ಸಿಎಂ ಮತ್ತೆ ಕಣ್ಣೀರು ಹಾಕಿದ್ದು ಏಕೆ?

Webdunia
ಸೋಮವಾರ, 15 ಏಪ್ರಿಲ್ 2019 (18:13 IST)
ಚುನಾವಣೆ ಹೊಸ್ತಿಲಲ್ಲಿ ಅದೂ ಪ್ರಚಾರದ ವೇಳೆ ಭಾವುಕರಾದ ಸಿಎಂ ಕುಮಾರಸ್ವಾಮಿ ಮತ್ತೆ ಕಣ್ಣೀರು ಹಾಕಿದ್ದಾರೆ.

ಕೆಆರ್ ಪೇಟೆ ಪ್ರಚಾರ ಸಭೆಯಲ್ಲಿ ಸಿಎಂ ಕಣ್ಣೀರು ಹಾಕಿದ್ದಾರೆ ಮತ್ತು ಅದಕ್ಕೆ ಸ್ಪಷ್ಟನೆಯನ್ನೂ ಕೊಟ್ಟಿದ್ದಾರೆ.

ನಾನು ಕಣ್ಣೀರು ಹಾಕೋದನ್ನ ನಿಲ್ಲಿಸಿದ್ದೆ. ಇವತ್ತು ಎಚ್. ವಿಶ್ವನಾಥ್ ಅವ್ರು ಕೆಲವು ಮಾತನ್ನ ಹೇಳಿದ್ರು. ಯಾರು ನಿನ್ನ ಕಷ್ಟ ಅರ್ಥ ಮಾಡಿಕೊಳ್ಳಲ್ಲ, ನಿನ್ನ ಪರಿಸ್ಥಿತಿ ಯೋಚನೆ ಮಾಡಲ್ಲ. ಅದು ನಿನ್ನ ಆರೋಗ್ಯದ ಮೇಲೆ ಯಾವ ಪರಿಣಾಮ‌ ಬೀರಿದೆ ಅನ್ನೋದನ್ನ ಯೋಚನೆ ಮಾಡಲ್ಲ ಎಂದರು.

ಆ ಮಾತುಗಳು ನನ್ನ ಮನಸ್ಸಿನ ಮೇಲೆ ಪರಿಣಾಮ ಬೀರಿದ್ವು. ನೋವು ತಡಯಲಿಕ್ಕೆ ಆಗದೇ ನಾನು ಕಣ್ಣೀರು ಹಾಕಿದ್ದೇನೆ ಎಂದರು.

ನಾನು ಆಕಸ್ಮಿಕವಾಗಿ ರಾಜಕೀಯಕ್ಕೆ ಬಂದವನು. ನಾನು ಶಿಕ್ಷಣ ಮುಗಿಸಿ ಸಿನಿಮಾ ವಿತರಕನಾಗಿ ನನ್ನ ಜೀವನ ನಡೆಸುತ್ತಿದ್ದೆ. ಅಚಾನಕ್ ಆಗಿ ರಾಜಕೀಯಕ್ಕೆ ಬಂದೆ. ಅಲ್ಲಿಂದ ಇಲ್ಲಿಯವರೆಗೇ ನನ್ನ ಮನೆ ಬಳಿ ಕಷ್ಟ ಹೇಳಿಕೊಂಡು ಬಂದವರ ಜಾತಿ ಧರ್ಮ ಕೇಳದೆ ಸಹಾಯ ಮಾಡಿದ್ದೇನೆ ಅಂತ ಸಿಎಂ ಹೇಳಿದ್ರು.

ಸಿನಿಮಾದವು ಬಂದು ಮಂಡ್ಯ ಸ್ವಾಭಿಮಾನ ಅಂತ ಮಾತಾಡ್ತವೆ. ಅವು ಇವು ಎಂದು ಯಶ್, ದರ್ಶನ್ ವಿರುದ್ಧ ಹರಿಹಾಯ್ದ ಸಿಎಂ, ರೈತರು ಆತ್ಮಹತ್ಯೆ ಮಾಡಿಕೊಂಡು ತಾಯಂದಿರು ಕಣ್ಣೀರು ಹಾಕುವಾಗ ಯಾವ ನಟರು ಬಂದಿದ್ರು..? ಇವತ್ತು ಮಂಡ್ಯ ಸ್ವಾಭಿಮಾನ ಎನ್ನುತ್ತಿದ್ದಾರಲ್ಲ ಅಂತ ಟೀಕೆ ಮಾಡಿದ್ರು.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೊನೆಗೂ ಬಿಜೆಪಿಗೆ ಗುಡ್‌ ಬೈ ಹೇಳಿದ್ರಾ ಮಾಜಿ ಐಪಿಎಸ್‌ ಕೆ ಅಣ್ಣಾಮಲೈ, ಮುಂದಿನ ನಡೆಯೇನು

ಮಹಿಳೆಯರ ಮೇಲಿನ ಅಪರಾಧಗಳಲ್ಲಿ ಬೆಂಗಳೂರಿಗೆ ಎಷ್ಟನೇ ಸ್ಥಾನ ಗೊತ್ತಾ

ಮುಂಗಾರು ಪೂರ್ವ ಮಳೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ವ್ಯತ್ಯಯ

ಒಂದೂವರೆ ವರ್ಷದ ಮಗುವನ್ನು ಕೊಂದ ಪಾಪಿಗೆ ಹನಿ ನೀರೂ ಕೊಡದೇ ನರಕ ತೋರಿಸಿದ ಉತ್ತರ ಪ್ರದೇಶ ಪೊಲೀಸರು Video

ಸಚಿವ ಸ್ಥಾನ ಸಿಗುತ್ತಿದೆ ಎಂದು ನಿರೀಕ್ಷೆಯಲ್ಲಿರುವವರಿಗೆ ಶಾಕ್ ಕೊಟ್ಟ ಕಾಂಗ್ರೆಸ್ ಹೈಕಮಾಂಡ್

ಮುಂದಿನ ಸುದ್ದಿ
Show comments