ಸಿಎಂ ಮತ್ತೆ ಕಣ್ಣೀರು ಹಾಕಿದ್ದು ಏಕೆ?

Webdunia
ಸೋಮವಾರ, 15 ಏಪ್ರಿಲ್ 2019 (18:13 IST)
ಚುನಾವಣೆ ಹೊಸ್ತಿಲಲ್ಲಿ ಅದೂ ಪ್ರಚಾರದ ವೇಳೆ ಭಾವುಕರಾದ ಸಿಎಂ ಕುಮಾರಸ್ವಾಮಿ ಮತ್ತೆ ಕಣ್ಣೀರು ಹಾಕಿದ್ದಾರೆ.

ಕೆಆರ್ ಪೇಟೆ ಪ್ರಚಾರ ಸಭೆಯಲ್ಲಿ ಸಿಎಂ ಕಣ್ಣೀರು ಹಾಕಿದ್ದಾರೆ ಮತ್ತು ಅದಕ್ಕೆ ಸ್ಪಷ್ಟನೆಯನ್ನೂ ಕೊಟ್ಟಿದ್ದಾರೆ.

ನಾನು ಕಣ್ಣೀರು ಹಾಕೋದನ್ನ ನಿಲ್ಲಿಸಿದ್ದೆ. ಇವತ್ತು ಎಚ್. ವಿಶ್ವನಾಥ್ ಅವ್ರು ಕೆಲವು ಮಾತನ್ನ ಹೇಳಿದ್ರು. ಯಾರು ನಿನ್ನ ಕಷ್ಟ ಅರ್ಥ ಮಾಡಿಕೊಳ್ಳಲ್ಲ, ನಿನ್ನ ಪರಿಸ್ಥಿತಿ ಯೋಚನೆ ಮಾಡಲ್ಲ. ಅದು ನಿನ್ನ ಆರೋಗ್ಯದ ಮೇಲೆ ಯಾವ ಪರಿಣಾಮ‌ ಬೀರಿದೆ ಅನ್ನೋದನ್ನ ಯೋಚನೆ ಮಾಡಲ್ಲ ಎಂದರು.

ಆ ಮಾತುಗಳು ನನ್ನ ಮನಸ್ಸಿನ ಮೇಲೆ ಪರಿಣಾಮ ಬೀರಿದ್ವು. ನೋವು ತಡಯಲಿಕ್ಕೆ ಆಗದೇ ನಾನು ಕಣ್ಣೀರು ಹಾಕಿದ್ದೇನೆ ಎಂದರು.

ನಾನು ಆಕಸ್ಮಿಕವಾಗಿ ರಾಜಕೀಯಕ್ಕೆ ಬಂದವನು. ನಾನು ಶಿಕ್ಷಣ ಮುಗಿಸಿ ಸಿನಿಮಾ ವಿತರಕನಾಗಿ ನನ್ನ ಜೀವನ ನಡೆಸುತ್ತಿದ್ದೆ. ಅಚಾನಕ್ ಆಗಿ ರಾಜಕೀಯಕ್ಕೆ ಬಂದೆ. ಅಲ್ಲಿಂದ ಇಲ್ಲಿಯವರೆಗೇ ನನ್ನ ಮನೆ ಬಳಿ ಕಷ್ಟ ಹೇಳಿಕೊಂಡು ಬಂದವರ ಜಾತಿ ಧರ್ಮ ಕೇಳದೆ ಸಹಾಯ ಮಾಡಿದ್ದೇನೆ ಅಂತ ಸಿಎಂ ಹೇಳಿದ್ರು.

ಸಿನಿಮಾದವು ಬಂದು ಮಂಡ್ಯ ಸ್ವಾಭಿಮಾನ ಅಂತ ಮಾತಾಡ್ತವೆ. ಅವು ಇವು ಎಂದು ಯಶ್, ದರ್ಶನ್ ವಿರುದ್ಧ ಹರಿಹಾಯ್ದ ಸಿಎಂ, ರೈತರು ಆತ್ಮಹತ್ಯೆ ಮಾಡಿಕೊಂಡು ತಾಯಂದಿರು ಕಣ್ಣೀರು ಹಾಕುವಾಗ ಯಾವ ನಟರು ಬಂದಿದ್ರು..? ಇವತ್ತು ಮಂಡ್ಯ ಸ್ವಾಭಿಮಾನ ಎನ್ನುತ್ತಿದ್ದಾರಲ್ಲ ಅಂತ ಟೀಕೆ ಮಾಡಿದ್ರು.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಾಗರಹೊಳೆ, ಬಂಡೀಪುರ ಸಫಾರಿ, ಚಾರಣಕ್ಕೆ ಪ್ಲಾನ್ ಮಾಡಿದ್ದವರಿಗೆ ಬಿಗ್ ಶಾಕ್‌

ಅಕ್ರಮ ಹಣ ವರ್ಗಾವಣೆ ಪ್ರಕರಣ: ಶಾಸಕ ಸತೀಶ್ ಸೈಲ್‌ಗೆ ಮತ್ತೇ ಜೈಲೇ ಗತಿ

ಕೇಂದ್ರದಿಂದಾಗುವ ಪರಿಹಾರಕ್ಕೆ ರಾಜ್ಯ ಸರ್ಕಾರವನ್ನು ಒತ್ತಾಯಿಸಿದ್ರೆ ಹೇಗೆ

ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ಬಾಲಕಿ ಟೀ ಶರ್ಟ್‌ ಒಳಗಡೆ ಕೈ ಹಾಕಿ ವ್ಯಕ್ತಿಯಿಂದ ವಿಕೃತಿ, video

ಮನೆ ಬಿಟ್ಟು ಹೋದ ಪತ್ನಿ, ಮಗಳನ್ನು ಕೊಂದು, ವ್ಯಕ್ತಿ ಮಾಡಿದ್ದೇನು ಗೊತ್ತಾ

ಮುಂದಿನ ಸುದ್ದಿ
Show comments