ಮೇವು ಹಗರಣ ಸಂಬಂಧ ಐದು ವರ್ಷ ಜೈಲುಶಿಕ್ಷೆಗೆ ಗುರಿಯಾದ ಆರ್ಜೆಡಿ ಮುಖ್ಯಸ್ಥ ಲಾಲೂ ಇಂದು ಜಾಮೀನಿನ ಮೇಲೆ ಬಿಡುಗಡೆಯಾಗಿದ್ದಾರೆ. ಸುಪ್ರೀಂಕೋರ್ಟ್ ಅವರಿಗೆ ಜಾಮೀನು ನೀಡಿದ ಬಳಿಕ ಅವರಿಗೆ ಬಿಡುಗಡೆಯ ಭಾಗ್ಯ ಸಿಕ್ಕಿದೆ. ರಾಂಚಿಯ ಬಿರ್ಸಾ ಮುಂಡಾ ಜೈಲಿನಿಂದ ಅವರನ್ನು ಬಿಡುಗಡೆ ಮಾಡಲಾಯಿತು. ಕಳೆದ ಶುಕ್ರವಾರ ಸುಪ್ರೀಂಕೋರ್ಟ್ ಜಾಮೀನು ಮಂಜೂರು ಮಾಡಿತ್ತು.
ನನಗೆ ಕಾನೂನಿನ ಮೇಲೆ ನಂಬಿಕೆಯಿದೆ ಎಂದು ಲಾಲೂ ಜೈಲಿಂದ ಹೊರಬಂದ ಬಳಿಕ ಹೇಳಿದರು. ಜೈಲಿಗೆ ಹಾಕಿ ನನ್ನನ್ನು ಯಾರೂ ಏನೂ ಮಾಡಲಾರರು ಎಂದು ಲಾಲೂ ಪ್ರತಿಕ್ರಿಯಿಸಿದರು. ಲಾಲೂ ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ಚೈಬಾಸಾ ಖಜಾನೆಯಿಂದ 37.7ಕೋಟಿ ರೂ.ಗಳನ್ನು ಅಕ್ರಮವಾಗಿ ಪಡೆದಿದ್ದಾರೆಂದು ಆರೋಪಿಸಲಾಗಿತ್ತು. ಇನ್ನೂ ನಾಲ್ಕು ಮೇವು ಹಗರಣದ ಪ್ರಕರಣಗಳಲ್ಲಿ ವಿವಿಧ ಸಿಬಿಐ ಕೋರ್ಟ್ಗಳ ವಿಚಾರಣೆಗಳನ್ನು ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ಎದುರಿಸಿದ್ದರು.