Webdunia - Bharat's app for daily news and videos

Install App

ಅರವಿಂದ್ ಕೇಜ್ರಿವಾಲ್ ಪಕ್ಷಕ್ಕೆ ಬೇಷರತ್ ಬೆಂಬಲವಿಲ್ಲ: ಉಲ್ಟಾ ಹೊಡೆದ ಕಾಂಗ್ರೆಸ್

Webdunia
ಸೋಮವಾರ, 23 ಡಿಸೆಂಬರ್ 2013 (14:43 IST)
PTI
15 ವರ್ಷಗಳ ಅವಧಿಗೆ ದೆಹಲಿ ಮುಖ್ಯಮಂತ್ರಿಯಾಗಿ ಅಧಿಕಾರ ಅನುಭವಿಸಿದ್ದ ಶೀಲಾ ದೀಕ್ಷಿತ್, ಆಮ್ ಆದ್ಮಿ ಪಕ್ಷಕ್ಕೆ ಬೇಷರತ್ತ್ ಬೆಂಬಲ ನೀಡಲು ಸಾಧ್ಯವಿಲ್ಲ ಎಂದು ಉಲ್ಟಾ ಹೊಡೆದಿದ್ದಾರೆ.

ಸರಕಾರ ರಚಿಸುವ ಆಮ್ ಆದ್ಮಿ ಪಾರ್ಟಿ ನಿರ್ಧಾರವನ್ನು ಸ್ವಾಗತಿಸಿದ ಅವರು, ಜನತೆಗೆ ನೀಡಿದ ಭರವಸೆಗಳನ್ನು ಈಡೇರಿಸಲಿ ಎಂದು ಹಾರೈಸಿದ್ದಾರೆ.

ಆಮ್ ಆದ್ಮಿ ಪಕ್ಷಕ್ಕೆ ಕಾಂಗ್ರೆಸ್ ಪಕ್ಷ ಹೊರಗಡೆಯಿಂದ ಬೆಂಬಲ ನೀಡುತ್ತದೆ. ಆದರೆ ಬೇಷರತ್ತು ಬೆಂಬಲವಲ್ಲ ಎಂದು ದೀಕ್ಷಿತ್ ಹೊಸ ರಾಗ ಎಳೆದಿದ್ದಾರೆ.

ಇದಕ್ಕಿಂತ ಮೊದಲು ಜನತೆಯ ಅಭಿಪ್ರಾಯಗಳಿಗೆ ಮನ್ನಣೆ ನೀಡಿದ ಆಮ್ ಆದ್ಮಿ ಪಕ್ಷದ ರಾಜಕೀಯ ವ್ಯವಹಾರಗಳ ಸಮಿತಿ, ಸರಕಾರ ರಚಿಸುವ ಅಂತಿಮ ನಿರ್ಧಾರ ಕೈಗೊಂಡಿದೆ.

ಕೇಜ್ರಿವಾಲ್ ನೇತೃತ್ವದ ಪಕ್ಷ ವಿದ್ಯುತ್ ದರದಲ್ಲಿ ಶೇ.50 ರಷ್ಟು ಕಡಿತ ಮತ್ತು ಪ್ರತಿ ಮನೆಗೆ 700 ಲೀಟರ್ ನೀರು ಸರಬರಾಜಿನಿಂತಹ ಜನತೆಯ ಬೇಡಿಕೆಗಳನ್ನು ಈಡೇರಿಸುವ ಬಗ್ಗೆ ಅನುಮಾನವಿದೆ ಎಂದು ಮಾಜಿ ಮುಖ್ಯಮಂತ್ರಿ ಶೀಲಾ ದೀಕ್ಷಿತ್ ತಿಳಿಸಿದ್ದಾರೆ.

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments