Webdunia - Bharat's app for daily news and videos

Install App

ವ್ಯಾಪಕ ವಿರೋಧವಿದ್ರೆ ಆದೇಶ ಮರುಪರಿಶೀಲನೆ: ಸಾರಿಗೆ ಸಚಿವ ರೇವಣ್ಣ

Webdunia
ಮಂಗಳವಾರ, 24 ಅಕ್ಟೋಬರ್ 2017 (18:03 IST)
ಬೆಂಗಳೂರು: ಹೈಕೋರ್ಟ್ ನಿರ್ದೇಶನದಂತೆ 100 ಸಿಸಿಗಿಂತಲೂ ಕಡಿಮೆ ಸಾಮರ್ಥ್ಯದ ದ್ವಿಚಕ್ರ ವಾಹನಗಳಲ್ಲಿ ಡಬಲ್ ರೈಡಿಂಗ್ ನಿಷೇಧ ಮಾಡಿದ್ದು, ಅಗತ್ಯ ಬಿದ್ದರೆ ನಿರ್ಧಾರ ಮರುಪರಿಶೀಲನೆ ನಡೆಸಲಾಗುತ್ತದೆ ಎಂದು ಸಾರಿಗೆ ಸಚಿವ ಹೆಚ್.ಎಂ.ರೇವಣ್ಣ ಹೇಳಿದ್ದಾರೆ.

ವಿಧಾನಸೌಧದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, 100 ಸಿಸಿ ಹಾಗು ಅದಕ್ಕೂ ಕಡಿಮೆ ಸಾಮರ್ಥ್ಯದ ದ್ವಿಚಕ್ರ ವಾಹನಗಳಲ್ಲಿ ಹಿಂಬದಿ ಸವಾರರು ಇರಬಾರದು ಎಂದು ಹೈಕೋರ್ಟ್ ಸೂಚನೆ ನೀಡಿದೆ. ಕರ್ನಾಟಕ ಮೋಟಾರು ವಾಹನ ಕಾಯ್ದೆ 143ರ ಅಡಿಯಲ್ಲಿ ಹಿಂಬದಿ ಸವಾರರಿಗೆ ಅವಕಾಶ ಇಲ್ಲ. ಹೀಗಾಗಿ ಅಪಘಾತದ ವೇಳೆ ವಿಮೆಯನ್ನು ನೀಡಲು ಬರುವುದಿಲ್ಲ. ಹೀಗಾಗಿ ಕೋರ್ಟ್ ಆದೇಶವನ್ನು ಜಾರಿಗೆ ತರುವ ಕೆಲಸ ಮಾಡಿದ್ದೇವೆಯೇ ಹೊರತು ಇದರಲ್ಲಿ ಸರ್ಕಾರದ ವೈಯಕ್ತಿಕ ಹಿತಾಸಕ್ತಿ ಇಲ್ಲ. ನಮ್ಮ ನಿರ್ಧಾರವೂ ಇದಲ್ಲ. ಒಂದು ವೇಳೆ ಜನರು ವ್ಯಾಪಕ ವಿರೋಧ ವ್ಯಕ್ತಪಡಿಸಿದಲ್ಲಿ ನಿರ್ಧಾರ ಮರುಪರಿಶೀಲನೆ ಮಾಡುವ ಕುರಿತು ಚಿಂತನೆ ನಡೆಸಲಾಗುತ್ತದೆ ಎಂದರು.

ನ್ಯಾಯಾಲಯದ ಆದೇಶದ ಮೇರೆಗೆ ಈಗಾಗಲೇ ಮೊಪೆಡ್ ಗಳನ್ನು ನಿಷೇಧಿಸಿ ಸರ್ಕಾರ ಸುತ್ತೋಲೆ ಹೊರಡಿಸಿದೆ.‌100 ಸಿಸಿಗಿಂತ ಕಡಿಮೆ ಸಾಮರ್ಥ್ಯದ ದ್ವಿಚಕ್ರ ವಾಹನಗಳಲ್ಲಿ ಹಿಂಬದಿ ಸವಾರರ ಪ್ರಯಾಣ ನಿಷೇಧಿಸಿ ಆದೇಶ ಹೊರಡಿಸಲಾಗಿದೆ. ಇದು ಹೊಸದಾಗಿ ನೋಂದಣಿಯಾಗುವ ವಾಹನಗಳಿಗೆ ಮಾತ್ರ ಅನ್ವಯವಾಗುತ್ತದೆ. ನ್ಯಾಯಾಲಯದ ಆದೇಶವನ್ನು ನಮ್ಮ ಇಲಾಖೆ ಪಾಲನೆ ಮಾಡುತ್ತಿದೆ ಎಂದು ಸಾರಿಗೆ ಇಲಾಖೆ ನಡೆಯನ್ನು ಸಮರ್ಥಿಸಿಕೊಂಡಿದ್ದಾರೆ.

ಅ. 23 ರಂದು ಕೆಎಸ್ಆರ್‌ಟಿಸಿಯಲ್ಲಿ ದಾಖಲೆಯ ಹಣ ಸಂಗ್ರಹವಾಗಿದೆ. 13.67 ಕೋಟಿ ರೂ. ಪ್ರಯಾಣ ಶುಲ್ಕ ಸಂಗ್ರಹವಾಗಿದೆ. ಹೀಗಾಗಿ ಕೆಎಸ್ಆರ್‌ಟಿಸಿಯ ಎಲ್ಲಾ ಸಿಬ್ಬಂದಿಗೆ ಸಿಹಿ ಹಂಚಲು ಆದೇಶಿಸಿದ್ದೇವೆ. ಕೇಂದ್ರ ಸರ್ಕಾರ ಡೀಸೆಲ್ ದರ ಇಳಿಕೆ ಮಾಡಿದರೆ, ಕೂಡಲೇ ಪ್ರಯಾಣ ದರ ಇಳಿಕೆ ಮಾಡುತ್ತೇವೆ ಎಂದು ಸಚಿವ ರೇವಣ್ಣ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಕ್ತದ ಮಡುವಿನಲ್ಲಿ ನಿವೃತ್ತ ಪೊಲೀಸ್ ಓಂ ಪ್ರಕಾಶ್‌ ಮೃತದೇಹ ಪತ್ತೆ, ಮನೆಯವರೇ ಮೇಲೆ ಡೌಟ್‌

ಸಿಎಂ ಕುರ್ಚಿ ಗುದ್ದಾಟದ ನಡುವೆ ಧರ್ಮಸ್ಥಳಕ್ಕೆ ಭೇಟಿ ನೀಡಿ, ಧರ್ಮಾಧಿಕಾರಿ ಕಾಲಿಗೆ ಬಿದ್ದು ಆಶೀರ್ವಾದ ಪಡೆದ ಡಿಕೆ ಶಿವಕುಮಾರ್

Video vira: ವಿದ್ಯುತ್ ಶಾಕ್‌ನಿಂದ ಒದ್ದಾಟುತ್ತಿದ್ದ ಬಾಲಕನ ಪಾಲಿಗೆ ನಿಜವಾದ ಹೀರೋ ಆದ ಯುವಕ, ಇದಪ್ಪ ದೈರ್ಯ

ನನ್ನ ಸಾವಿಗೆ ಪತ್ನಿ, ಅತ್ತೆಯೇ ಕಾರಣ: ನ್ಯಾಯಕೊಡಿಸಲು ಸಾಧ್ಯವಾಗದಿದ್ದರೆ ಚಿತಾಭಸ್ಮ ಚರಂಡಿಗೆ ಎಸೆಯಿರಿ, ವಿಡಿಯೋ ಮಾಡಿಟ್ಟು ಟೆಕ್ಕಿ ಸಾವು

ಕಸದಲ್ಲಿ ಶಿಶುವಿನ ಶವ ಪತ್ತೆ ಪ್ರಕರಣಕ್ಕೆ ಟ್ವಿಸ್ಟ್‌: ಅಪ್ರಾಪ್ತೆಗೆ ಗರ್ಭಪಾತ ಮಾಡಿಸಿದ್ದ ಆಟೊ ಚಾಲಕ ಅಂದರ್‌

ಮುಂದಿನ ಸುದ್ದಿ
Show comments