Webdunia - Bharat's app for daily news and videos

Install App

ಇತರ ರಾಜಕೀಯ ಪಕ್ಷಗಳಂತೆ ಕಾಂಗ್ರೆಸ್ ಸುಳ್ಳು ಭರವಸೆ ನೀಡುವುದಿಲ್ಲ: ಪ್ರಧಾನಿ ಸಿಂಗ್

Webdunia
ಬುಧವಾರ, 18 ಡಿಸೆಂಬರ್ 2013 (15:12 IST)
PTI
ದೆಹಲಿಯಲ್ಲಿ ಸರಕಾರ ರಚಿಸಲು ಕಾಂಗ್ರೆಸ್ ಪಕ್ಷ 18 ಷರತ್ತುಗಳನ್ನು ಪೂರೈಸಬೇಕು ಎನ್ನುವ ಆಮ್ ಆದ್ಮಿ ಪಕ್ಷದ ಬೇಡಿಕೆ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ ಪ್ರಧಾನಮಂತ್ರಿ ಮನಮೋಹನ್ ಸಿಂಗ್, ಇತರ ರಾಜಕೀಯ ಪಕ್ಷಗಳಂತೆ ಅಸಾಧ್ಯವಾದ ಭರವಸೆಗಳನ್ನು ಕಾಂಗ್ರೆಸ್ ಪಕ್ಷ ನೀಡುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ಆಮ್ ಆದ್ಮಿ ಪಕ್ಷದ ಹೆಸರನ್ನು ಉಲ್ಲೇಖಿಸದ ಪ್ರಧಾನಿ ಸಿಂಗ್, ವಾಸ್ತವತೆಗೆ ಹತ್ತಿರವಾಗಿರುವ ಮತ್ತು ಈಡೇರಿಸಲು ಸಾಧ್ಯವಾಗುವಂತಹ ಭರವಸೆಗಳನ್ನು ಮಾತ್ರ ಕಾಂಗ್ರೆಸ್ ನೀಡುತ್ತದೆ ಎಂದು ಹೇಳಿದ್ದಾರೆ.

ಕಾಂಗ್ರೆಸ್ ಪಕ್ಷದ ಸಂಸದರ ಸಭೆಯಲ್ಲಿ ಪ್ರಧಾನಿ ಮನಮೋಹನ್ ಸಿಂಗ್, ಆಮ್ ಆದ್ಮಿ ಪಕ್ಷದ ಬೇಡಿಕೆಗಳ ಬಗ್ಗೆ ಚರ್ಚಿಸಿದ್ದಾರೆ.

ಸಂಸದರ ಸಭೆಯಲ್ಲಿ ಮಾತನಾಡಿದ ಯುಪಿಎ ಮುಖ್ಯಸ್ಥೆ ಸೋನಿಯಾ ಗಾಂಧಿ, ಪಕ್ಷದ ಮುಖಂಡರು ಶಿಸ್ತು ಮತ್ತು ಏಕತೆಗೆ ಆದ್ಯತೆ ನೀಡಬೇಕು. ವಿಧಾನಸಭೆ ಚುನಾವಣೆಗಳ ಬಗ್ಗೆ ಎದೆಗುಂದುವುದು ಬೇಡ ಎಂದು ಸಲಹೆ ನೀಡಿದರು.

ಯುಪಿಎ ಸರಕಾರ ತನ್ನ ಅಧಿಕಾರವಧಿಯಲ್ಲಿ ಹೆಚ್ಚಿನ ಜನಪರ ಯೋಜನೆಗಳನ್ನು ಜಾರಿಗೆ ತಂದಿದೆ. ಆದರೆ, ಯೋಜನೆಗಳ ಬಗ್ಗೆ ಜನತೆಗೆ ಸರಿಯಾದ ಮಾಹಿತಿ ನೀಡದಿರುವುದು ಚುನಾವಣೆಯಲ್ಲಿನ ಸೋಲಿಗೆ ಕಾರಣವಾಗಿದೆ ಎಂದು ಸೋನಿಯಾ ಗಾಂಧಿ ಅಸಮಾಧಾನ ವ್ಯಕ್ತಪಡಿಸಿದರು.

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments