ಮೋದಿ ಪರ ಪ್ರಚಾರಕ್ಕೆ ಸಾಪ್ಟ್ ವೇರ್ ಉದ್ಯೋಗಿ ಮಾಡಿದ್ದೇನು?

Webdunia
ಬುಧವಾರ, 17 ಏಪ್ರಿಲ್ 2019 (15:49 IST)
ದಿನದಿಂದ ದಿನಕ್ಕೆ ಪ್ರಧಾನಿ ಮೋದಿಗೆ ಅಭಿಮಾನಿಗಳ ಸಂಖ್ಯೆ ಹೆಚ್ಚುತ್ತಲೆ ಇದ್ದಾರೆ. ಸಾಫ್ಟವೇರ್ ಕಂಪನಿಯಲ್ಲಿ ಕೆಲಸ ಮಾಡುವ ಯುವಕ 20 ದಿನ ರಜೆ ಹಾಕಿ ಬಿಜೆಪಿ ಪರ ಪ್ರಚಾರ ಶುರುವಿಟ್ಟುಕೊಂಡಿದ್ದಾನೆ.

ಬೆಂಗಳೂರಿನ ಯುಟಿ ಇನ್ಫೋಸೊಲುಷನ್ ಕಂಪನಿಯಲ್ಲಿ ಸಾಫ್ಟವೇರ್ ಕಂಪನಿಯಲ್ಲಿ ಕೆಲಸ ಮಾಡ್ತಾ ರಾಜು ರೆಡ್ಡಿ ಎಂಬ ವ್ಯಕ್ತಿ ಪ್ರಧಾನಿ ಮೋದಿ ಪರ ಪ್ರಚಾರ ಮಾಡಲು ಇಪ್ಪತ್ತು ದಿನ ರಜೆ ಹಾಕಿ ಬೀದರ್ ಗೆ ಬಂದಿದ್ದಾರೆ. ಮೂಲತಃ ಬೀದರ್ ಜಿಲ್ಲೆಯ ಹುಮ್ನಾಬಾದ್ ತಾಲೂಕಿನ ವಿಠಲಾಪುರದವರಾದ ರಾಜು ರೆಡ್ಡಿ, ಮೋದಿಯನ್ನ ಮತ್ತೊಮ್ಮೆ ಪ್ರಧಾನಿ ಮಾಡಲು ತಮ್ಮ ಕಂಪನಿ ಕೆಲಸಕ್ಕೆ 20 ದಿನಗಳ ಕಾಲ ರಜೆ ಹಾಕಿ ಫೀಲ್ಡ್ ಗೆ ಇಳಿದಿದ್ದಾರೆ.

ಜಿಲ್ಲೆಯಲ್ಲಿ ಈಗಾಗಲೇ ಬೈಕ್ ರ್ಯಾಲಿ ಮಾಡಿ ತಮ್ಮ ಸ್ವಂತ ಖರ್ಚಿನಲ್ಲಿ ಮನೆ ಮನೆಗೆ ತೆರಳಿ ಪ್ರಚಾರ ನಡೆಸಿದ್ದಾರೆ. ಅಲ್ಲದೆ ಸಾಮಾಜಿಕ ಜಾಲತಾಣದ ಮೂಲಕ ಕೇಂದ್ರದಲ್ಲಿ ಮತ್ತೊಮ್ಮೆ ಮೋದಿಯನ್ನ ಪ್ರಧಾನಿಯನ್ನ ಮಾಡಬೇಕು ಅದಕ್ಕೆ ಭಗವಂತ ಖೂಬಾ ಅವರಿಗೆ ಮತ ಚಲಾಯಿಸಿ ಅಂತ  ಪ್ರಚಾರ ನಡೆಸಿದ್ದಾರೆ.

ಕಳೆದ ಎರಡು ದಿನಗಳ ಹಿಂದೆ ಮಂಗಳೂರಿನ ಸುಧಿಂದರ್ ಎಂಬುವರು ಪ್ರಧಾನಿ ಪರ ಪ್ರಚಾರ ಮಾಡಲು ಆಸ್ಟ್ರೇಲಿಯಾದಲ್ಲಿನ ತಮ್ಮ ಉದ್ಯೋಗಕ್ಕೆ ರಾಜೀನಾಮೆ ನೀಡಿ ಬಂದಿದ್ದರು. ಅದರ ಬೆನ್ನಲ್ಲೆ ಬೀದರ್ ನ ರಾಜು ರೆಡ್ಡಿ ಮೋದಿ ಪರ ಪ್ರಚಾರಕ್ಕೆ ಇಳಿದಿದ್ದು ವಿಶೇಷವಾಗಿದೆ. ಇದು ಬೀದರ್ ಜನತೆಯ ಮೇಲೆ ಎಷ್ಟರ ಮಟ್ಟಿಗೆ ಪರಿಣಾಮ ಬೀರುತ್ತೆ ಅನ್ನೋದು ಕುತೂಹಲಕ್ಕೆ ಕಾರಣವಾಗಿದೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪಹಲ್ಗಾಮ್‌ ಭಯೋತ್ಪಾದನಾ ದಾಳಿ: ಎನ್‌ಐಎ ತನಿಖೆಯಲ್ಲಿ ಮಹತ್ವದ ಬೆಳವಣಿಗೆ

ಪಾರ್ಟಿ ಮಾಡುತ್ತಿದ್ದಾಗ ಪೊಲೀಸರ ಎಂಟ್ರಿ, ಹೆದರಿ ನಾಲ್ಕನೇ ಫ್ಲೋರ್‌ನಿಂದ ಹಾರಿದ್ರಾ ಯುವತಿ

ಮಹಿಳೆಯರಿರುವುದು ಗಂಡನ ಜತೆ ಮಲಗುವುದಕ್ಕೆ: ಕೇರಳ ಸಿಪಿಎಂ ಮುಖಂಡನ ವಿವಾದಾತ್ಮಕ ಹೇಳಿಕೆ

ಮೊಟ್ಟೆ ಪ್ರಿಯರೇ ಹುಷಾರ್ : ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಶಾಕಿಂಗ್ ಮಾಹಿತಿ

ಕೌಟುಂಬಿಕ ಕಲಹಕ್ಕೆ ಪತ್ನಿಯನ್ನು ಮುಗಿಸಿ, ತಾನೂ ಆತ್ಮಹತ್ಯೆಗೆ ಶರಣಾದ ಪತಿ

ಮುಂದಿನ ಸುದ್ದಿ
Show comments