Select Your Language

Notifications

webdunia
webdunia
webdunia
webdunia

ರಾಜಧಾನಿಯಲ್ಲಿ ವರುಣಾರ್ಭಟ

ರಾಜಧಾನಿಯಲ್ಲಿ ವರುಣಾರ್ಭಟ
bangalore , ಮಂಗಳವಾರ, 30 ಆಗಸ್ಟ್ 2022 (13:49 IST)
ಬೆಂಗಳೂರಿನಲ್ಲಿ ಮತ್ತೆ ಮಳೆ ತನ್ನ ಆರ್ಭಟ ನಡೆಸಿದೆ. ರಾತ್ರಿಯಿಡೀ ಸುರಿದ ಮಳೆಗೆ ಸಿಲಿಕಾನ್ ಸಿಟಿ ಮಂದಿ ಹೈರಾಣಾಗಿದ್ದಾರೆ. ಗೌರಿ-ಗಣೇಶ ಹಬ್ಬಕ್ಕೆ ಮಳೆರಾಯ ಅಡ್ಡಿ ಪಡಿಸಲಿದ್ದಾನೆ. ಭಾರೀ ಮಳೆಗೆ, ಶಾಪಿಂಗ್ ಹಾಟ್ ಸ್ಪಾಟ್ ಎನಿಸಿಕೊಂಡಿರುವ ಮಲ್ಲೇಶ್ವರಂನಲ್ಲಿ ಚಲಿಸುತ್ತಿದ್ದ ಕಾರಿನ ಮೇಲೆ ಮರ ಬಿದ್ದಿದೆ. ಮಳೆಗೆ ಶಿವಾನಂದ ಸರ್ಕಲ್ ಕೆರೆಯಂತಾಗಿದೆ. ಮಾರುಕಟ್ಟೆ ಸಂಪೂರ್ಣ ಮಳೆಯಿಂದ ಮುಳುಗಡೆಯಾಗಿದೆ. ಚಂದ್ರಾ ಲೇಔಟ್, ಸುಲ್ತಾನ್‌ಪೇಟೆ, ಕೆಂಗೇರಿ, ಕಗ್ಗಲೀಪುರ, ಟೌನ್‌ಹಾಲ್‌ನಲ್ಲಿ ಮಳೆ ಅವಾಂತರವಾಗಿದೆ. ಅನುಗ್ರಹ ಲೇಔಟ್‌ ರಾತ್ರಿ ಸುರಿದ ಮಳೆಯಿಂದಾಗಿ ಜಲಾವೃತವಾಗಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ ಪಾಪಿ ಪತಿ!