Webdunia - Bharat's app for daily news and videos

Install App

ಪ್ರಕೃತಿ ಪ್ರಿಯರಿಗೆ ಹಾಗು ಚಾರಣಿಗರಿಗೆ ಹೇಳಿ ಮಾಡಿಸಿದ ಸ್ಥಳ ಕೊಡಚಾದ್ರಿ

Webdunia
ಸೋಮವಾರ, 1 ಜನವರಿ 2018 (13:02 IST)
ಬೆಂಗಳೂರು : ಕೊಡಚಾದ್ರಿ ಬೆಟ್ಟ ಪ್ರವಾಸಿಗರಿಗೆ ಒಂದು ರಮಣೀಯ ತಾಣವಾಗಿದ್ದು, ಇದು ನೋಡುಗರ ಕಣ್ಣಿಗೂ ಮುದವನ್ನು ನೀಡುತ್ತದೆ. ಕೊಡಚಾದ್ರಿ ಬೆಟ್ಟಗಳ ಸಾಲು ಕರ್ನಾಟಕ ರಾಜ್ಯದ ಶಿವಮೊಗ್ಗ ಜಿಲ್ಲೆಯಲ್ಲಿ ಇದೆ. ಇದು ಸಮುದ್ರ ಮಟ್ಟದಿಂದ ಸುಮಾರು 1343ಮೀ ಎತ್ತರದಲ್ಲಿದೆ. ಕೊಡಚಾದ್ರಿ ಬೆಟ್ಟ ಪ್ರಕೃತಿ ಪ್ರಿಯರಿಗೆ ಮಾತ್ರವಲ್ಲದೆ  ಇಲ್ಲಿ ಕೊಲ್ಲೂರು ಮೂಕಾಂಬಿಕೆ ದೇವಸ್ಥಾನವಿರುವುದರಿಂದ ಧಾರ್ಮಿಕರನ್ನು ಕೂಡ ಈ ಸ್ಥಳ ಆಕರ್ಷಿಸುತ್ತದೆ.

 
ಕೊಡಚಾದ್ರಿ ಬೆಟ್ಟದ ಮೇಲೆ ಸರ್ವಜ್ಞ ಪೀಠವೆಂಬ ಒಂದು ಸಣ್ಣ ದೇವಾಲಯವಿದೆ. ಈ ಸ್ಥಳದಲ್ಲಿ ಆದಿಗುರು ಶ್ರೀ ಶಂಕರಾಚಾರ್ಯರು ತಪಸ್ಸು ಮಾಡಿದ್ದರು ಎಂಬ ಪ್ರತೀತಿ ಇದೆ. ಸರ್ವಜ್ಞ ಪೀಠಕ್ಕಿಂತ 2 ಕಿ.ಮೀ. ಮೊದಲು ಮೂಕಾಂಬಿಕೆ ದೇವಸ್ಥಾನವಿದೆ. ಸರ್ವಜ್ಞ ಪೀಠದಿಂದ ಮುಂದೆ ಇರುವ ಬೆಟ್ಟವನ್ನು ಇಳಿದರೆ ಚಿತ್ರಮೂಲವೆಂಬ ಸ್ಥಳ ಸಿಗುತ್ತದೆ. ಅದು ಸೌಪರ್ಣಿಕ ನದಿಯ ಉಗಮಸ್ಥಾನ. ಈ ಸ್ಥಳದಲ್ಲಿ ಅನೇಕ ಜಾತಿಯ ಸಸ್ಯಗಳು ಬೆಳೆಯುತ್ತದೆ.

