Select Your Language

Notifications

webdunia
webdunia
webdunia
webdunia

ಕೋಮುವಾದಿಗಳನ್ನು ದೂರವಿಡಲು ಕಾಂಗ್ರೆಸ್ ಪಕ್ಷಕ್ಕೆ ಬೆಂಬಲ ನೀಡಲು ಸಿದ್ದ: ಕರುಣಾನಿಧಿ

ಕೋಮುವಾದಿಗಳನ್ನು ದೂರವಿಡಲು ಕಾಂಗ್ರೆಸ್ ಪಕ್ಷಕ್ಕೆ ಬೆಂಬಲ ನೀಡಲು ಸಿದ್ದ: ಕರುಣಾನಿಧಿ
ನವದೆಹಲಿ , ಗುರುವಾರ, 27 ಮಾರ್ಚ್ 2014 (13:06 IST)
PTI
ಕಾಂಗ್ರೆಸ್ ಪಕ್ಷಕ್ಕೆ ಇಂದು ಮತ್ತೊಂದು ಸಂತಸ ತರುವ ಸುದ್ದಿ ಬಹಿರಂಗವಾಗಿದೆ. ಕಾಂಗ್ರೆಸ್ ಪಕ್ಷಕ್ಕೆ ಸರಕಾರ ರಚಿಸಲು ಅಗತ್ಯವಾದಲ್ಲಿ ಡಿಎಂಕೆ ಬೆಂಬಲಿಸುತ್ತದೆ ಎಂದು ಡಿಎಂಕೆ ಮುಖ್ಯಸ್ಥ ಮಾಜಿ ಮುಖ್ಯಮಂತ್ರಿ ಕರುಣಾನಿಧಿ ಹೇಳಿಕೆ ನೀಡಿದ್ದಾರೆ.

ಶ್ರೀಲಂಕಾದಲ್ಲಿರುವ ತಮಿಳರ ಹಿತಾಸಕ್ತಿ ಕಾಪಾಡುವಲ್ಲಿ ಕೇಂದ್ರ ಸರಕಾರ ವಿಫಲವಾಗಿದೆ ಎಂದು ಆರೋಪಿಸಿ ಡಿಎಂಕೆ ಪಕ್ಷ ಯುಪಿಎ ಮೈತ್ರಿಕೂಟದಿಂದ ಹೊರಬಂದಿತ್ತು.

ಡಿಎಂಕೆ ಪಕ್ಷ ಜಾತ್ಯಾತೀತವಾದಕ್ಕೆ ಬದ್ದವಾಗಿದೆಯೇ ಹೊರತು ಕೋಮುವಾದಿ ಶಕ್ತಿಗಳಿಗಲ್ಲ. ರಾಕ್ಷಸಿ ಕೋಮುವಾದಿ ಶಕ್ತಿಗಳನ್ನು ಅಧಿಕಾರದಿಂದ ದೂರವಿಡಲು ಕಾಂಗ್ರೆಸ್ ಪಕ್ಷಕ್ಕೆ ಬೆಂಬಲಿಸಲಾಗುವುದು ಎಂದು ಸ್ಪಷ್ಟಪಡಿಸಿದ್ದಾರೆ.

ತಮಿಳುನಾಡಿನಲ್ಲಿ ಸೀಟು ಹಂಚಿಕೆಯ ಕಾಂಗ್ರೆಸ್ ಪ್ರಸ್ತಾವನೆಯನ್ನು ತಿರಸ್ಕರಿಸಿದ್ದ ಡಿಎಂಕೆ, ಇದೀಗ ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸುವುದಾಗಿ ನೀಡಿರುವ ಹೇಳಿಕೆ ಅಚ್ಚರಿ ಮೂಡಿಸಿದೆ.

Share this Story:

Follow Webdunia kannada