ಉತ್ತರಾಖಂಡದಲ್ಲಿ ವಿಧಾನಸಭಾ ಚುನಾವಣೆ ಮತದಾನ ಪ್ರಗತಿಯಲ್ಲಿದ್ದು, ಕಾಂಗ್ರೆಸ್ ಪಕ್ಷದ ಮುಖ್ಯಮಂತ್ರಿ ಅಭ್ಯರ್ಥಿ ಎಂದೇ ಬಿಂಬಿತವಾಗಿರುವ ಕೇಂದ್ರ ಸಚಿವ ಹರೀಶ್ ರಾವತ್ ಅವರು ಈ ಬಾರಿ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಆಡಳಿತಾರೂಢ ಬಿಜೆಪಿ ಸರಕಾರದ ಒಳ ಜಗಳದಿಂದ ಬೇಸತ್ತಿರುವ ರಾಜ್ಯದ ಜನರು ಅಭಿವೃದ್ಧಿಗೆ ಶ್ರಮಿಸುವ ಕಾಂಗ್ರೆಸ್ ಪಕ್ಷವನ್ನು ಜನರು ಆಯ್ಕೆ ಮಾಡುವ ಬಗ್ಗೆ ತಮಗೆ ವಿಶ್ವಾಸವಿದೆ ಎಂದು ರಾವತ್ ಸುದ್ದಿಗಾರರಿಗೆ ತಿಳಿಸಿದ್ದಾರೆ.
ಆಡಳಿತಾರೂಢ ಸರಕಾರವು ನಡೆಸಿರುವ ವ್ಯಾಪಕ ಭ್ರಷ್ಟಾಚಾರವು ಜನರಿಗೆ ತೀವ್ರ ಬೇಸರ ತರಿಸಿದೆ ಎಂದು ಅವರು ತಿಳಿಸಿದ್ದಾರೆ.