Webdunia - Bharat's app for daily news and videos

Install App

'ನಿಮ್ಮ ಧ್ವನಿ ನಮ್ಮ ಪ್ರತಿಜ್ಞೆ' ಸಂವಾದ ಕಾರ್ಯಕ್ರಮಕ್ಕೆ ತೆರೆ

Webdunia
ಶನಿವಾರ, 11 ಜನವರಿ 2014 (18:26 IST)
PR
PR
ಬೆಂಗಳೂರು: ರಾಹುಲ್ ಗಾಂಧಿ ಅವರು ಬೆಂಗಳೂರಿನ ಟೆನ್ನಿಸ್ ಪೆವಿಲಿಯನ್‌ನಲ್ಲಿ ಆಯೋಜಿಸಿದ್ದ 'ನಿಮ್ಮ ಧ್ವನಿ ನಮ್ಮ ಪ್ರತಿಜ್ಞೆ' ಹೆಸರಿನಲ್ಲಿ ಸಂವಾದ ಕಾರ್ಯಕ್ರಮ ಇಂದು ಮುಕ್ತಾಯವಾಗಿದೆ. ಲೋಕಸಭೆ ಚುನಾವಣೆಗೆ ಪ್ರಣಾಳಿಕೆ ಸಿದ್ದಪಡಿಸುವುದಕ್ಕೆ ಪೂರ್ವಭಾವಿಯಾಗಿ ಸಂವಾದ ಆಯೋಜಿಸಲಾಗಿತ್ತು. ಯುವಕರು ಕಾಂಗ್ರೆಸ್ ಬಗ್ಗೆ ಯಾವ ನಿರೀಕ್ಷೆಯನ್ನು ಇಟ್ಟುಕೊಂಡಿದ್ದಾರೆ ಎಂದು ರಾಹುಲ್ ತಿಳಿಯಲು ಬಯಸಿದರು. ಈ ಕಾರ್ಯಕ್ರಮದಲ್ಲಿ ರಾಹುಲ್ ಜತೆಗೆ ಸಿದ್ದರಾಮಯ್ಯ, ಪರಮೇಶ್ವರ್ ಸೇರಿದಂತೆ ರಾಜ್ಯದ ವಿವಿಧ ನಾಯಕರು ಭಾಗವಹಿಸಿದ್ದರು.

ಸಂವಾದ ಕಾರ್ಯಕ್ರಮದ ಬಳಿಕ ಮಾತನಾಡಿದ ಸಚಿವ ಮನೀಶ್ ತಿವಾರಿ, ಜನರ ಭಾವನೆಗಳಿಗೆ ಪೂರಕವಾದ ಪ್ರಣಾಳಿಕೆ ಸಿದ್ದಪಡಿಸಲಾಗುವುದು. ಸಭೆಯಲ್ಲಿ ಯುವ ಸಾಧಕರ ಅಭಿಪ್ರಾಯ ಸಂಗ್ರಹಿಸಲಾಯಿತು ಎಂದು ಹೇಳಿದರು. ಪಕ್ಷದಲ್ಲಿ ಯುವಜನತೆಗೆ ಹೆಚ್ಚಿನ ಆದ್ಯತೆ ನೀಡಲಾಗುವುದು ಎಂದು ಮನೀಶ್ ತಿವಾರಿ ಹೇಳಿದರು.

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments