ಸಿದ್ದಲಿಂಗ ಸ್ವಾಮಿ ದೋಷಿ ಎಂದ ಕೋರ್ಟ್

Webdunia
ಶುಕ್ರವಾರ, 17 ಮಾರ್ಚ್ 2023 (21:03 IST)
ಕೋಮು ಪ್ರಚೋದನೆ ಭಾಷಣ ಮಾಡಿದ ಪ್ರಕರಣದಲ್ಲಿ ಆಂದೋಲದ ಕರುಣೇಶ್ವರ ಮಠದ ಪೀಠಾಧಿಪತಿ ಹಾಗೂ ಶ್ರೀರಾಮಸೇನೆ ರಾಜ್ಯಾಧ್ಯಕ್ಷ ಸಿದ್ದಲಿಂಗ ಸ್ವಾಮಿ ದೋಷಿ ಎಂದು ಕೋರ್ಟ್​ ತೀರ್ಪು ನೀಡಿದೆ. ಮುಸ್ಲಿಂ ಸಮುದಾಯದ ಬಗ್ಗೆ ಅವಹೇಳನಕಾರಿಯಾಗಿ ಭಾಷಣ ಮಾಡಿದ್ದ ಆರೋಪದ ಮೇಲೆ 2015ರಲ್ಲಿ ಆಂದೋಲಾ ಶ್ರೀ ವಿರುದ್ಧ ಕೇಸ್ ದಾಖಲಾಗಿತ್ತು. ಈ ಪ್ರಕಣಕ್ಕೆ ಸಂಬಂಧಿಸಿದಂತೆ ಇಂದು ಯಾದಗಿರಿಯ ಸಿವಿಲ್ ಕೋರ್ಟ್ ನ್ಯಾಯಾಧೀಶ ರವೀಂದ್ರ ಹೊನೋಲೆ​ ಅವರು, ಸಿದ್ದಲಿಂಗ ಸ್ವಾಮಿಯನ್ನು ದೋಷಿ ಎಂದು ತೀರ್ಪು ನೀಡಿದರು. ಅಲ್ಲದೇ ದೋಷಿಯ ಹಿನ್ನಲೆಯ ವರದಿ ನೀಡುವಂತೆ ಪ್ರೊಬೇಷನರಿ ಅಧಿಕಾರಿಗಳಿಗೆ ತಿಳಿಸಿದ್ದು, ವರದಿ ಮೇಲೆ ಶಿಕ್ಷೆಯ ಪ್ರಮಾಣ ನಿರ್ಧಾರವಾಗಲಿದೆ. 2015ರ ಜನವರಿ 2ರಂದು ಯಾದಗಿರಿ ನಗರದ ಜೂನಿಯರ್ ಕಾಲೇಜು ಮೈದಾನದಲ್ಲಿ ವಿಶ್ವ ಹಿಂದೂ ಪರಿಷತ್ ಆಯೋಜನೆ ಮಾಡಿದ್ದ ಕಾರ್ಯಕ್ರಮದಲ್ಲಿ ಕೋಮು ಪ್ರಚೋದನೆ ಭಾಷಣ ಮಾಡಿದ್ದರು. ಈ ಬಗ್ಗೆ ಯಾದಗಿರಿ ನಗರ ಠಾಣೆಯಲ್ಲಿ ದೂರು ದಾಖಲಾಗಿತ್ತು. ಪ್ರಕರಣ ದಾಖಲಾಗಿಸಿಕೊಂಡಿದ್ದ ಯಾದಗಿರಿ ನಗರ ಠಾಣೆ ಪೊಲೀಸರು IPC ಕಲಂ 153 (ಎ), 295ರ ಅಡಿಯಲ್ಲಿ ಕೋರ್ಟ್​ಗೆ ದೋಷಾರೋಪ ಪಟ್ಟಿ ಸಲ್ಲಿಸಿದ್ದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

MGNREGA ಮರುನಾಮಕರಣದ ನಿರ್ಧಾರದ ವಿರುದ್ಧ ಕಾಂಗ್ರೆಸ್ ಕಿಡಿ, ನಾಳೆಯಿಂದ ಪ್ರತಿಭಟನೆ

ದಿಡೀರನೆ ದೆಹಲಿ ಜನತೆ ಬಳಿ ಕ್ಷಮೆಯಾಚಿಸಿದ ಪರಿಸರ ಸಚಿವ ಮಂಜಿಂದರ್ ಸಿಂಗ್ ಸಿರ್ಸಾ

ಸಿಡ್ನಿ ಗುಂಡಿನ ದಾಳಿಕೋರರಲ್ಲಿ ಒಬ್ಬಾತ ಹೈದರಾಬಾದ್‌ ಮೂಲದವ, ಇಲ್ಲಿದೆ ಮಾಹಿತಿ

ಲಿಯೋನೆಲ್ ಮೆಸ್ಸಿ ಕಾರ್ಯಕ್ರಮದಲ್ಲಿ ಧಾಂದಲೆ: ಪ.ಬಂಗಾಳ ರಾಜಕೀಯದಲ್ಲಿ ಭಾರೀ ಬೆಳವಣಿಗೆ

ನ್ಯಾಷನಲ್ ಹೆರಾಲ್ಡ್‌ ಪ್ರಕರಣ, ಸೋನಿಯಾ, ರಾಹುಲ್ ಗಾಂಧಿಗೆ ಬಿಗ್‌ ರಿಲೀಫ್‌

ಮುಂದಿನ ಸುದ್ದಿ
Show comments