Webdunia - Bharat's app for daily news and videos

Install App

ಸಾಮರ್ಥ್ಯಕ್ಕಿಂತ ಹೆಚ್ಚು ಜನರು ತೆರಳಿದ್ದೇ ತೆಪ್ಪ ಮುಳುಗಲು ಕಾರಣ

Webdunia
ಗುರುವಾರ, 8 ಸೆಪ್ಟಂಬರ್ 2016 (19:05 IST)
ಶಿವಮೊಗ್ಗದ ತೆಪ್ಪ ದುರಂತಕ್ಕೆ ಸಾಮರ್ಥ್ಯಕ್ಕಿಂತ ಹೆಚ್ಚು ಜನರು ತೆಪ್ಪದಲ್ಲಿ ತೆರಳಿದ್ದೇ ಕಾರಣವೆಂದು ಹೇಳಲಾಗುತ್ತಿದೆ. ತೆಪ್ಪ ಮುಳುಗಿ ಮೃತಪಟ್ಟ 11 ಜನರ ಶವಗಳು ಸಿಕ್ಕಿದ್ದು, ಹಾಡೋನಹಳ್ಳಿ ಗ್ರಾಮದಲ್ಲಿ ನೀರವ ಮೌನ ಆವರಿಸಿದೆ. ಗಣಪತಿ ವಿಸರ್ಜನೆಗೆ ತೆರಳಿದವರು ಈ ರೀತಿ ದುರಂತ ಅಂತ್ಯ ಕಾಣುತ್ತಾರೆಂದು ಯಾರೂ ಭಾವಿಸಿರಲಿಲ್ಲ. ಈ 11 ಜನರ ದೇಹಗಳನ್ನು ಸಾಮೂಹಿಕ ಅಂತ್ಯಕ್ರಿಯೆ ನಡೆಸಲು ಗ್ರಾಮಸ್ಥರು ನಿರ್ಧರಿಸಿದ್ದಾರೆ. 
 
ಗ್ರಾಮದ ಎಲ್ಲ ಗಣಪತಿ ವಿಗ್ರಹಗಳನ್ನು ಒಂದೇ ಬಾರಿಗೆ ವಿಸರ್ಜನೆ ಮಾಡುವ ಸಂಪ್ರದಾಯ ಬೆಳೆದುಬಂದಿದೆ. ಇದೇ ರೀತಿ ಮೂರ್ತಿಗಳ ಮೆರವಣಿಗೆ ಬುಧವಾರ ಬೆಳಿಗ್ಗೆ ಆರಂಭವಾಗಿ ಗ್ರಾಮದ ಹಿರಿಯರು ತೆಪ್ಪದಲ್ಲಿ ನದಿ ಮಧ್ಯದವರೆಗೆ ಹೋಗಿ ಗೌರಿಯ ವಿಗ್ರಹ ವಿಸರ್ಜಿಸಿ ಬಂದಿದ್ದಾರೆ.

ನಂತರ ಯುವಕರೇ ಹೆಚ್ಚಾಗಿ 25 ಜನರ ತಂಡ ಗಣಪತಿ ವಿಸರ್ಜಿಸಲು ಹೋಗಿದ್ದಾಗ ತೆಪ್ಪದ ಒಂದು ಭಾಗದಲ್ಲಿ ನೀರು ಏರಲು ಆರಂಭಿಸಿ ತೆಪ್ಪ ಮುಳುಗಿದ್ದರಿಂದ ಎಲ್ಲರೂ ನದಿಗೆ ಬಿದ್ದರು. ಈಜು ಬಂದವರು ಈಜಿ ದಡ ತಲುಪಿ ಪಾರಾದರೆ ಈಜು ಬಾರದವರು ಮುಳುಗಿ ಪ್ರಾಣ ಬಿಟ್ಟಿದ್ದಾರೆ. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಇಸ್ರೇಲ್ ದಾಳಿಗೆ ಗಟ್ಟಿಯಾಗಿ ನಿಲ್ಲುವಂತೆ ಇರಾನ್ ನಾಯಕ ಖಮೇನಿ ಜನತೆಗೆ ಸಂದೇಶ

ಇರಾನ್ ಬೆನ್ನಲ್ಲೇ ಇಸ್ರೇಲ್‌ನಿಂದ ಭಾರತೀಯರನ್ನು ಕರೆತರಲು ಮುಂದಾದ ಕೇಂದ್ರ ಸರ್ಕಾರ

ರಾಹುಲ್ ಗಾಂಧಿ ಜನ್ಮದಿನಕ್ಕೆ ಡಿಕೆಶಿಯಿಂದ ಕಣ್ಣುಗಳೇ ಗಿಫ್ಟ್

Sonia Gandhi: ಹಿರಿಯ ನಾಯಕಿ ಆಸ್ಪತ್ರೆಯಿಂದ ಡಿಸ್ಚಾರ್ಜ್‌

Air India Plane Crash: ತಾಯ್ನಾಡಿಗೆ ತಲುಪಿದ ಸಿಬ್ಬಂದಿ ಲಾಮ್‌ನುಂಥೆಮ್‌ ಮೃತದೇಹ

ಮುಂದಿನ ಸುದ್ದಿ
Show comments