 
ಇಪ್ಪತ್ತನೇಯ ಶತಮಾನದಲ್ಲಿ ಇಲ್ಲಿ ಸುತ್ತಾಡಿದ ಲೇಖಕ ಹಾಗು ಪರಿಸರ ಪ್ರೇಮಿ ಡಾ. ಶಿವರಾಮ್ ಕಾರಂತರು ಅಲ್ಲಿರುವ ಮೂರು
ಪರ್ವತಗಳನ್ನು ಕಾಲ್ನಡಿಗೆಯಲ್ಲಿ ಏರಿ ಅವುಗಳಲ್ಲಿ ಒಂದಾದ ಕುದುರೆಮುಖ ಶಿಖರವನ್ನು ಅತ್ಯಂತ ದೂರದ ಚಾರಣ, ಕುಮಾರ ಪರ್ವತವನ್ನು ತುಂಬಾ ಕಠಿಣವೆನಿಸುವ ದಾರಿ ಹಾಗು ಕೊಡಚಾದ್ರಿಯನ್ನು ಇವೆಲ್ಲಕ್ಕಿಂತಲೂ ಚಂದದ ತಾಣವೆಂದು ವರ್ಣಿಸಿದ್ದಾರೆ.

 
ಕ್ರಿ.ಶ. ಏಳನೇ ಶತಮಾನದಲ್ಲಿ ಆದಿಗುರು ಶ್ರೀ ಶಂಕರಾಚಾರ್ಯರು ಕೊಡಚಾದ್ರಿಗೆ ಭೇಟಿ ನೀಡಿ ಅಲ್ಲಿದ್ದ ಮೂಲ ಮೂಕಾಂಬಿಕೆಯನ್ನು ಕೊಲ್ಲೂರಿನಲ್ಲಿ ಪ್ರತಿಷ್ಠಾಪನೆ  ಮಾಡಿದರು ಎಂದು ಪುರಾಣ ಹೇಳುತ್ತದೆ. ಆ ದೇವಸ್ಥಾನವು ಕೂಡ ಪುರಾತನವಾದದ್ದು. ಈ ದೇವಸ್ಥಾನದ ಬಳಿ ಇರುವ ಸುಮಾರು 40 ಅಡಿ ಎತ್ತರದ ಕಬ್ಬಿಣದ ಕಂಬವು ಮೂಕಾಸುರನನ್ನು ವಧಿಸಲು ದೇವಿ ಉಪಯೋಗಿಸಿದ ತ್ರಿಶೂಲ ಎಂದು ಸ್ಥಳೀಯರು ಹೇಳುತ್ತಾರೆ. ಇದು ಪುರಾತನ ವಿಧಾನಗಳಿಂದ ತಯಾರಾದ ಕಬ್ಬಿಣ ಎಂದು ಸಂಶೋಧನೆಗಳಿಂದ ಪತ್ತೆಯಾಗಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಮೊದಲ ಮಗುವಿನ ನಿರೀಕ್ಷೆಯಲ್ಲಿ ನಟಿ ಹರ್ಷಿತಾ, ಸೀಮಂತದ ಫೋಟೋ ಹಂಚಿ ಕುಡ್ಲದ ಹುಡುಗಿ ಎಂದ ಗಂಗಾ ಪಾತ್ರದಾರಿ

ಸ್ಟಂಟ್ ಮ್ಯಾನ್ ಮೋಹನ್ ರಾಜ್ ಸಾವು, ನಿರ್ದೇಶಕ ಸೇರಿ ನಾಲ್ವರ ವಿರುದ್ಧ ಎಫ್‌ಐಆರ್‌

ಹುಟ್ಟೂರಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ಬಿ ಸರೋಜಾದೇವಿ ಅಂತ್ಯಕ್ರಿಯೆ

ಮೋಡಿ ಮಾಡಲು ರೆಡಿಯಾದ ಶೈನ್ ಶೆಟ್ಟಿ-ಅಂಕಿತ ಅಮರ್ ಜೋಡಿ: ಸೆನ್ಸಾರ್‌ ಪರೀಕ್ಷೆ ಪಾಸಾದ ಜಸ್ಟ್ ಮಾರೀಡ್

ಅಭಿನಯ ಸರಸ್ವತಿ ಬಿ ಸರೋಜಾದೇವಿಗೆ ಇಂದು ಅಂತಿಮ ಕ್ರಿಯೆ

ಮುಂದಿನ ಸುದ್ದಿ
Show comments