ಶಿವಮೊಗ್ಗ: ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ನಲ್ಲಿ ಅಸಮಾಧಾನ ಭುಗಿಲೆದ್ದಿದೆ. ಕುಮಾರ್ ಬಂಗಾರಪ್ಪ ಅವರಿಗೆ ಟಿಕೆಟ್ ನೀಡದಿರುವುದರಿಂದ ಅವರ ಬೆಂಬಲಿಗರ ಆಕ್ರೋಶ ಹೊರಬಿದ್ದಿದೆ. ಆದರೆ ಶಿವಮೊಗ್ಗ ಕ್ಷೇತ್ರದಿಂದ ಮಂಜುನಾಥ್ ಭಂಡಾರಿಗೆ ಟಿಕೆಟ್ ನೀಡಿರುವುದು ಅಸಮಾಧಾನ ಭುಗಿಲೇಳುವಂತೆ ಮಾಡಿದೆ. ಆದರೆ ನಿನ್ನೆ ಕಾಂಗ್ರೆಸ್ ಮಂಜುನಾಥ್ ಭಂಡಾರಿಗೆ ಟಿಕೆಟ್ ಘೋಷಣೆ ಮಾಡಿದೆ. ಬೆಂಬಲಿಗರು ಕುಮಾರ್ ಬಂಗಾರಪ್ಪ ಅವರಿಗೆ ಟಿಕೆಟ್ ನೀಡಲೇಬೇಕು ಎಂದು ಒತ್ತಾಯಿಸಿ ಕುಮಾರ್ ಬಂಗಾರಪ್ಪ ಅವರ ಬೆಂಬಲಿಗರು ಟೈರ್ಗಳಿಗೆ ಬೆಂಕಿ ಹಚ್ಚಿ ಪ್ರತಿಭಟನೆ ವ್ಯಕ್ತಪಡಿಸಿದರು.
ಕುಮಾರ್ ಬಂಗಾರಪ್ಪ ಬಿಟ್ಟರೆ ಯಾರೇ ಅಭ್ಯರ್ಥಿಯಾದರೂ ಗೆಲ್ಲುವುದು ಕಷ್ಟವಾಗುತ್ತದೆ ಎಂದು ಮಾಜಿ ಶಾಸಕ ನಾರಾಣಪ್ಪ ಪ್ರತಿಕ್ರಿಯಿಸಿದ್ದಾರೆ.