Webdunia - Bharat's app for daily news and videos

Install App

ನಿಮ್ಮ ಮೂರು ತಲೆಮಾರುಗಳು ಏನು ಕೆಲಸ ಮಾಡಿದೆ ಹೇಳಿ: ಅಮಿತ್ ಷಾ

Webdunia
ಮಂಗಳವಾರ, 10 ಅಕ್ಟೋಬರ್ 2017 (17:51 IST)
ಉತ್ತರ ಪ್ರದೇಶ: ಕೇಂದ್ರ ಸರ್ಕಾರದ ಅಭಿವೃದ್ಧಿ ಕೆಲಸಗಳ ಕುರಿತು ಲೆಕ್ಕ ಕೇಳುವ ರಾಹುಲ್ ಗಾಂಧಿ, ತಮ್ಮ ಕುಟುಂಬದ ಮೂರು ತಲೆಮಾರುಗಳು ಮಾಡಿರುವ ಕೆಲಸವನ್ನು ಹೇಳಲಿ ಎಂದು ಅಮಿತ್ ಷಾ ರಾಹುಲ್ ಗಾಂಧಿಗೆ ಸವಾಲ್ ಹಾಕಿದ್ದಾರೆ.

ಅಮೇಥಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದರು. ಗುಜರಾತ್ ಬಗ್ಗೆ ಮಾತನಾಡುವ ರಾಹುಲ್, ತಮ್ಮ ಕ್ಷೇತ್ರದಲ್ಲಿ ಏನು ಅಭಿವೃದ್ಧಿ ಮಾಡಿದ್ದಾರೆ ಎಂದು ಪ್ರಶ್ನಿಸಿದರು.

ಸಿಎಂ ಯೋಗಿ ಆದಿತ್ಯನಾಥ್ ಮಾತನಾಡಿ, ಹಿಂದೆ ರೈತರು ಭೂಮಿ ಕಳೆದುಕೊಂಡರೆ ಉದ್ಯೋಗ ಸೃಷ್ಟಿಯಾಗುತ್ತಿತ್ತು. ಆದರೆ ಪ್ರಧಾನಿ ಮೋದಿ ರೈತರ ಭೂಮಿ ಹೊರತಾಗಿಯೂ ಉದ್ಯೋಗ ಸೃಷ್ಟಿ ಮಾಡಬಹುದು ಎಂದು ತೋರಿಸಿಕೊಟ್ಟಿದ್ದಾರೆ. ಅಳಿಯ ಅಥವಾ ಭಾವನ ಉದ್ಯಮಕ್ಕಾಗಿ ಭೂಮಿ ನೀಡುವುದು ಇನ್ನುಮುಂದೆ ಸಾಧ್ಯವಿಲ್ಲ ಎಂದು ರಾಬರ್ಟ್ ಕುರಿತು ಪರೋಕ್ಷ ವಾಗ್ದಾಳಿ ನಡೆಸಿದರು.

ಕೇಂದ್ರ ಸಚಿವೆ ಸ್ಮೃತಿ ಇರಾನಿ ಮಾತನಾಡಿ, ಕೊಟ್ಟ ಮಾತಿನಂತೆ ಸೋತರೂ, ಕ್ಷೇತ್ರದ  ಜನರೊಂದಿಗೆ ಸಂಪರ್ಕದಲ್ಲಿದ್ದೇನೆ. ಹೀಗಾಗಿಯೇ ರಾಹುಲ್ ಗಾಂಧಿ ಸಹ ಅಮೇಥಿಗೆ ಆಗಾಗ ಭೇಟಿ ನೀಡುತ್ತಿರುತ್ತಾರೆ. ಬಿಜೆಪಿಯಿಂದ ಗಾಂಧಿಗಳು ಹಿಂದೆಗಿಂತಲೂ ಹೆಚ್ಚು ಸಲ ಅಮೇಥಿಗೆ ಭೇಟಿ ನೀಡುತ್ತಿದ್ದಾರೆ  ಎಂದು ಹೇಳಿದರು.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments