Webdunia - Bharat's app for daily news and videos

Install App

ಎನ್‌ಡಿಟಿವಿ ಸಮೀಕ್ಷೆ: ಕರ್ನಾಟಕದಲ್ಲಿ ಬಿಜೆಪಿಗೆ ಭರ್ಜರಿ ಜಯ

Webdunia
ಶುಕ್ರವಾರ, 14 ಮಾರ್ಚ್ 2014 (17:57 IST)
PR
ಕಳೆದ ಬಾರಿ ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿಗೆ ಕಾಂಗ್ರೆಸ್ ಮಣ್ಣುಮುಕ್ಕಿಸಿದ್ದರೆ, ಈ ಬಾರಿ ಲೋಕಸಭೆ ಚುನಾವಣೆಯಲ್ಲಿ ಮತದಾರರು ಬಿಜೆಪಿಯತ್ತ ಒಲವು ತೋರಿದ್ದಾರೆ. ಬಿ.ಎಸ್. ಯಡಿಯೂರಪ್ಪ ಮತ್ತು ಶ್ರೀರಾಮುಲು ಅವರನ್ನು ಮತ್ತೆ ಬಿಜೆಪಿಗೆ ತರುವ ಪಕ್ಷದ ನಿರ್ಧಾರ ಅದಕ್ಕೆ ಪ್ಲಸ್ ಪಾಯಿಂಟ್ ಆಗಿ ಕೆಲಸ ಮಾಡಿದೆ. ಸಿದ್ದರಾಮಯ್ಯ ಜನಪ್ರಿಯ ಮುಖ್ಯಮಂತ್ರಿಯಾಗಿದ್ದರೂ ಲೋಕಸಭೆ ಚುನಾವಣೆಯಲ್ಲಿ ಪಕ್ಷಕ್ಕೆ ಯಾವುದೇ ಲಾಭವಿಲ್ಲ ಎಂದು ಎನ್‌ಡಿಟಿವಿ ಚುನಾವಣೆ ಪೂರ್ವ ಸಮೀಕ್ಷೆ ತೋರಿಸಿದೆ. ಕರ್ನಾಟಕದಲ್ಲಿ ಒಟ್ಟು 28 ಸೀಟುಗಳಿದ್ದು, ಬಿಜೆಪಿ 20 ಸ್ಥಾನಗಳನ್ನು ಗಳಿಸುತ್ತದೆಂದು ಸಮೀಕ್ಷೆ ತಿಳಿಸಿದೆ.

ಕಾಂಗ್ರೆಸ್ ಕೇವಲ 6 ಸ್ಥಾನಗಳಿಗೆ ತೃಪ್ತಿಪಟ್ಟುಕೊಳ್ಳಬೇಕಿದೆ. ಉಳಿದ ಪಕ್ಷಗಳಿಗೆ ಎರಡು ಸ್ಥಾನಗಳು ಸಿಗಲಿದೆ. ಈ ಬಾರಿ ನರೇಂದ್ರ ಮೋದಿ ಅಲೆ ದೇಶಾದ್ಯಂತ ಬೀಸುತ್ತಿರುವುದು ಈ ಫಲಿತಾಂಶಕ್ಕೆ ಕಾರಣವಿರಬಹುದು ಎಂದು ವಿಶ್ಲೇಷಿಸಲಾಗಿದೆ. ಕರ್ನಾಟಕದಲ್ಲಿ ಕಾಂಗ್ರೆಸ್ ಜನಪ್ರಿಯತೆಯೇನೂ ಕುಸಿದಿಲ್ಲ. ಆದರೆ ಕೇಂದ್ರದಲ್ಲಿ ಎನ್‌ಡಿಎ ಸರ್ಕಾರವನ್ನು ತರುವ ಉದ್ದೇಶದಿಂದ ಬಿಜೆಪಿಯತ್ತ ಮತದಾರರು ಒಲವು ತೋರುತ್ತಿರಬಹುದು ಎಂದು ಭಾವಿಸಲಾಗಿದೆ.

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments