Select Your Language

Notifications

webdunia
webdunia
webdunia
webdunia

‘ವಿರೋಧಿ ನಾಯಕರ ಮನೆ ಮೇಲೆ ದಾಳಿ ನಡೆಸಲು ನಾವು ಹೇಳಿಲ್ಲ’

‘ವಿರೋಧಿ ನಾಯಕರ ಮನೆ ಮೇಲೆ ದಾಳಿ ನಡೆಸಲು ನಾವು ಹೇಳಿಲ್ಲ’
NewDelhi , ಬುಧವಾರ, 17 ಮೇ 2017 (06:53 IST)
ನವದೆಹಲಿ: ಮಾಜಿ ಕೇಂದ್ರ ಸಚಿವರಾದ ಪಿ. ಚಿದಂಬರಂ ಮತ್ತು ಲಾಲೂ ಪ್ರಸಾದ್ ಯಾದವ್ ಮನೆ ಮೇಲೆ ಸಿಬಿಐ ಮತ್ತು ಐಟಿ ದಾಳಿ ನಡೆಸಿದ ಹಿಂದೆ ನಮ್ಮ ಪಾತ್ರವಿಲ್ಲ ಎಂದು ಕೇಂದ್ರ ಸಚಿವ ವೆಂಕಯ್ಯ ನಾಯ್ಡು ಸ್ಪಷ್ಟಪಡಿಸಿದ್ದಾರೆ.

 
ರಾಜಕೀಯ ಉದ್ದೇಶಕ್ಕಾಗಿ ಸರ್ಕಾರಿ ತನಿಖಾ ಸಂಸ್ಥೆಯನ್ನು ದುರ್ಬಳಕೆ ಮಾಡಲಾಗುತ್ತಿದೆ ಎಂಬ ವಿಪಕ್ಷಗಳ ಆರೋಪಗಳನ್ನು ತಳ್ಳಿ ಹಾಕಿದ ವೆಂಕಯ್ಯ ನಾಯ್ಡು ಮುಲಾಯಂ ಸಿಂಗ್, ಲಾಲೂ ಪ್ರಸಾದ್ ಅಥವಾ ಚಿದಂಬರಂ ನಿವಾಸಗಳ ಮೇಲೆ ದಾಳಿ ನಡೆಸಲು ನಾವು ಪ್ರೇರೇಪಿಸಿರಲಿಲ್ಲ ಎಂದಿದ್ದಾರೆ.

ಸುಮಾರು 100 ಅಧಿಕಾರಿಗಳ ತಂಡ ನಿನ್ನೆ ಮಾಜಿ ಕೇಂದ್ರ ಸಚಿವರುಗಳ ಮನೆ ಮೇಲೆ ಏಕಕಾಲಕ್ಕೆ ದಾಳಿ ನಡೆಸಿತ್ತು. ಇದರ ಬಗ್ಗೆ ಸ್ಪಷ್ಟನೆ ನೀಡಿರುವ ಅವರು, ಸರ್ಕಾರಿ ತನಿಖಾ ಸಂಸ್ಥೆಗಲು ಸ್ವತಂತ್ರವಾಗಿ ತನಿಖೆ ನಡೆಸಲು ಅವಕಾಶ ನೀಡಿರುವುದಾಗಿ ಹೇಳಿಕೊಂಡಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ   

Share this Story:

Follow Webdunia kannada

ಮುಂದಿನ ಸುದ್ದಿ

ನನಗೆ ಬಹಳ ಜನ ಆಪ್ತರಿದ್ದಾರೆ: ಗೃಹ ಸಚಿವ ಪರಮೇಶ್ವರ್