Webdunia - Bharat's app for daily news and videos

Install App

ನೀರವ್ ಮೋದಿ, ಲಲಿತ್ ಮೋದಿ, ವಿಜಯ್ ಮಲ್ಯ, ಅಂಬಾನಿ, ಮೋದಿ ಕಳ್ಳರ ಗುಂಪಿನ ಸದಸ್ಯರಂತೆ!

Webdunia
ಭಾನುವಾರ, 14 ಏಪ್ರಿಲ್ 2019 (16:04 IST)
ನರೇಂದ್ರ ಮೋದಿಯವರೇ ಸುಳ್ಳು ಹೇಳಲಿ. ನಾವು ಸತ್ಯವನ್ನು ಹೇಳುತ್ತೇವೆ. ‌ಮೋದಿ ‌ಹೇಳಿದ ‌ಸುಳ್ಳಿನ ‌ಭರವಸೆಯನ್ನು ಕಾಂಗ್ರೆಸ್ ಸಾಬೀತು ಪಡಿಸಲಿದೆ ಎಂದು ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಹೇಳಿದ್ದಾರೆ.

ಕೋಲಾರದಲ್ಲಿ ನಡೆದ ಕಾಂಗ್ರೆಸ್-ಜೆಡಿಎಸ್ ಪರಿವರ್ತನಾ ಸಮಾವೇಶವನ್ನುದ್ದೇಶಿಸಿ ಮಾತನಾಡಿದ ಅವರು,
ದೇಶವನ್ನು ಒಗ್ಗೂಡಿಸುವ ಕೆಲಸಕ್ಕಾಗಿ ಕಾಂಗ್ರೆಸ್ ಚುನಾವಣೆ ಎದುರಿಸುತ್ತಿದ್ದರೆ, ಪ್ರಧಾನಿಮೋದಿ ಕೇವಲ 15-20  ಜನರಿಗಾಗಿ ದೇಶವನ್ನು ಒಡೆಯುತ್ತಿದ್ದಾರೆ. ಅವರಿಗೋಸ್ಕರ ಚುನಾವಣೆ ನಡೆಸುತ್ತಿದ್ದಾರೆ ಎಂದು‌ಮೋದಿ ವಿರುದ್ಧ ಅವರು ಹರಿಹಾಯ್ದರು.

2014 ರಲ್ಲಿ 15 ಲಕ್ಷ ರೂ. ಬಡವರ ಖಾತೆಗೆ ಹಾಕುವುದಾಗಿ, ಯವಕರಿಗೆ ಉದ್ಯೋಗ ಸೃಷ್ಟಿ, ರೈತರ ಸಾಲಮನ್ನಾ ವಾಗ್ದಾನವನ್ನು ಜನರ ಮುಂದೆ ಇಟ್ಟು ಚುನಾವಣೆ ಎದುರಿಸಿದೆ. ಆದರೆ ಚುನಾವಣೆ ಆದ ಮೇಲೆ 15 ಲಕ್ಷ ಬಡವರ ಖಾತೆಗೆ ಹಾಕುವ ಮಾತು ಬರಿ ಚುನಾವಣೆಗೆ ಮಾತ್ರ ಆಡಿದ ಜುಮ್ಲಾ ಮಾತುಗಳು ಎಂದು ಷಾ ಹೇಳಿದರು. 15 ಲಕ್ಷ ರೂ.‌ ವನ್ನು ಪ್ರತಿಯೊಬ್ಬರ ಖಾತೆಗೆ ಹಾಕುವ ಬಿಜೆಪಿಯ ಸುಳ್ಳಿನ ಮಾತನ್ನು ಕಾಂಗ್ರೆಸ್ ನಿಜಗೊಳಿಸಲು ಮುಂದಾಗಿದೆ. ಮೋದಿ ಹೇಳಿದ ಸುಳ್ಳನ್ನು ಕಾಂಗ್ರೆಸ್ ಸತ್ಯ ಮಾಡಲು ಹೊರಟಿದೆ. ದೇಶದ ಉತ್ತಮ ಆರ್ಥಿಕ ತಜ್ಞರೊಂದಿಗೆ ಈ ಬಗ್ಗೆ ಚರ್ಚಿಸಲಾಯಿತು.‌ ದೇಶದ ಆರ್ಥಿಕ ವ್ಯವಸ್ಥೆಗೆ ನಷ್ಟವಾಗದಂತೆ ಬಡವರ ಖಾತೆಗೆ ಹೇಗೆ ಹಣ ಹಾಕಬಹುದು ಎಂದು ಅವರಲ್ಲಿ ಕೇಳಿದೆ.‌ ಕಾಂಗ್ರೆಸ್ ತೆಗೆದುಕೊಂಡ ಈ ನಿರ್ಣಯ ಒಂದು ಐತಿಹಾಸಿಕ ನಿರ್ಣಯವಾಗಿದೆ ಎಂದರು.

ಜನರ ಖಾತೆಗೆ ಮೋದಿ ಸ್ನೇಹಿತ ಅಂಬಾನಿ ಅವರಿಂದಲೇ ಹಣ ಬರುವಂತೆ ಮಾಡಲಾಗುವುದು.‌ ನೂರಕ್ಕೆ ನೂರು ಚೌಕಿದಾರ್ ಚೋರ್. ನೀರವ್ ಮೋದಿ, ಲಲಿತ್ ಮೋದಿ, ವಿಜಯ್ ಮಲ್ಯ, ಅಂಬಾನಿ, ಮೋದಿ ಸೇರಿದಂತೆ ಇವರದ್ದೆಲ್ಲ ಕಳ್ಳರ ಗುಂಪು.‌ ಇವರೆಲ್ಲ ಕಳ್ಳರ ಗುಂಪಿನ ಸದಸ್ಯರು. ದೇಶದ ಕಾರ್ಮಿಕರ, ಬಡವರ ಹಣವನ್ನು ಕದ್ದು ತಮ್ಮ ಗಂಪಿನ ಸದಸ್ಯರಿಗೆ ಮೋದಿ ನೀಡಿದ್ದಾರೆ ಎಂದು ಟೀಕೆ ಮಾಡಿದ್ದಾರೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕನ್ನಡ ಮಾತನಾಡಿದ್ದಕ್ಕೆ ಉಪನ್ಯಾಸಕನನ್ನು ಕೆಲಸದಿಂದ ಕಿತ್ತು ಹಾಕಿದ ಆರ್ ವಿ ಕಾಲೇಜು

Mangaluru Rain: ತಗ್ಗು ಪ್ರದೇಶಗಳು ಜಲಾವೃತ, ರಸ್ತೆಯಲ್ಲಿ ನಡೆಯಲು ಪರದಾಡಿದ ಜನರು, Video

ಏರ್‌ ಇಂಡಿಯಾ ವಿಮಾನ ದುರಂತ: ಕೊನೆಯ ಕ್ಷಣದ ವಿಡಿಯೋ ಮಾಡಿದ ಬಾಲಕನೇ ಪ್ರಮುಖ ಸಾಕ್ಷಿ

ಏರ್‌ ಇಂಡಿಯಾ ವಿಮಾನ ದುರಂತ: ಕೇಂದ್ರದಿಂದ ಪರಿಹಾರಕ್ಕೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ

ಪದ್ಮಶ್ರೀ ಸತ್ಯನಾರಾಯಣ ಬೇಲೇರಿಯ ಕೃಷಿ ಸಾಧನೆ ಕೇರಳ ಪಠ್ಯ ಪುಸ್ತಕದಲ್ಲಿ

ಮುಂದಿನ ಸುದ್ದಿ
Show comments