Webdunia - Bharat's app for daily news and videos

Install App

ಕಾರಣ ಕೇಳದೆ ಅಧಿಕಾರಿಯನ್ನು ವಜಾ ಮಾಡ್ಬಹುದು: ಸುಪ್ರೀಂ

Webdunia
ಶುಕ್ರವಾರ, 1 ಏಪ್ರಿಲ್ 2011 (09:52 IST)
ರಾಷ್ಟ್ರದ ಹಿತಾಸಕ್ತಿಯ ಹಿನ್ನೆಲೆಯಲ್ಲಿ ದೇಶದ ಸಂವಿಧಾನದ ವಿಶೇಷ ಅಧಿಕಾರವನ್ನು ಬಳಸಿಕೊಂಡು ಯಾವುದೇ ಅಧಿಕಾರಿಯನ್ನು ವಿಚಾರಿಸದೆ ಅಥವಾ ವಿವರಣೆ ಕೇಳದೆ ವಜಾ ಮಾಡಬಹುದು ಎಂದು ಸರ್ವೋಚ್ಚನ್ಯಾಯಾಲಯ ತಿಳಿಸಿದ್ದು, ಚೀನಾದಲ್ಲಿ ನಿಯೋಜನೆಗೊಂಡಿದ್ದ ಹಿರಿಯ ರಾಜತಾಂತ್ರಿಕ ಅಧಿಕಾರಿಯನ್ನು ವಜಾ ಮಾಡಿದ ಕ್ರಮವನ್ನು ಎತ್ತಿಹಿಡಿದಿದೆ.

ನ್ಯಾಯಮೂರ್ತಿಗಳಾದ ಮುಕುಂದಂ ಶರ್ಮಾ ಮತ್ತು ಎ.ಆರ್.ದವೆ ಅವರನ್ನೊಳಗೊಂಡ ಸುಪ್ರೀಂ ಪೀಠ,ರಾಷ್ಟ್ರೀಯ ಸುರಕ್ಷತೆಗೆ ಧಕ್ಕೆ ತರುವ, ವಿಶೇಷ ಸಂದರ್ಭದಂತಹ ಪ್ರಕರಣಗಳಲ್ಲಿ ಶಿಕ್ಷೆ ವಿಧಿಸುವ ಅಧಿಕಾರ ಹೊಂದಿರುವ ಅಧಿಕಾರಿಯನ್ನು ಯಾವುದೇ ಕಾರಣ ನೀಡದೆ ವಜಾ ಮಾಡಬಹುದಾಗಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ.

ಸಂವಿಧಾನದ 311ನೇ ಕಲಂ ಅನ್ನು ಉದಾಹರಿಸಿದ ಪೀಠ ವಿಶೇಷ ಹಾಗೂ ವಿಶಿಷ್ಟ ಸಂದರ್ಭಗಳಲ್ಲಿ ಉಪನಿಯಮ(ಎ)(ಬಿ) ಮತ್ತು (ಸಿ) ಪ್ರಕಾರ ಅಧಿಕಾರವನ್ನು ಉಪಯೋಗಿಸಬಹುದಾಗಿದೆ. ಶಿಸ್ತುಕ್ರಮ ಕೈಗೊಳ್ಳುವ ಅಧಿಕಾರಿಗೆ ವಜಾಶಿಕ್ಷೆ ವಿಧಿಸಿರುವುದಕ್ಕೆ ಕಾರಣಗಳನ್ನು ವಿವರಿಸಬೇಕಾದ ಅಗತ್ಯವಿಲ್ಲ ಎಂದು ಹೇಳಿದೆ.

ತಮ್ಮ ಕರ್ತವ್ಯ ನಿರ್ವಹಣೆಯ ಭಾಗವಾಗಿ ಶಿಸ್ತುಕ್ರಮ ಕೈಗೊಳ್ಳುವ ಅಧಿಕಾರಿ ಉಪನಿಯಮ (ಎ)(ಬಿ) ಮತ್ತು (ಸಿ) ಪ್ರಕಾರ ವಜಾ ಶಿಕ್ಷೆ ನೀಡಿದ್ದ ಬಗ್ಗೆ ಕಾರಣಗಳನ್ನು ಬಹಿರಂಗಪಡಿಸುವಂತಿಲ್ಲ ಎಂದು ಪೀಠ ತಿಳಿಸಿದೆ.

ರಾಜತಾಂತ್ರಿಕ ಅಧಿಕಾರಿ ಎಂ.ಎಂ.ಶರ್ಮಾ ಅವರನ್ನು ವಜಾ ಮಾಡಿದ ಬಗ್ಗೆ ವಿಸ್ತ್ರತ ವಿವರಣೆ ನೀಡಬೇಕು ಎಂಬ ದಿಲ್ಲಿ ಹೈಕೋರ್ಟ್ ಆದೇಶವನ್ನು ಕೇಂದ್ರ ಸರಕಾರ ಸುಪ್ರೀಂಕೋರ್ಟ್‌ನಲ್ಲಿ ಪ್ರಶ್ನಿಸಿತ್ತು. ಮೊದಲ ಕಾರ್ಯದರ್ಶಿ ಹುದ್ದೆಯಲ್ಲಿದ್ದ ಶರ್ಮಾ ಆತಿಥೇಯ ರಾಷ್ಟ್ರದಲ್ಲಿ ವಿದೇಶಿ ಪ್ರಜೆಗಳ ಜತೆ ಅನಧಿಕೃತ ಮತ್ತು ಅನಗತ್ಯ ಸಂಬಂಧ ಹೊಂದಿದ್ದರು ಎಂಬ ಆರೋಪ ಹೊರಿಸಲಾಗಿತ್ತು.

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅಪ್ರಾಪ್ತ ಮಗಳ ಮೇಲೆ ಮೂರು ವರ್ಷ ಲೈಂಗಿಕ ದೌರ್ಜನ್ಯ: ಪಾಪಿ ಅಪ್ಪನಿಗೆ ಜೀವಾವಧಿ ಶಿಕ್ಷೆ

ಯೋಗಿ ಸಿಎಂ ಆದ್ಮೇಲೆ ಯುಪಿಯಲ್ಲಿ 15 ಸಾವಿರ ಎನ್‌ಕೌಂಟರ್‌, 30 ಸಾವಿರ ಕ್ರಿಮಿನಲ್‌ಗಳ ಅರೆಸ್ಟ್‌

ಜಮೀನು ಒತ್ತುವರಿ ಪ್ರಕರಣ: ನ್ಯಾಯಾಂಗ ನಿಂದನೆ ಪ್ರಕರಣದಲ್ಲಿ ಕುಮಾರಸ್ವಾಮಿಗೆ ಬಿಗ್ ರಿಲೀಫ್‌

ಭಿಕ್ಷಾಟನೆಯಲ್ಲಿ ತೊಡಗಿರುವ ಮಕ್ಕಳ ಡಿಎನ್‌ಎ ಟೆಸ್ಟ್‌ಗೆ ಮುಂದಾದ ಪಂಜಾಬ್ ಸರ್ಕಾರ

ಶುಭಾಂಶು ಶುಕ್ಲಾ ಆರೋಗ್ಯದ ಬಗ್ಗೆ ಬಿಗ್ ಅಪ್ಡೇಟ್ ಕೊಟ್ಟ ಇಸ್ರೋ

Show comments