Webdunia - Bharat's app for daily news and videos

Install App

ಭಾರತ- ಪಾಕಿಸ್ತಾನ ವಿಭಜನೆಗೆ ಕಾಂಗ್ರೆಸ್ ನೇರ ಹೊಣೆ: ನರೇಂದ್ರ ಮೋದಿ

Webdunia
ಗುರುವಾರ, 21 ನವೆಂಬರ್ 2013 (17:57 IST)
PTI
ಭಾರತ- ಪಾಕಿಸ್ತಾನ ದೇಶ ವಿಭಜನೆಗೆ ಕಾಂಗ್ರೆಸ್ ನೇರ ಕಾರಣವಾಗಿದೆ.ಕಾಂಗ್ರೆಸ್ ಆರಂಭದಿಂದಲೂ ವಿಭಜಿಸಿ ಆಳು ನೀತಿಯನ್ನು ಪಾಲಿಸುತ್ತಾ ಬಂದಿದೆ ಎಂದು ಬಿಜೆಪಿ ಪ್ರಧಾನಿ ಅಭ್ಯರ್ಥಿ ನರೇಂದ್ರ ಮೋದಿ ಎಂದಿನಂತೆ ವಾಗ್ದಾಳಿ ನಡೆಸಿದ್ದಾರೆ.

ಉತ್ತರಪ್ರದೇಶದ ಆಗ್ರಾದಲ್ಲಿ ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ದೇಶದ ಅಭಿವೃದ್ಧಿಯ ಬಗ್ಗೆ ಕಾಂಗ್ರೆಸ್ ಪಕ್ಷಕ್ಕೆ ಕಾಳಜಿಯಿಲ್ಲ. ದೇಶವನ್ನು ಅಭಿವೃದ್ಧಿಗೊಳಿಸುವ ಬಗ್ಗೆ ಆಸಕ್ತಿಯಿಲ್ಲ. ಯಾಕೆಂದರೆ ಕಾಂಗ್ರೆಸ್ ಪಕ್ಷ ಓಟ್‌ಬ್ಯಾಂಕ್ ರಾಜಕೀಯ ಮಾಡುತ್ತಿದೆ ಎಂದು ಕಿಡಿಕಾರಿದ್ದಾರೆ.

ಕಾಂಗ್ರೆಸ್ ಪಕ್ಷದ ವಿಭಜಿಸಿ ಆಳು ಧೋರಣೆಯಿಂದಾಗಿ ಸಮಾಜವಾದಿ ಪಕ್ಷ ಮತ್ತು ಬಹುಜನ ಸಮಾಜ ಪಕ್ಷಗಳು ಉದಯಿಸಿವೆ. ದೆಹಲಿಯಲ್ಲಿರುವ ಯುಪಿಎ ಸರಕಾರ ಅಧೋಗತಿಯಾಗಿದೆ ಎಂದು ಟೀಕಿಸಿದರು.

ಗುಜರಾತ ರಾಜ್ಯದ ಅಭಿವೃದ್ಧಿಯನ್ನು ಕಂಡು ಅನೇಕ ರಾಜಕೀಯ ಪಂಡಿತರು ದೇಶದ ಎಲ್ಲಾ ರಾಜ್ಯಗಳಲ್ಲಿ ಇಂತಹ ಬದಲಾವಣೆಗಳನ್ನು ತರಬೇಕು ಎಂದು ಹೇಳಿಕೆ ನೀಡಿರುವುದು ಸಂತಸ ತಂದಿದೆ ಎಂದರು.

ಆಗ್ರಾ ಜಿಲ್ಲೆ ಯಮುನಾ ನದಿಯ ದಂಡೆಯ ಮೇಲಿದ್ದರೂ ನೀರಿನ ಬವಣೆಯನ್ನು ಎದುರಿಸುತ್ತಿದೆ. ಗುಜರಾತಿನಲ್ಲಿ ಕೇವಲ ನರ್ಮದಾ ನದಿಯಿದೆ. ಆದರೆ, ರಾಜ್ಯದ ಗಡಿಯನ್ನು ದಾಟಿ ಮರಭೂಮಿಯವರೆಗೆ ಹರಿಸಲು ಯಶಸ್ವಿಯಾಗಿ ಪೈಪ್‌ಲೈನ್‌ಗಳನ್ನು ಅಳವಡಿಸಲಾಗಿದೆ ಎಂದು ಬಿಜೆಪಿ ಪ್ರಧಾನಿ ಅಭ್ಯರ್ಥಿ ನರೇಂದ್ರ ಮೋದಿ ಹೇಳಿದ್ದಾರೆ.

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments