Select Your Language

Notifications

webdunia
webdunia
webdunia
webdunia

ಅರವಿಂದ್ ಕೇಜ್ರಿವಾಲ್ ರಾಜಕೀಯ ಜೋಕರ್: ಮಣಿಶಂಕರ್ ಅಯ್ಯರ್

ಅರವಿಂದ್ ಕೇಜ್ರಿವಾಲ್ ರಾಜಕೀಯ ಜೋಕರ್: ಮಣಿಶಂಕರ್ ಅಯ್ಯರ್
ಕುಂಭಕೋಣಂ , ಶುಕ್ರವಾರ, 14 ಮಾರ್ಚ್ 2014 (14:07 IST)
PTI
ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಪ್ರತಿಯೊಬ್ಬರ ಮೇಲೆ ಆರೋಪ ಹೊರಿಸುತ್ತಿರುವುದನ್ನು ನೋಡಿದಲ್ಲಿ ಅವರೊಬ್ಬ ರಾಜಕೀಯ ಜೋಕರ್‌ನಂತೆ ವರ್ತಿಸುತ್ತಿದ್ದಾರೆ ಎಂದು ಕಾಂಗ್ರೆಸ್ ಮುಖಂಡ ಮಣಿಶಂಕರ್ ಅಯ್ಯರ್ ಲೇವಡಿ ಮಾಡಿದ್ದಾರೆ.

ಮಧ್ಯಪ್ರದೇಶದಿಂದ ರಾಜ್ಯಸಭೆಗೆ ಆಯ್ಕೆಯಾದ ಅಯ್ಯರ್, ಬೇರೆ ಪಕ್ಷದ ರಾಜಕಾರಣಿಗಳ ಮೇಲೆ ಭ್ರಷ್ಟಾಚಾರದ ಆರೋಪ ಹೊರಿಸುವುದು ಅವರ ಪ್ರಮುಖ ಗುರಿಯಾಗಿದೆ ಎಂದು ಕಿಡಿಕಾರಿದ್ದಾರೆ.

ದೆಹಲಿಯಲ್ಲಿ ಸರಕಾರ ರಚಿಸಲು ಕಾಂಗ್ರೆಸ್ ಪಕ್ಷ ಕೇಜ್ರಿವಾಲ್‌ಗೆ ಸುವರ್ಣಾವಕಾಶ ನೀಡಿದೆ. ಅದನ್ನು ಸದುಪಯೋಗಪಡಿಸಿಕೊಂಡು ಜನತೆಗೆ ಒಳ್ಳೆಯದನ್ನು ಮಾಡಲಿ. ದೇವರ ದಯೆಯಿಂದ ನನ್ನ ಹೆಸರನ್ನು ಕೇಜ್ರಿವಾಲ್ ಭ್ರಷ್ಟರ ಪಟ್ಟಿಗೆ ಸೇರಿಸಿಲ್ಲ ಎಂದು ಮಣಿಶಂಕರ್ ಅಯ್ಯರ್ ಸಮಾಧಾನ ವ್ಯಕ್ತಪಡಿಸಿದರು.

Share this Story:

Follow Webdunia kannada