತಾಟ, 11ಮಂದಿ ಅರೆಸ್ಟ್‌

ತಿರುಮಲ ಲಡ್ಡು ಕಲಬೆರಕೆ ಪ್ರಕರಣ, ಮತ್ತೊಂದು ಬೆಚ್ಚಿಬೀಳಿಸುವ ಅಂಶ

ಕಾಂಗ್ರೆಸ್ ಎರಡೂವರೆ ವರ್ಷ ಪೂರೈಸಿದ್ದೇ ಸಾಧನೆ: ವಿಜಯೇಂದ್ರ

ಸಿದ್ದರಾಮಯ್ಯ ಸಿಎಂ ಸ್ಥಾನ ಬಿಟ್ಟುಕೊಡಲ್ಲ, ಡಿಕೆಶಿ ಆ ಸ್ಥಾನದಲ್ಲಿ ಮುಂದುವರೆಯಲು ಬಿಡಲ್ಲ: ಪ್ರಹ್ಲಾದ್ ಜೋಶಿ

ರೈಲಿನ ಎಸಿ ಕೋಚ್‌ನಲ್ಲಿ ಕೆಟಲ್‌ನಲ್ಲಿ ನೂಡಲ್ಸ್ ಮಾಡಿದ ಮಹಿಳೆಗೆ ಇದೀಗ ಢವಢವ

ಮುಂದಿನ ಸುದ್ದಿ
Show comments