Select Your Language

Notifications

webdunia
webdunia
webdunia
webdunia

ಲೋಕಸಭಾ ಚುನಾವಣೆಯಲ್ಲಿ ತುಮಕೂರು ಕ್ಷೇತ್ರದಿಂದ ಸ್ಪರ್ಧಿಸಲು ಅಭ್ಯರ್ಥಿಗಳ ರೇಸ್‌

ಲೋಕಸಭಾ ಚುನಾವಣೆ

geetha

ತುಮಕೂರು , ಮಂಗಳವಾರ, 20 ಫೆಬ್ರವರಿ 2024 (18:44 IST)
ತುಮಕೂರು :ತುಮಕೂರು ಕ್ಷೇತ್ರದಿಂದ ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸಲು ಅಭ್ಯರ್ಥಿಗಳ ರೇಸ್‌ ಜೋರಾಗಿದೆ. ಈ ಹಿನ್ನೆಲೆಯಲ್ಲಿ ಟಿಕೆಟ್‌ ಘೋಷಣೆ ಬಗ್ಗೆ ಯಾವುದೇ ಹೇಳಿಕೆ ನೀಡದಂತೆ ಜಿಲ್ಲಾ ಬಿಜೆಪಿ ಅಧ್ಯಕ್ಷ ಹೆಬ್ಬಾಕ ರವಿಶಂಕರ್‌ ಎಚ್ಚರಿಕೆ ನೀಡಿದ್ದಾರೆ. ಮಂಗಳವಾರ ಈ ಕುರಿತು ಆಯೋಜಿಸಲಾಗಿದ್ದ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಅವರು ಮಾತನಾಡಿದರು. 
ಜಿಲ್ಲೆಯಿಂದ ಯಾರ ಹೆಸರಿನ ಪಟ್ಟಿಯೂ ಪ್ರತ್ಯೇಕವಾಗಿ ಹೈ ಕಮಾಂಡ್ ಗೆ ಹೋಗಿಲ್ಲ ಎಂದು ಸ್ಪಷ್ಟನೆ ನೀಡಿದ ರವಿಶಂಕರ್‌, ಆಕಾಂಕ್ಷಿತರು ತಪ್ಪು ಮಾಹಿತಿಗಳನ್ನು ಮಾಧ್ಯಮಕ್ಕೆ ಕೊಡಬಾರದು ಎಂದು ತಾಕೀತು ಮಾಡಿದರು. 

 ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸಲು ನಾನು ಕೂಡ ಪ್ರಬಲ ಆಕಾಂಕ್ಷಿಯಾಗಿದ್ದೇನೆ ಎಂದು ನುಡಿದ ರವಿಶಂಕರ್‌, ಹಾಗೆಂದು ಪಕ್ಷದ ಚೌಕಟ್ಟು ಬಿಟ್ಟು ಹೇಳಿಕೆ ನೀಡಲು ಸಾಧ್ಯವಿಲ್ಲ ಎಂದರು. ಜೊತೆಗೆ, ವಿ.ಸೋಮಣ್ಣರಿಗೆ ಟಿಕೆಟ್ ಕೊಡದಂತೆ ಯಾರೂ ಹೈಕಮಾಂಡ್ ಗೆ ಪತ್ರ ಬರೆದಿಲ್ಲ. ಹೈಕಮಾಂಡ್ ಸೋಮಣ್ಣಗೆ ಟಿಕೆಟ್ ಕೊಟ್ಟರೆ ಕಮಲದ ಚಿಹ್ನೆಗಾಗಿ ಕೆಲಸ ಮಾಡುತ್ತೇವೆ ಎಂದರು. 
 
ಇತ್ತೀಚಿಗಷ್ಟೇ , ಸಿದ್ದಗಂಗಾ ಆಸ್ಪತ್ರೆ ಆಡಳಿತಾಧಿಕಾರಿ ಹಾಗೂ ಜಿಲ್ಲಾ ಬಿಜೆಪಿ ಖಜಾಂಚಿ ಡಾ. ಪರಮೇಶ್‌ ತನಗೆ ಬಿಜೆಪಿ ಲೋಕಸಭಾ ಚುನಾವಣೆ ಟಿಕೆಟ್‌ ದೊರೆಯುವುದು ಖಚಿತವಾಗಿದೆ ಎಂದು ಪತ್ರಿಕಾಗೋಷ್ಠಿಯಲ್ಲಿ ಹೇಳಿಕೆ ನೀಡಿದ್ದರು.

 

Share this Story:

Follow Webdunia kannada

ಮುಂದಿನ ಸುದ್ದಿ

ಜ್ಯಾನವ್ಯಾಪಿ ಮಸೀದಿಗೆ ಸಂಬಂಧವಿದೆ ಎಂದ ಆರ್‌. ಅಶೋಕ್‌!