Webdunia - Bharat's app for daily news and videos

Install App

ಡೀಸೆಲ್‌ ಟ್ಯಾಂಕರ್‌ಗೆ ಬಸ್ ಡಿಕ್ಕಿ: ಏಳು ಜನರ ದಾರುಣ ಸಾವು

Webdunia
ಬುಧವಾರ, 29 ಜನವರಿ 2014 (11:06 IST)
PR
PR
ಐಷಾರಾಮಿ ಬಸ್ಸೊಂದು ಮಹಾರಾಷ್ಟ್ರದಲ್ಲಿ ಬೆಂಕಿಗೆ ಆಹುತಿಯಾಗಿದ್ದರಿಂದ ಏಳು ಜನರು ದಾರುಣವಾಗಿ ಮೃತಪಟ್ಟ ಘಟನೆ ಸಂಭವಿಸಿದೆ. ಹೆದ್ದಾರಿಯಲ್ಲಿ ಮಂಗಳವಾರ ರಾತ್ರಿ ಡೀಸೆಲ್ ಟ್ಯಾಂಕರ್‌ವೊಂದಕ್ಕೆ ಬಸ್ ಡಿಕ್ಕಿ ಹೊಡೆದ ಕೂಡಲೇ ಬೆಂಕಿ ಹೊತ್ತಿಕೊಂಡಿತು.ಅವಘಡದಲ್ಲಿ ಇನ್ನೂ 14 ಜನರಿಗೆ ಗಾಯಗಳಾಗಿದ್ದು, ಮುಂಬೈ-ಅಹ್ಮದಾಬಾದ್ ಹೆದ್ದಾರಿಯ ಮ್ಯಾನರ್‌ ಬಳಿ ರಾತ್ರಿ ಒಂದು ಗಂಟೆಗೆ ಅನೇಕ ಪ್ರಯಾಣಿಕರು ನಿದ್ರಾವಸ್ಥೆಯಲ್ಲಿದ್ದಾಗ ಈ ದುರಂತ ಸಂಭವಿಸಿದೆ. ಬಸ್ ಪುಣೆಯಿಂದ ಅಹ್ಮದಾಬಾದ್‌ ಕಡೆಗೆ ಪ್ರಯಾಣಿಸುತ್ತಿತ್ತು.ತುರ್ತು ಸೇವೆಗಳು ಮತ್ತು ಉನ್ನತ ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ಧಾವಿಸಿದ್ದು, ಸುಮಾರು 4 ಗಂಟೆಗಳ ಕಾಲ ಸಂಚಾರ ಸ್ಥಗಿತಗೊಳಿಸಲಾಗಿತ್ತು.

ಸಹಜ ಸಂಚಾರ ಆರಂಭಕ್ಕೆ ಇನ್ನೂ ಕೆಲವು ಗಂಟೆಗಳು ಬೇಕಾಗುತ್ತದೆಂದು ಪೊಲೀಸರು ಹೇಳಿದ್ದಾರೆ.ಡೀಸೆಲ್ ಟ್ಯಾಂಕರ್‌ಗೆ ಬಸ್ ಡಿಕ್ಕಿ ಹೊಡೆದಿರುವುದರಿಂದ ಸ್ಫೋಟವುಂಟಾಗುವ ಅಪಾಯವಿದ್ದು ನಮ್ಮ ಕಾರ್ಯಾಚರಣೆಯಲ್ಲಿ ಎಚ್ಚರಿಕೆ ವಹಿಸಬೇಕಾಗಿದೆ ಎಂದು ಅಪಘಾತದ ಸ್ಥಳದಲ್ಲಿ ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments