Webdunia - Bharat's app for daily news and videos

Install App

ಕರ್ನಾಟಕದಿಂದ ಕೂರ್ಗ್ ರಾಜ್ಯ ಬೇಡಿಕೆಗೆ ಕೇಂದ್ರ ತಣ್ಣೀರು

Webdunia
ಬುಧವಾರ, 16 ಮಾರ್ಚ್ 2011 (10:14 IST)
ಕರ್ನಾಟಕದಿಂದ ಕೂರ್ಗ್ ಪ್ರತ್ಯೇಕ ರಾಜ್ಯ ಸೃಷ್ಟಿಸಬೇಕು ಎಂಬ ಬಹುಕಾಲದ ಕೂಗಿಗೆ ಕೇಂದ್ರ ಸರಕಾರ ತಣ್ಣೀರು ಎರಚಿದೆ. ಹಲವು ರಾಜ್ಯಗಳನ್ನು ವಿಭಜಿಸಿ ಪುಟ್ಟ ರಾಜ್ಯಗಳನ್ನು ಅಸ್ತಿತ್ವಕ್ಕೆ ತರುವ ಸಂಬಂಧ ಯಾವ ರಾಜ್ಯವೂ ಇದುವರೆಗೆ ಪ್ರಸ್ತಾವನೆ ಸಲ್ಲಿಸಿಲ್ಲ. ಹಾಗಾಗಿ ಸದ್ಯಕ್ಕೆ ಎರಡನೇ ರಾಜ್ಯಗಳ ಪುನರ್ ರಚನಾ ಆಯೋಗ ರಚಿಸುವ ಪ್ರಶ್ನೆಯಿಲ್ಲ ಎಂದು ಹೇಳಿದೆ.

ಈ ಹೊತ್ತಿನಲ್ಲಿ ರಾಜ್ಯಗಳ ಪುನರ್ ರಚನಾ ಆಯೋಗವನ್ನು ರಚಿಸುವುದನ್ನು ಕೇಂದ್ರ ಸರಕಾರ ಪರಿಗಣಿಸುವುದಿಲ್ಲ. ಹೊಸ ರಾಜ್ಯ ರಚನೆ ಸಂಬಂಧ ಯಾವುದೇ ರಾಜ್ಯ ಸರಕಾರದಿಂದ ನಾವು ಪ್ರಸ್ತಾವನೆಯನ್ನು ಸ್ವೀಕರಿಸಿಲ್ಲ ಎಂದು ಕೇಂದ್ರ ಗೃಹ ಖಾತೆಯ ರಾಜ್ಯ ಸಚಿವ ಗುರುದಾಸ್ ಕಾಮತ್ ಸ್ಪಷ್ಟಪಡಿಸಿದ್ದಾರೆ.

ಆಂಧ್ರಪ್ರದೇಶದಿಂದ ತೆಲಂಗಾಣ, ಮಹಾರಾಷ್ಟ್ರದಿಂದ ವಿದರ್ಭ, ಉತ್ತರ ಪ್ರದೇಶ ಮತ್ತು ಮಧ್ಯಪ್ರದೇಶದಿಂದ ಬಂದೇಲ್‌ಖಂಡ್ ರಾಜ್ಯಗಳನ್ನು ಸೃಷ್ಟಿಸಬೇಕು ಎಂದು ವೈಯಕ್ತಿಕ ಮತ್ತು ಸಂಘಟನೆಗಳಿಂದ ಬೇಡಿಕೆಗಳು ಮತ್ತು ಪ್ರಸ್ತಾವನೆಗಳು ಬರುತ್ತಿವೆ ಎಂದು ಸಚಿವರು ಲೋಕಸಭೆಗೆ ತಿಳಿಸಿದರು.

ಪ್ರಸಕ್ತ 28 ರಾಜ್ಯ ಹಾಗೂ ಏಳು ಕೇಂದ್ರಾಡಳಿತ ಪ್ರದೇಶಗಳನ್ನು ಭಾರತ ಹೊಂದಿದ್ದು, ಇವುಗಳಿಂದ ಇನ್ನಷ್ಟು ರಾಜ್ಯಗಳನ್ನು ಸೃಷ್ಟಿಸಬೇಕು ಎಂಬ ಬೇಡಿಕೆ ಕೇಳಿ ಬರುತ್ತಿದೆ. ಇದರಲ್ಲಿ ಪ್ರಸಕ್ತ ಅತಿ ಹೆಚ್ಚು ಹೋರಾಟ ನಡೆಯುತ್ತಿರುವುದು ತೆಲಂಗಾಣಕ್ಕೆ.

ಉತ್ತರ ಪ್ರದೇಶ, ಛತ್ತೀಸ್‌ಗಢ ಮತ್ತು ಬಿಹಾರದಿಂದ ಭೋಜಪುರ್, ಗುಜರಾತಿನಿಂದ ಸೌರಾಷ್ಟ್ರ, ಕರ್ನಾಟಕದಿಂದ ಕೂರ್ಗ್, ಪಶ್ಚಿಮ ಒರಿಸ್ಸಾದಿಂದ ಕೋಶಲಾಂಚಲ, ಪಶ್ಚಿಮ ಬಂಗಾಲದಿಂದ ಗೂರ್ಖಾಲ್ಯಾಂಡ್, ಉತ್ತರ ಬಿಹಾರ, ಉತ್ತರ ಪ್ರದೇಶ ಮತ್ತು ಪಶ್ಚಿಮ ಬಂಗಾಲದಿಂದ ಮಿಥಿಲಾಂಚಲ ರಾಜ್ಯಗಳನ್ನು ರಚಿಸಬೇಕು ಎಂಬ ಬೇಡಿಕೆಗಳು ಕೂಡ ಇವೆ ಎಂದು ಸಚಿವರು ಮಾಹಿತಿ ನೀಡಿದರು.

ಎಲ್ಲಾ ಸಂಬಂಧಿತ ಅಂಶಗಳನ್ನು ಗಣನೆಗೆ ತೆಗೆದುಕೊಂಡ ಬಳಿಕ ಹೊಸ ರಾಜ್ಯಗಳ ರಚನೆ ಸಂಬಂಧ ಸರಕಾರ ನಿರ್ಧಾರ ತೆಗೆದುಕೊಳ್ಳುತ್ತದೆ. ಸರಕಾರದ ನಿರ್ಧಾರವು ಜನರ ಒಮ್ಮತಾಭಿಪ್ರಾಯ ಮತ್ತು ಅಗತ್ಯಗಳನ್ನು ಅವಲಂಭಿಸಿರುತ್ತದೆ ಎಂದು ತಿಳಿಸಿದರು.

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಧರ್ಮಸ್ಥಳ ಪ್ರಕರಣ: ರಾಜ್ಯ ಸರ್ಕಾರದಿಂದ ಎಸ್‌ಐಟಿಗೆ 20 ಪೊಲೀಸ್ ಅಧಿಕಾರಿಗಳ ನಿಯೋಜನೆ

ಬಾ ನಲ್ಲ ಮಧುಚಂದ್ರಕೆ ಪ್ರಕರಣ: ಪತಿ ಕೊಂದು ಜೈಲು ಸೇರಿದ್ದ ಸೋನಂ ನಡವಳಿಕೆಗೆ ಶಾಕ್

ಸುಳ್ಳು, ವಂಚನೆ ಮಾಡೋದೇ ಕಾಂಗ್ರೆಸ್ ಸರ್ಕಾರದ ಕೆಲಸ: ಛಲವಾದಿ ನಾರಾಯಣಸ್ವಾಮಿ

ಆರ್ಕಿಟೆಕ್ಚರ್ ವಿದ್ಯಾರ್ಥಿ ಆತ್ಮಹತ್ಯೆ ಪ್ರಕರಣ: ಮೂವರು ಕ್ಲಾಸ್‌ಮೇಟ್‌ಗಳ ವಿರುದ್ಧ ಎಫ್‌ಐಆರ್‌

ಕರ್ನಾಟಕದ ಲೋಕಸಭಾ ಕ್ಷೇತ್ರದಲ್ಲೂ ಕಳ್ಳಾಟ ನಡೆದಿದೆ: ರಾಹುಲ್ ಗಾಂಧಿ ಗಂಭೀರ ಆರೋಪ

Show comments