Webdunia - Bharat's app for daily news and videos

Install App

ದೇವೇಗೌಡ್ರ ಮನೆದೇವ್ರ ಮೇಲೆ ಐಟಿ ದಾಳಿ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ಬ್ರೇಕಿಂಗ್

Webdunia
ಶನಿವಾರ, 13 ಏಪ್ರಿಲ್ 2019 (16:57 IST)
ಹಾಸನದಲ್ಲಿ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರ ಕುಲದೇವರ ದೇವಾಲಯ ಹಾಗೂ ಅರ್ಚಕರ ಮೇಲೆ ನಡೆದಿದೆ ಎನ್ನಲಾದ ಐಟಿ ದಾಳಿ ಪ್ರಕರಣ ಹೊಸ ತಿರುವು ಪಡೆದುಕೊಂಡಿದೆ.

ಹೊಳೆನರಸೀಪುರ ತಾಲೂಕು ಹರದನಹಳ್ಳಿ ದೇವಾಲಯ ಮತ್ತು ಅರ್ಚಕರ ಮನೆ ಮೇಲೆ ಅಧಿಕಾರಿಗಳ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗ ಪೊಲೀಸರಿಗೆ ಅರ್ಚಕ ಪ್ರಕಾಶ್ ಮತ್ತು ರೇವಣ್ಣ ದೂರು ನೀಡಿದ್ದಾರೆ.

ಅಪರಿಚಿತರ ವಿರುದ್ಧ ಹೊಳೆನರಸೀಪುರ ನಗರ ಠಾಣೆಯಲ್ಲಿ ದೂರು ದಾಖಲಾಗಿದೆ. ಎಲೆಕ್ಷನ್ ಆಫೀಸರ್ಸ್ ಎಂದು ಮನೆಯಲ್ಲಿ ಶೋಧ ನಡೆಸಿದ್ದ ಇಬ್ಬರು ಅಪರಿಚಿತರು, ಮೊಬೈಲ್ ಸಹ ಕಸಿದುಕೊಂಡಿದ್ದರು. ಅವರ ಪತ್ತೆಗೆ ಪೊಲೀಸರಿಗೆ ದೂರು ನೀಡಿದ್ದಾರೆ ಅರ್ಚಕರಾದ ಪ್ರಕಾಶ್ ಮತ್ತು ರೇವಣ್ಣ.

ಪ್ರಕಾಶ್ ಮತ್ತು ರೇವಣ್ಣ ,ಈಶ್ವರ ದೇಗುಲದ ಅರ್ಚಕರಾಗಿದ್ದಾರೆ. ನಿನ್ನೆ ಹತ್ತು ಗಂಟೆಗೆ ಹರದನಹಳ್ಳಿಯಲ್ಲಿ ಅರ್ಚಕರ ಮನೆಗಳು, ದೇಗುಲದಲ್ಲಿ ಪರಿಶೀಲನೆ ನಡೆಸಿದ್ದ ಇಬ್ಬರು ಅಪರಿಚಿತರಲ್ಲಿ ಓರ್ವ ಹಿಂದಿ ಮತ್ತು ಮತ್ತೋರ್ವ ಕನ್ನಡದಲ್ಲಿ ಮಾತಾಡಿದ್ದಾರೆ.

ಆ ಇಬ್ಬರು ಅಪರಿಚಿತರ ವಿರುದ್ಧ ಪೊಲೀಸ್ ಠಾಣೆಗೆ ದೂರು ನೀಡಲಾಗಿದೆ. ಹರದನಹಳ್ಳಿ, ಮಾಜಿ ಪ್ರಧಾನಿ
ಹೆಚ್ಡಿ ದೇವೇಗೌಡರ ಹುಟ್ಟೂರಾಗಿದೆ. ಅಲ್ಲಿರುವ ಈಶ್ವರ, ದೇವೇಗೌಡರ ಮನೆ ದೇವರಾಗಿದ್ದಾರೆ. ಅಪರಿಚಿತ ಇಬ್ಬರು ಮನೆ , ಶೋಧಿಸಿದ್ದನ್ನು ಕಂಡು ಐಟಿ ಅಧಿಕಾರಿಗಳೆಂದು ಕಲ್ಪಿಸಲಾಗಿತ್ತು. ಆ ಇಬ್ಬರು ಯಾವ ಇಲಾಖೆಯವರು, ಅವರ ವಿಳಾಸ ಏನೆಂಬುದು ಇನ್ನೂ ಗೊತ್ತಾಗಿಲ್ಲ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಆನೆ ಜತೆ ಸೆಲ್ಪಿ ವಿಡಿಯೋ ವೈರಲ್, ಇನ್ಮುಂದೆ ಈ ಥರ ಮಾಡುವವರ ವಿರುದ್ಧ ಕ್ರಮಕ್ಕೆ ಈಶ್ವರ್ ಖಂಡ್ರೆ ಸೂಚನೆ

ಪಾಕ್ ವಿರುದ್ಧ ಅದು ಸರಿಯಾದ ಪ್ರತೀಕಾರ: ಆಪರೇಷನ್ ಸಿಂಧೂರ್‌ನ್ನು ಶ್ಲಾಘಿಸಿದ ಜಪಾನಿನ ಕಾರ್ಯತಂತ್ರ ತಜ್ಞ

IPL 2025: ಅನುಚಿತ ವರ್ತನೆಗೆ ಡೆಲ್ಲಿ ವೇಗದ ಬೌಲರ್‌ ಮುಕೇಶ್‌ ಕುಮಾರ್‌ಗೆ ಬಿತ್ತು ದಂಡ

ಜಮ್ಮು ಕಾಶ್ಮೀರದ ಭಯೋತ್ಪಾದಕರೊಂದಿಗಿನ ಗುಂಡಿನ ಚಕಮಕಿಯಲ್ಲಿ ಯೋಧ ಹುತಾತ್ಮ

ರಾಮನಗರ ಇನ್ಮುಂದೆ ಬೆಂಗಳೂರು ದಕ್ಷಿಣ ಜಿಲ್ಲೆ: ಡಿಸಿಎಂ ಡಿಕೆ ಶಿವಕುಮಾರ್

ಮುಂದಿನ ಸುದ್ದಿ
Show comments