Select Your Language

Notifications

webdunia
webdunia
webdunia
webdunia

ನರೇಂದ್ರ ಮೋದಿ ಬಿಜೆಪಿ ಪಕ್ಷಕ್ಕೆ ಭಸ್ಮಾಸುರನಂತೆ: ದಿಗ್ವಿಜಯ್ ಸಿಂಗ್

ನರೇಂದ್ರ ಮೋದಿ ಬಿಜೆಪಿ ಪಕ್ಷಕ್ಕೆ ಭಸ್ಮಾಸುರನಂತೆ: ದಿಗ್ವಿಜಯ್ ಸಿಂಗ್
ಬೆಳಗಾವಿ , ಶುಕ್ರವಾರ, 14 ಮಾರ್ಚ್ 2014 (14:03 IST)
PTI
ಬಿಜೆಪಿ ಪ್ರಧಾನಿ ಅಭ್ಯರ್ಥಿ ನರೇಂದ್ರ ಮೋದಿ ಭಸ್ಮಾಸುರನಂತೆ. ತನ್ನನ್ನು ಬೆಳಿಸಿದ ಪಕ್ಷದ ನಾಯಕರನ್ನು ಈಗಾಗಲೇ ತಿಂದು ತೇಗಿದ್ದಾರೆ. ಇದೀಗ ಬಿಜೆಪಿ ಪಕ್ಷವನ್ನೇ ನುಂಗುವ ಹವಣಿಕೆಯಲ್ಲಿದ್ದಾರೆ ಎಂದು ಕಾಂಗ್ರೆಸ್ ಮುಖಂಡ ದಿಗ್ವಿಜಯ್ ಸಿಂಗ್ ಆರೋಪಿಸಿದ್ದಾರೆ.

ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶ ಉದ್ಘಾಟಿಸಿ ಮಾತನಾಡಿದ ಅವರು , ಬಿಜೆಪಿ ಪ್ರಧಾನಿ ಅಭ್ಯರ್ಥಿ ನರೇಂದ್ರ ಮೋದಿ ಅವರನ್ನು ಗುಜರಾತಿನ ಮಾಜಿ ಸಿಎಂ ಕೇಶುಭಾಯಿ ಪಟೇಲ್, ವಿಎಚ್ಪಿ ಅಂತಾರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಡಾ. ಪ್ರವೀಣ ತೊಗಾಡಿಯಾ, ದೀಪಸಿಂಗ್ ವಾಘೇಲ, ಕಾಶಿರಾಮ ರಾಣಾ, ಲಾಲಕೃಷ್ಣ ಆಡ್ವಾಣಿ ಅವರಂಥ ನಾಯಕರೇ ಕೈ ಹಿಡಿದು ರಾಜಕೀಯವಾಗಿ ಬೆಳೆಸಿದರು. ಅವರನ್ನೇ ಮೋದಿ ಮೂಲೆಗುಂಪು ಮಾಡುವ ಕೆಲಸ ಮಾಡಿದ್ದಾರೆ. ಈಗ ಮೋದಿಯನ್ನು ಹೋದಲ್ಲೆಲ್ಲಾ ಕೊಂಡಾಡುವ ರಾಜನಾಥ ಸಿಂಗ್ ಕೂಡಾ ಶೀಘ್ರದಲ್ಲಿ ಮೂಲೆಗುಂಪಾಗಲಿದ್ದಾರೆ ಎಂದು ಭವಿಷ್ಯ ನುಡಿದರು.

ಸೋನಿಯಾ ಗಾಂಧಿ ಮತ್ತು ಮನಮೋಹನ ಸಿಂಗ್ ಅವರಿಂದಾಗಿ ಮಾಹಿತಿ ಹಕ್ಕು ಕಾಯ್ದೆ, ಉಚಿತ ಕಡ್ಡಾಯ ಶಿಕ್ಷಣ, ಆಹಾರ ಭದ್ರತೆ ಕಾಯ್ದೆ, ನರೇಗಾ, ಲೋಕಪಾಲದಂಥ ಕಾನೂನು ಜಾರಿಗೆ ಬಂದಿದೆ ಎಂದು ಕಾಂಗ್ರೆಸ್ ಮುಖಂಡ ದಿಗ್ವಿಜಯ್ ಸಿಂಗ್ ತಿಳಿಸಿದ್ದಾರೆ.

Share this Story:

Follow Webdunia kannada