Select Your Language

Notifications

webdunia
webdunia
webdunia
webdunia

ಲೋಕಸಭೆಯಲ್ಲಿ 20ಕ್ಕೂ ಹೆಚ್ಚು ಸ್ಥಾನ ಗೆಲ್ಲುವುದು ಬಿಜೆಪಿ ಗುರಿ

ಲೋಕಸಭೆಯಲ್ಲಿ 20ಕ್ಕೂ ಹೆಚ್ಚು ಸ್ಥಾನ ಗೆಲ್ಲುವುದು ಬಿಜೆಪಿ ಗುರಿ
, ಶುಕ್ರವಾರ, 14 ಮಾರ್ಚ್ 2014 (15:18 IST)
PR
ದೆಹಲಿಯಲ್ಲಿ ಬಿಜೆಪಿ ಕೋರ್ ಕಮಿಟಿ ಸಭೆ ಅಂತ್ಯಗೊಂಡಿದ್ದು, ವಾರದೊಳಗೆ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡುವುದಾಗಿ ಸಭೆ ಬಳಿಕ ಸಂಸದ ಅನಂತಕುಮಾರ್ ಹೇಳಿದ್ದಾರೆ. 20ಕ್ಕೂ ಹೆಚ್ಚು ಸೀಟು ಗೆಲ್ಲುವುದು ನಮ್ಮ ಗುರಿಯಾಗಿದ್ದು, ಮೋದಿ ರ‌್ಯಾಲಿ ಬಗ್ಗೆ ಮತ್ತು ಸೋತವರಿಗೆ ಟಿಕೆಟ್ ನೀಡುವ ಬಗ್ಗೆ ಕೂಡ ಚರ್ಚೆ ನಡೆಯಿತು. ಈ ಬಗ್ಗೆ ವರಿಷ್ಠರ ನಿರ್ಧಾರ ಅಂತಿಮವಾಗಿದ್ದು, ದಾವಣಗೆರೆ, ಗುಲ್ಬರ್ಗಾ, ಮಂಗಳೂರು ಮತ್ತು ಹುಬ್ಬಳ್ಳಿಯಲ್ಲಿ ಮೋದಿ ಚುನಾವಣೆ ರ‌್ಯಾಲಿ ನಡೆಯಲಿದೆ ಎಂದು ಅನಂತಕುಮಾರ್ ಹೇಳಿದರು. ಸಂಸದ ಜಿ.ಎಸ್. ಬಸವರಾಜುಗೆ ಟಿಕೆಟ್ ನೀಡಿಕೆ ಬಗ್ಗೆ ಯಾವುದೇ ಚರ್ಚೆಯಾಗಿಲ್ಲ. ಬಸವರಾಜು ಬಿಜೆಪಿಯಿಂದ ಅಮಾನತಾಗಿದ್ದರು ಎಂದು ಪ್ರಹ್ಲಾದ್ ಜೋಷಿ ಹೇಳಿದರು.

ಈ ನಡುವೆ ಬಿಜೆಪಿ ಮುಖಂಡ ಯಡಿಯೂರಪ್ಪ ತಮ್ಮ ಆಪ್ತರ ಪರ ಬ್ಯಾಟಿಂಗ್ ಬೀಸಿದ್ದು, ಧನಂಜಯ್ ಕುಮಾರ್ ಮತ್ತು ಲೆಹರ್‌ಸಿಂಗ್ ಅವರನ್ನು ಬಿಜೆಪಿಗೆ ಸೇರ್ಪಡೆ ಮಾಡುವ ಯತ್ನ ಮಾಡಲಾಗಿದ್ದು, ರಾಷ್ಟ್ರೀಯ ನಾಯಕರು ಒಪ್ಪುವ ಸಾಧ್ಯತೆಯಿದೆ ಮತ್ತು ಎಲ್ಲರ ಒಪ್ಪಿಗೆ ಮೇರೆಗೆ ಚುನಾವಣೆಗೆ ಸ್ಪರ್ಧಿಸುವುದಾಗಿ ಹೇಳಿದರು.

Share this Story:

Follow Webdunia kannada