Select Your Language

Notifications

webdunia
webdunia
webdunia
webdunia

ಹಿಂದೂ ದೇವರಿಗೆ ಸಲಾಂ ಪೂಜೆ ಸಲ್ಲದು’

ಹಿಂದೂ ದೇವರಿಗೆ ಸಲಾಂ ಪೂಜೆ ಸಲ್ಲದು’
bangalore , ಮಂಗಳವಾರ, 29 ಮಾರ್ಚ್ 2022 (20:30 IST)
ಟಿಪ್ಪು ಹೆಸರಿನಲ್ಲಿ ದೇವರಿಗೆ ಪೂಜೆ ಮಾಡುವುದು ಸರಿಯಲ್ಲ. ಅದು ದೇವರಿಗೆ ಮಾಡುವ ಅಪಮಾನ. ಇದರಿಂದ ದೇವರ ಶಕ್ತಿ ಕಡಿಮೆಯಾಗುತ್ತದೆ ಎಂದು ಆರ್‌ಎಸ್‌ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಹೇಳಿದ್ದಾರೆ. ಶೃಂಗೇರಿಯ ಕೊಲ್ಲೂರು ಮೂಕಾಂಬಿಕೆ ದೇವಸ್ಥಾನದಲ್ಲಿ ನಡೆಯುವ ಸಲಾಂ ಆರತಿ ಪೂಜೆಗೆ ಸಂಬಂಧಿಸಿದಂತೆ ಉಡುಪಿಯ ಬೈಂದೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿರುವ ಅವರು, ಸಲಾಂ ತೆಗೆದು ದೇವರ ಹೆಸರಿನಲ್ಲಿ ಪೂಜೆ ಮಾಡಿ ಎಂದು ಆಗ್ರಹಿಸಿದ್ದಾರೆ. ಶೀಘ್ರವಾಗಿ ಸಲಾಂ ತೆಗೆದು, ದೇವರ ಹೆಸರಿನಲ್ಲಿ ಪೂಜೆ ಮಾಡಲಿ. ಸಲಾಂ ಇನ್ನೂ ಸ್ವಲ್ಪ ವರ್ಷ ಕಳೆದರೆ, ಅಲ್ಲಾಹು ಸಲಾಂ ಎಂದು ಬರುವ ಸಾಧ್ಯತೆ ಇದೆ. ಅವರಲ್ಲಿ ಬೇಕಾದರೆ ಮಾಡಲಿ, ನಮ್ಮಲ್ಲಿ ಬೇಡ. ನಮ್ಮ ದೇವಸ್ಥಾನದಲ್ಲಿ ನಮ್ಮತನ ಇರಬೇಕು. ಹಿಂದೂ ದೇವರಿಗೆ ಇಂತಹ ಸಲಾಂ ಪೂಜೆ ನಡೆಯಬಾರದು ಎಂದು ಕಿಡಿಕಾರಿದ್ದಾರೆ

Share this Story:

Follow Webdunia kannada

ಮುಂದಿನ ಸುದ್ದಿ

ಯಡಿಯೂರಪ್ಪ ವಿರುದ್ಧ ಭೂ ಆಕ್ರಮದ ಆರೋಪ