Publish Date: Tue, 02 Apr 2019 (17:18 IST)
Updated Date: Tue, 02 Apr 2019 (17:21 IST)
ಸಿಎಂ ಆಗಮನ ಹಿನ್ನೆಲೆಯಲ್ಲಿ ಶಾಂತಿಯುತ ಹೋರಾಟ ನಿರತರ ಮೇಲೆ ಪೊಲೀಸರು ದೌರ್ಜನ್ಯ ನಡೆಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ.
ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ ನಾಮಪತ್ರ ಸಲ್ಲಿಸುತ್ತಿರುವ ಹಿನ್ನಲೆಯಲ್ಲಿ ಸಿಎಂ ಆಗಮಿಸುತ್ತಾರೆ ಎನ್ನುವ ಸುದ್ದಿ ಬಂದಿತು. ಸಿಎಂ ಬರುತ್ತಿರುವ ಹಿನ್ನಲೆಯಲ್ಲಿ ಕಾರಂಜಾ ಮುಳಗಡೆ ಸಂತ್ರಸ್ಥರ ಮೇಲೆ ಪೊಲೀಸರು ದಬ್ಬಾಳಿಕೆ ನಡೆಸಿದ್ದಾರೆ ಎನ್ನಲಾಗಿದೆ.
ಡಿಸಿ ಕಚೇರಿ ಎದುರು ಶಾಂತಿಯುತ ಹೋರಾಟ ಮಾಡುತ್ತಿರುವ ರೈತರ ಮೇಲೆ ದರ್ಪ ತೋರಲಾಗಿದೆ. ಪ್ರತಿಭಟನೆ ಮಾಡದಂತೆ ಕಾರಂಜಾ ಮುಳುಗಡೆ ಸಂತ್ರಸ್ಥರಿಗೆ ಪೊಲೀಸರು ತಾಕೀತು ಮಾಡಿದ್ದಾರೆ. ನ್ಯಾಯಯುತ ಹೋರಾಟ ಮಾಡುತ್ತಿರುವ ಸಂತ್ರಸ್ಥರ ಮೇಲೆ ಪೊಲೀಸರ ದರ್ಪಕ್ಕೆ ವ್ಯಾಪಕ ಖಂಡನೆ ವ್ಯಕ್ತವಾಗಿದೆ.