Webdunia - Bharat's app for daily news and videos

Install App

ತೆಲಂಗಾಣ ಉದಯ: ಎರಡೂ ರಾಜ್ಯಗಳಿಗೆ ಹೈದ್ರಾಬಾದ್ ರಾಜಧಾನಿ

Webdunia
ಮಂಗಳವಾರ, 30 ಜುಲೈ 2013 (19:37 IST)
PR
PR
ನವದೆಹಲಿ: ತೆಲಂಗಾಣದ ಪ್ರತ್ಯೇಕ ರಾಜ್ಯಕ್ಕಾಗಿ ತೆಲಂಗಾಣ ಪ್ರದೇಶದ ಜನರ ದಶಕಗಳ ಕಾಲದ ಹೋರಾಟ ಇಂದು ಫಲ ನೀಡಿದೆ. ಸಮನ್ವಯ ಸಮಿತಿ ಸಭೆಯಲ್ಲಿ ತೆಲಂಗಾಣ ರಾಜ್ಯ ನಿರ್ಮಾಣಕ್ಕೆ ಸರ್ವಾನುಮತದ ಅನುಮೋದನೆ ಸಿಕ್ಕಿದ ಬಳಿಕ, ಈಗ ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಕೂಡ ತೆಲಂಗಾಣ ರಾಜ್ಯ ರಚನೆಗೆ ಗ್ರೀನ್ ಸಿಗ್ನಲ್ ನೀಡಿದೆ.

ಸೋನಿಯಾ ಗಾಂಧಿ ನಿವಾಸದಲ್ಲಿ ಈ ಸಭೆ ಒಂದು ಗಂಟೆಗೂ ಹೆಚ್ಚು ಕಾಲ ನಡೆಯಿತು. ದೆಹಲಿಯ ಏಐಸಿಸಿ ಕಚೇರಿಯಲ್ಲಿ ಸಂಜೆ 7 ಗಂಟೆಗೆ ನಡೆದ ಸುದ್ದಿಗೋಷ್ಠಿಯಲ್ಲಿ ತೆಲಂಗಾಣ ರಾಜ್ಯ ರಚನೆಯ ಸುದ್ದಿಯನ್ನು ಪ್ರಕಟಿಸಲಾಯಿತು. ಅಜಯ್ ಮಕೇನ್ ಮತ್ತು ದಿಗ್ವಿಜಯ್ ಸಿಂಗ್ ತೆಲಂಗಾಣ ರಾಜ್ಯ ರಚನೆ ಕುರಿತು ಹೇಳಿಕೆ ನೀಡಿದರು. ತೆಲಂಗಾಣ ಮತ್ತು ಆಂಧ್ರಪ್ರದೇಶ ಎರಡು ರಾಜ್ಯಗಳಿಗೂ ಹೈದರಾಬಾದ್ ರಾಜಧಾನಿಯಾಗಿ ಉಳಿಯಲಿದೆ.

10 ವರ್ಷಗಳವರೆಗೆ ಹೈದರಾಬಾದ್ ರಾಜಧಾನಿಯಾಗಲಿದೆ. ನಾಳೆ ವಿಶೇಷ ಕೇಂದ್ರ ಸಂಪುಟ ಸಭೆ ನಡೆಯಲಿದೆ ಎಂದು ಸುದ್ದಿಗೋಷ್ಠಿಯಲ್ಲಿ ತಿಳಿಸಲಾಯಿತು. ತೆಲಂಗಾಣ ರಾಜ್ಯದ ಶತಾಯಗತಾಯ ಸ್ಥಾಪನೆಗೆ ಕಾಂಗ್ರೆಸ್ಸಿಗರು ಹೃತ್ಪೂರ್ವಕ ಬೆಂಬಲ ನೀಡಬೇಕು ಎಂದು ಮಕೇನ್ ತಿಳಿಸಿದರು.

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments