Webdunia - Bharat's app for daily news and videos

Install App

ಅನಿಲ್ ಅಂಬಾನಿ ದಂಪತಿಗಳ ಸಾಕ್ಷ್ಯ ಕೇಳಿದ ಸಿಬಿಐ

Webdunia
ಶುಕ್ರವಾರ, 31 ಮೇ 2013 (15:42 IST)
PR
PR
2 ಜಿ ತರಂಗಾಂತರ ಹಂಚಿಕೆ ಹಗರಣದಲ್ಲಿ ರಿಲಯನ್ಸ್ ಎಡಿಎ ಸಮೂಹದ ಅಧ್ಯಕ್ಷ ಅನಿಲ್ ಅಂಬಾನಿ ಮತ್ತು ಅವರ ಪತ್ನಿ ಟೀನಾ ಅಂಬಾನಿ ಸೇರಿದಂತೆ ಸುಮಾರು 17 ಸರ್ಕಾರಿ ಸಾಕ್ಷಿಗಳನ್ನು ವಿಚಾರಣೆಗೆ ಕರೆಸುವಂತೆ ಸಿಬಿಐ ಸಲ್ಲಿಸಿರುವ ಅರ್ಜಿ ಬಗ್ಗೆ ಜುಲೈ 3ರಂದು ತಮ್ಮ ಪ್ರತಿಕ್ರಿಯೆಗಳನ್ನು ತಿಳಿಸುವಂತೆ ಸೂಚಿಸಿ ಎಲ್ಲ ಆರೋಪಿಗಳಿಗೂ ವಿಶೇಷ ನ್ಯಾಯಾಲಯ ಗುರುವಾರ ನೋಟಿಸ್ ಜಾರಿಗೊಳಿಸಿದೆ.

ಹಗರಣದ ಸತ್ಯಾಂಶವನ್ನು ತಿಳಿಯಬೇಕಾದರೆ ಈ ಎಲ್ಲ ಸರ್ಕಾರಿ ಸಾಕ್ಷಿಗಳ ಸಾಕ್ಷ್ಯವನ್ನು ದಾಖಲಿಸುವುದು ಅವಶ್ಯಕ ಎಂದು ವಿಶೇಷ ಸರ್ಕಾರಿ ವಕೀಲ ಯು.ಯು. ಲಲಿತ್ ಅವರು ನ್ಯಾಯಪೀಠಕ್ಕೆ ತಿಳಿಸಿದ ನಂತರ, ಈ ಬಗ್ಗೆ ಪ್ರತಿಕ್ರಿಯೆ ನೀಡುವಂತೆ ವಿಶೇಷ ಸಿಬಿಐ ನ್ಯಾಯಾಧೀಶ ಒ.ಪಿ. ಸೈನಿ ಅವರು ಆರೋಪಿಗಳಿಗೆ ನೋಟಿಸ್ ಜಾರಿಗೊಳಿಸಿದರು.

ದೂರಸಂಪರ್ಕ ಇಲಾಖೆಯ ಅಧಿಕಾರಿ ನಿತಿನ್ ಜೈನ್ ಅವರನ್ನು ಮತ್ತೆ ಸಾಕ್ಷಿ ಹೇಳಲು ಕರೆಸಬೇಕು ಎಂಬ ಸಿಬಿಐ ಕೋರಿಕೆಯ ಬಗ್ಗೆ ಜುಲೈ 3ರಂದು ನಿರ್ಧರಿಸುವುದಾಗಿ ನ್ಯಾಯಾಧೀಶರು ತಿಳಿಸಿದರು.

ಅನಿಲ್ ಅಂಬಾನಿ, ಟೀನಾ ಅಂಬಾನಿ ಅಲ್ಲದೆ ಟ್ರಾಯ್‌ನ ಮಾಜಿ ಸಲಹೆಗಾರರು, ಬ್ಯಾಂಕ್ ಅಧಿಕಾರಿಗಳನ್ನು ಸಾಕ್ಷಿ ಹೇಳಲು ಕರೆಯಿಸಬೇಕು ಎಂದು ಲಲಿತ್ ಕೋರಿದ್ದಾರೆ. ರಿಲಯನ್ಸ್ ಎಡಿಎಜಿ ಕಂಪೆನಿಯ ಹಿರಿಯ ಅಧಿಕಾರಿಗಳಾದ ಗೌತಮ್ ದೋಶಿ, ಸುರೇಂದ್ರ ಪಿಪರಾ ಮತ್ತು ಹರಿ ನಾಯರ್ ಅವರನ್ನು ಆಪಾದಿತರನ್ನಾಗಿ ಮಾಡಲಾಗಿರುವುದರಿಂದ ಅಂಬಾನಿ ದಂಪತಿ ಸಾಕ್ಷಿ ಮಹತ್ವ ಪಡೆದಿದೆ.

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments