Webdunia - Bharat's app for daily news and videos

Install App

ತೃತೀಯ ರಂಗಕ್ಕೆ ಚಾಲನೆ, ಆದರೆ ಪ್ರಧಾನಿ ಅಭ್ಯರ್ಥಿ ಯಾರು?

Webdunia
ಶುಕ್ರವಾರ, 14 ಮಾರ್ಚ್ 2014 (14:39 IST)
PR
PR
ನವದೆಹಲಿ: ತೃತೀಯ ರಂಗದ ರಚನೆಗೆ ಅಂತಿಮವಾಗಿ ಚಾಲನೆ ನೀಡಲಾಗಿದ್ದು, ಯುಪಿಎಯನ್ನು ಸೋಲಿಸುವ ದಿಕ್ಕಿನಲ್ಲಿ ಮತ್ತು ಬಿಜೆಪಿ ಮುಂಬರುವ ಚುನಾವಣೆಯಲ್ಲಿ ಗೆಲ್ಲುವುದಕ್ಕೆ ಅವಕಾಶ ನೀಡದಂತೆ 11 ಪಕ್ಷಗಳು ಜತೆಗೂಡಿ ಕೆಲಸ ಮಾಡುವುದಾಗಿ ಸಿಪಿಎಂ ಮುಖಂಡ ಪ್ರಕಾಶ್ ಕಾರಟ್ ಪತ್ರಿಕಾಗೋಷ್ಠಿಯಲ್ಲಿ ಘೋಷಣೆ ಮಾಡಿದರು. 11 ಪಕ್ಷಗಳ ಸಭೆಯ ಕೊನೆಯಲ್ಲಿ ತೃತೀಯ ರಂಗ ರೂಪುಗೊಂಡಿತು.'ಬಿಜೆಪಿಯ ನೀತಿಗಳು ಕಾಂಗ್ರೆಸ್ ನೀತಿಗಳನ್ನು ಹೋಲುತ್ತವೆ. ಬಿಜೆಪಿ ಮತ್ತು ಕೋಮುವಾದಿ ಶಕ್ತಿಗಳು ಅಧಿಕಾರಕ್ಕೆ ಬರದಂತೆ ತಡೆಯಬೇಕು.

ನರೇಂದ್ರ ಮೋದಿ ಪ್ರಧಾನಿಯಾಗದಂತೆ ನೋಡಿಕೊಳ್ಳಬೇಕು. ಮೋದಿ ಜಾತ್ಯತೀತ ಚೌಕಟ್ಟಿಗೆ ಸವಾಲು ಹಾಕಿದ್ದಾರೆ' ಎಂದು ಕಾರಟ್ ಹೇಳಿದರು.'ನಾವು ಜನಾಧಾರಿತ ಅಭಿವೃದ್ಧಿ ಪಥವನ್ನು ಒದಗಿಸುತ್ತೇವೆ. ಪ್ರಜಾಪ್ರಭುತ್ವ ಚೌಕಟ್ಟು ಬಲಪಡಿಸಲು ನಾವು ಕೆಲಸ ಮಾಡುತ್ತೇವೆ 'ಎಂದು ಕಾರಟ್ ಹೇಳಿದರು. ಚುನಾವಣೆ ಬಳಿಕ ತೃತೀಯ ರಂಗದ ಪ್ರಧಾನಿಯನ್ನು ಆಯ್ಕೆ ಮಾಡುತ್ತೇವೆ ಎಂದು ಕಾರಟ್ ಹೇಳಿದರು.

ಈಗ ತೃತೀಯ ರಂಗ ಚಾಲನೆಗೆ ಬಂದಿರುವುದರಿಂದ ಮತದಾರರ ಮನಸ್ಸಿನಲ್ಲಿ ತೃತೀಯರಂಗದ ಪ್ರಧಾನಮಂತ್ರಿ ಅಭ್ಯರ್ಥಿ ಯಾರು ಎಂಬ ದೊಡ್ಡ ಪ್ರಶ್ನೆ ಹುಟ್ಟಿಕೊಂಡಿದೆ.ಸಮಾಜವಾದಿ ಪಕ್ಷದ ಮುಲಾಯಂ ಸಿಂಗ್ ಯಾದವ್, ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ತಮಿಳುನಾಡಿನ ಮುಖ್ಯಮಂತ್ರಿ ಜಯಲಲಿತಾ ಇವರು ಈ ಅವಕಾಶವನ್ನು ಎರಡು ಕೈಗಳಿಂದ ಬಾಚಿಕೊಳ್ಳಲು ಸನ್ನದ್ದರಾಗಿದ್ದಾರೆ. ಆದರೆ ತೃತೀಯರಂಗ ಅಧಿಕಾರಕ್ಕೆ ಬಂದು ಪ್ರಧಾನಿ ಹುದ್ದೆ ಯಾರಿಗೆ, ಯಾವಾಗ ದಕ್ಕುತ್ತದೋ ಕಾದುನೋಡಬೇಕು.

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments