ಬೆಂಗಳೂರು: ಆರ್ಎಸ್ಎಸ್ ವಿರುದ್ಧ ವಿವಾದಾತ್ಮಕ ಹೇಳಿಕೆ ನೀಡಿದ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ವಿರುದ್ಧ ಬೆಂಗಳೂರಿನಲ್ಲಿ ಚುನಾವಣೆ ಆಯೋಗಕ್ಕೆ ದೂರು ಸಲ್ಲಿಸಲಾಗಿದೆ. ಆರ್ಎಸ್ಎಸ್ ಮುಖಂಡ ರಾಮ್ ಮಾದವ್ ನೇತೃತ್ವದಲ್ಲಿ ಈ ದೂರು ನೀಡಲಾಗಿದೆ. ಗಾಂಧಿ ಕೊಂದವರು ಗಾಂಧಿ ಬಗ್ಗೆ ಮಾತನಾಡುತ್ತಿದ್ದಾರೆ ಎಂದು ರಾಹುಲ್ ಹೇಳಿಕೆ ನೀಡಿದ್ದರು. ಮಹಾರಾಷ್ಟ್ರದ ಠಾಣೆ ಜಿಲ್ಲೆಯಲ್ಲಿ ನಡೆದ ರ್ಯಾಲಿಯಲ್ಲಿ ಮಾತನಾಡುತ್ತಿದ್ದ ರಾಹುಲ್, ಮಹಾತ್ಮ ಗಾಂಧಿ ಅವರನ್ನು ಕೊಂದವರು ಆರ್ಎಸ್ಎಸ್ ಜನರು.
ಆದರೆ ಈಗ ಅವರು ಗಾಂಧಿ ಬಗ್ಗೆ ಮಾತಾಡ್ತಿದ್ದಾರೆ. ಆರ್ಎಸ್ಎಸ್ ಜನರು ಸರ್ದಾರ್ ಪಟೇಲ್ ಮತ್ತು ಗಾಂಧೀಜಿ ಇಬ್ಬರಿಗೂ ವಿರೋಧಿಯಾಗಿದ್ದರು ಎಂದು ರಾಹುಲ್ ಭಾಷಣದಲ್ಲಿ ಹೇಳಿದ್ದರು.