Webdunia - Bharat's app for daily news and videos

Install App

ಎ.ರಾಜಾ ಎದುರು ಸ್ಪರ್ಧಿಸಿದ್ದ ಬಿಜೆಪಿ ಅಭ್ಯರ್ಥಿಯ ನಾಮಪತ್ರ ತಿರಸ್ಕರಿಸಿದ ಚುನಾವಣಾ ಆಯೋಗ

Webdunia
ಮಂಗಳವಾರ, 8 ಏಪ್ರಿಲ್ 2014 (18:51 IST)
ಏಪ್ರಿಲ್ 24 ರಂದು ನಡೆಯಲಿರುವ ಚುನಾವಣೆಗಾಗಿ ಮಾಜಿ ಕೇಂದ್ರ ಸಚಿವರಾದ ಎ ರಾಜಾ, ದಯಾನಿಧಿ ಮಾರನ್ ಮತ್ತು ಅನ್ಬುಮಣಿ ರಾಮದೊಸ್‍ರವರನ್ನು ಒಳಗೊಂಡಂತೆ ಸಲ್ಲಿಸಲ್ಪಟ್ಟಿದ್ದ 1,000 ನಾಮಪತ್ರಗಳು ಪರಿಶೀಲನೆಗೊಳಪಟ್ಟು ಅರ್ಹತೆಯನ್ನು ಗಳಿಸಿವೆ.
PTI

ತನ್ನ ತಂದೆಯ ಭದ್ರಕೋಟೆ ಶಿವಗಂಗಾ ಕ್ಷೇತ್ರದಿಂದ ಚೊಚ್ಚಲ ಬಾರಿ ಕಣಕ್ಕಿಳಿದಿರುವ ಮಾಜಿ ಕೇಂದ್ರ ಸಚಿವ ಕೇಂದ್ರ ಸಚಿವ ಪಿ ಚಿದಂಬರಂ ಪುತ್ರ ಕಾರ್ತಿ, ಮಾಜಿ ಕೇಂದ್ರಸಚಿವ ಬಾಲು, ಎಮ್‌ಡಿಎಂಕೆ ಸಂಸ್ಥಾಪಕ ವೈಕೊ, ಬಿಜೆಪಿ ರಾಜ್ಯಾಧ್ಯಕ್ಷ ಪೊನ್ ರಾಧಾಕೃಷ್ಣನ್ ನಾಮ ನಿರ್ದೇಶನಗಳಿಗೆ ಚುನಾವಣಾ ಅಧಿಕಾರಿಗಳು ಒಪ್ಪಿಗೆ ಸೂಚಿಸಿದ್ದಾರೆ.

"1,318 ನಾಮಪತ್ರಗಳನ್ನು ಸಲ್ಲಿಸಲಾಗಿತ್ತು. ಸೋಮವಾರ ನಡೆದ ಪರಿಶೀಲನೆಯಲ್ಲಿ ಅದರಲ್ಲಿ 300ಕ್ಕಿಂತ ಹೆಚ್ಚು ನಾಮಪತ್ರಗಳು ತಿರಸ್ಕೃತಗೊಂಡಿವೆ. ಅವುಗಳಲ್ಲಿ ಹೆಚ್ಚಿನವು ಸ್ವತಂತ್ರ ಅಭ್ಯರ್ಥಿಗಳದ್ದು" ಎಂದು ಅಧಿಕಾರಿಗಳು ತಿಳಿಸಿದ್ದಾರೆ.

" ಬಿಜೆಪಿ ಅಭ್ಯರ್ಥಿ ಎಸ್ ಗುರುಮೂರ್ತಿ ಸಲ್ಲಿಸಿದ್ದ ನಾಮಪತ್ರವನ್ನು, ತಾಂತ್ರಿಕ ಆಧಾರದ ಮೇಲೆ ತಿರಸ್ಕರಿಸಲಾಯಿತು. ಅವರು ಫಾರ್ಮ್‌ನ್ನು ವಿಳಂಬವಾಗಿ ಸಲ್ಲಿಸಿದ್ದರು" ಎಂದು ಚುನಾವಣಾ ಅಧಿಕಾರಿ ಪಿ ಶಂಕರ್ ತಿಳಿಸಿದ್ದಾರೆ.

" ಆದರೆ, ಬಿಜೆಪಿ ಅಭ್ಯರ್ಥಿಗೆ ಪರಿಗಣನೆಗಾಗಿ ಮೇಲ್ಮನವಿ ಸಲ್ಲಿಸುವಂತೆ ಮನವಿ ಮಾಡಿ ಎಂದು ತಿಳಿಸಲಾಗಿದೆ ಮತ್ತು ಈ ಕುರಿತು ಮಂಗಳವಾರ ನಿರ್ಧಾರವಾಗಲಿದೆ" ಎಂದು ಶಂಕರ್ ಹೇಳಿದರು.

ವೆಬ್ದುನಿಯಾವನ್ನು ಓದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments