Select Your Language

Notifications

webdunia
webdunia
webdunia
webdunia

ಕಾಂಗ್ರೆಸ್ ನಾಯಕರಿಂದ ಮಂಗಳ ಗ್ರಹದಿಂದ ಬಂದವರಂತೆ ವರ್ತನೆ: ಮೋದಿ ಲೇವಡಿ

ಕಾಂಗ್ರೆಸ್ ನಾಯಕರಿಂದ ಮಂಗಳ ಗ್ರಹದಿಂದ ಬಂದವರಂತೆ ವರ್ತನೆ: ಮೋದಿ ಲೇವಡಿ
ಮಾಂಡ್ಲಾ , ಶನಿವಾರ, 29 ಮಾರ್ಚ್ 2014 (15:57 IST)
PTI
ದೇಶದ ಜನತೆಗೆ ಉತ್ತಮ ಜೀವನ ಕಲ್ಪಿಸಲು ಕಾಂಗ್ರೆಸ್ ಮುಖಂಡರು ಮೀನಾಮೇಷ ಎಣಿಸುತ್ತಿದ್ದಾರೆ. ಕಾಂಗ್ರೆಸ್ ನಾಯಕರು ತಮಗೆ ಭೂಮಿಗೂ ಯಾವುದೇ ಸಂಬಂಧವಿಲ್ಲ ಮಂಗಳಗ್ರಹದಿಂದ ಬಂದವರಂತೆ ವರ್ತಿಸುತ್ತಿದ್ದಾರೆ ಎಂದು ಬಿಜೆಪಿ ಪ್ರಧಾನಿ ಅಭ್ಯರ್ಥಿ ನರೇಂದ್ರ ಮೋದಿ ಕಿಡಿಕಾರಿದ್ದಾರೆ.

ಕಾಂಗ್ರೆಸ್ ಪಕ್ಷದ ಪ್ರಣಾಳಿಕೆ ಮೋಸದ ಪ್ರಣಾಳಿಕೆಯಾಗಿದೆ. 2014ರ ಲೋಕಸಭೆ ಚುನಾವಣೆ ಹಣದುಬ್ಬರ ಮತ್ತು ಭ್ರಷ್ಟಾಚಾರಕ್ಕೆ ಸಂಬಂಧಿಸಿದ್ದಾಗಿದೆ. ಕಾಂಗ್ರೆಸ್ ಮುಕ್ತ ಭಾರತ ನಿರ್ಮಾಣ ಮಾಡಿ ಎಂದು ಕರೆ ನೀಡಿದ್ದಾರೆ.

ಸ್ವಾತಂತ್ರ್ಯ ನಂತರ ಮೊದಲ ಬಾರಿಗೆ ದೇಶದ ಜನತೆ ಭ್ರಷ್ಟಾಚಾರ ಮತ್ತು ಹಗಲು ದರೋಡೆಯ ವಿರುದ್ಧ ಸಮರ ಸಾರಿದ್ದಾರೆ. ಇದೊಂದು ಸಂತಸದ ಬೆಳವಣಿಗೆಯಾಗಿದೆ ಎಂದರು.

ಕೇಂದ್ರದಲ್ಲಿ ಸರಕಾರ ಅಧಿಕಾರಕ್ಕೆ ಬಂದ 100 ದಿನಗಳೊಳಗಾಗಿ ಹಣದುಬ್ಬರವನ್ನು ಇಳಿಸುವುದಾಗಿ ಜನತೆಗೆ ಭರವಸೆ ನೀಡಿತ್ತು. ಆದರೆ, ಹಣದುಬ್ಬರ ಇಳಿಕೆಯಾಗಿದೆಯೇ ಎಂದು ಮೋದಿ ನೆರೆದ ಜನಸ್ತೋಮವನ್ನು ಪ್ರಶ್ನಿಸಿದರು.

ಪ್ರಜಾಪ್ರಭುತ್ವ ವಿರೋಧಿ ಮತ್ತು ಜನತೆಯ ವಿರೋಧಿಯಾಗಿರುವ ಕಾಂಗ್ರೆಸ್ ಪಕ್ಷಕ್ಕೆ ದೇಶವನ್ನು ಆಳುವ ಯಾವುದೇ ಹಕ್ಕಿಲ್ಲ ಎಂದು ಬಿಜೆಪಿ ಪ್ರಧಾನಿ ಅಭ್ಯರ್ಥಿ ನರೇಂದ್ರ ಮೋದಿ ಗುಡುಗಿದ್ದಾರೆ.

Share this Story:

Follow Webdunia kannada