Webdunia - Bharat's app for daily news and videos

Install App

ಈಶ್ವರಪ್ಪಗೆ ನಿಂಬೆ ಹಣ್ಣು ಕೊಡ್ತೀನಿ ಎಂದ ಸಚಿವ ಯಾರು?

Webdunia
ಶುಕ್ರವಾರ, 12 ಏಪ್ರಿಲ್ 2019 (20:02 IST)
ಬಿ.ಎಸ್.ಯಡಿಯೂರಪ್ಪ ಅಂಡ್ ಡ್ರಾಮಾ ಕಂಪನಿ ಈ ಬಾರಿ ಕರ್ನಾಟಕದಲ್ಲಿ ಕ್ಲೋಸ್ ಆಗಲಿದೆ. ಹೀಗಂತ ಸಚಿವ ರೇವಣ್ಣ ಟೀಕೆ ಮಾಡಿದ್ದಾರೆ.

ಕೆ.ಎಸ್.ಈಶ್ವರಪ್ಪ ಲಘು ಹೇಳಿಕೆ ವಿಚಾರಕ್ಕೆ ಪ್ರತಿಕ್ರಿಯಿಸಿರುವ ಸಚಿವ ಹೆಚ್.ಡಿ.ರೇವಣ್ಣ, ಅವನಿಗೆ ಏನಾಗಿದೆಯೋ ಗೊತ್ತಿಲ್ಲ, ಒಂದು ಒಳ್ಳೇ ನಿಂಬೆ ಹಣ್ಣು ಕೊಡೋಣ ಎಂದು ಲೇವಡಿ ಮಾಡಿದ್ದಾರೆ.
ಹಾಸನದಲ್ಲಿ ಸಚಿವ ಹೆಚ್.ಡಿ.ರೇವಣ್ಣ ಹೇಳಿಕೆ ನೀಡಿದ್ದಾರೆ.

ಬಿಜೆಪಿ ಅಭ್ಯರ್ಥಿ ನಾನು ರೌಡಿ ಎಂದು ಹೇಳಿಕೊಂಡಿದ್ದಾರೆ. ಅವರನ್ನು ಮನೆಗೆ ಕಳಿಸಲು ಜನ ತೀರ್ಮಾನ ಮಾಡಿದ್ದಾರೆ ಎಂದರು.
ದೇವೇಗೌಡರು ದಲಿತ ಸಮಾಜಕ್ಕೆ ಸಾಕಷ್ಟು‌ ಕೊಡುಗೆ ನೀಡಿದ್ದಾರೆ. ಕಾಂಗ್ರೆಸ್ ಗೆ ಟೋಪಿ ಹಾಕಿ ಹೋಗಿರೋ ವ್ಯಕ್ತಿಯಿಂದ ನಾನು ದಲಿತರ ಬಗ್ಗೆ ತಿಳಿಯಬೇಕಿಲ್ಲ ಎಂದು ಕಿಡಿಕಾರಿದರು.

ದೇವೇಗೌಡರ ಕುಟುಂಬಕ್ಕೆ ಯಾರೂ ಏನೂ ಮಾಡಲು ಆಗಲ್ಲ. ರಾಮನ ಇಟ್ಟಿಗೆ ಕಲೆಕ್ಟ್ ಮಾಡಿ‌ ಈಶ್ವರಪ್ಪ, ಶೆಟ್ಟರ್ ಮನೆ ಕಟ್ಟಿ ಆಯ್ತು ಎಂದು ಛೇಡಿಸಿದ್ರು.

ಲೋಕಸಭೆ ಕ್ಷೇತ್ರ ವ್ಯಾಪ್ತಿಯ 8 ತಾಲೂಕುಗಳಲ್ಲೂ ಪ್ರಜ್ವಲ್ ಗೆ ಅತ್ಯಧಿಕ ಮತ‌ ಸಿಗಲಿವೆ. ಮಂಡ್ಯ, ತುಮಕೂರಲ್ಲೂ ನಾವೇ ಗೆಲ್ಲುತ್ತೇವೆ ಎಂದು ಹನುಮಂತಪುರದಲ್ಲಿ ಪುತ್ರನ ಪರ ಪ್ರಚಾರ ನಡೆಸಿ‌ ರೇವಣ್ಣ ಹೇಳಿದ್ರು.

 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments