Webdunia - Bharat's app for daily news and videos

Install App

ಕಾಶ್ಮೀರದಲ್ಲಿ ಮಾಡಿದಂತೆ ಲಿಬಿಯಾದಲ್ಲೂ ಮಾಡ್ತಿದ್ದೇವೆ!: ಗಡಾಫಿ

Webdunia
ಶನಿವಾರ, 5 ಮಾರ್ಚ್ 2011 (16:44 IST)
ಭಾರತ ಸರಕಾರ ಕಾಶ್ಮೀರಿಗಳ ಮೇಲೆ ಕೈಗೊಳ್ಳುತ್ತಿರುವ ಕ್ರಮಗಳು ಹಾಗೂ ಲಿಬಿಯಾದಲ್ಲಿ ತನ್ನ ಜನಗಳ ವಿರುದ್ಧ ಕೈಗೊಂಡಿರುವ ಕ್ರಮಗಳು ಎರಡೂ ಒಂದೇ ಎಂದು ಲಿಬಿಯಾ ಅಧ್ಯಕ್ಷ ಮೊಮ್ಮರ್ ಗಡಾಫಿ ಕಳೆದ ವಾರ ಪ್ರಧಾನಿ ಡಾ.ಮನಮೋಹನ್ ಸಿಂಗ್ ಅವರಿಗೆ ಹೇಳುವ ಮೂಲಕ ತನ್ನ ಕ್ರಮವನ್ನು ಬಲವಾಗಿ ಸಮರ್ಥಿಸಿಕೊಂಡಿದ್ದಾರೆ.!

ಲಿಬಿಯಾದಲ್ಲಿ ಸಿವಿಲ್ ಯುದ್ಧ ಆರಂಭವಾಗುತ್ತಿದ್ದಂತೆಯೇ ತನ್ನ ಕ್ರಮಗಳನ್ನು ಬೆಂಬಲಿಸುವಂತೆ ಕೋರಿ ವಿಶ್ವಸಂಸ್ಥೆ ಸಭೆಗೂ ಮುನ್ನ ಗಡಾಫಿ ಭಾರತದ ಪ್ರಧಾನಿ ಸಿಂಗ್ ಅವರಲ್ಲಿ ಈ ರೀತಿ ವಿನಂತಿಸಿಕೊಂಡಿದ್ದರು. ಲಿಬಿಯಾದಲ್ಲಿನ ಬೆಳವಣಿಗೆ ಕುರಿತು ವಿಶ್ವಸಂಸ್ಥೆ ಭದ್ರತಾ ಮಂಡಳಿಯಲ್ಲಿ ಫೆಬ್ರುವರಿ 26ರಂದು ಚರ್ಚೆ ನಡೆದಿತ್ತು.

ಗಡಾಫಿಯನ್ನು ಅಂತಾರಾಷ್ಟ್ರೀಯ ಕ್ರಿಮಿನಲ್ ನ್ಯಾಯಾಲಯದಲ್ಲಿ ಹಾಜರುಪಡಿಸುವಂತೆ ಆಫ್ರಿಕನ್ ಮತ್ತು ಯುರೋಪಿಯನ್ ದೇಶಗಳು ಆಗ್ರಹಿಸಿದ್ದು, ವಿಶ್ವಸಂಸ್ಥೆಯಲ್ಲಿ ಲಿಬಿಯಾ ರಾಯಭಾರಿ ಕೂಡ ಪ್ರತಿಭಟನಾಕಾರರ ಜೊತೆ ಕೈಜೋಡಿಸಿದ ನಂತರ ಗಡಾಫಿ ಅವರು ಲಿಬಿಯಾವನ್ನು ಬೆಂಬಲಿಸುವಂತೆ ಭಾರತಕ್ಕೆ ಮನವಿ ಮಾಡಿಕೊಂಡಿದ್ದರು.

ಲಿಬಿಯಾ ವಿರುದ್ಧ ದಿಗ್ಬಂಧನ ವಿಧಿಸಲು ವಿಶ್ವಸಂಸ್ಥೆ ಭದ್ರತಾ ಮಂಡಳಿ ನಿರ್ಧರಿಸಿದ್ದು, ಈ ಸಂದರ್ಭದಲ್ಲಿ ಭಾರತ ಲಿಬಿಯಾ ಪರ ಮತ ಚಲಾಯಿಸುವಂತೆ ಗಡಾಫಿ ಕೋರಿದ್ದರು. ಆದರೆ ವಿಶ್ವಸಂಸ್ಥೆಯ ಭದ್ರತಾ ಮಂಡಳಿ ಸದಸ್ಯರು ಸಾಮೂಹಿಕ ನಿರ್ಧಾರದೊಂದಿಗೆ ಲಿಬಿಯಾ ಮೇಲೆ ನಿರ್ಬಂಧ ಹೇರಿದ್ದನ್ನು ಇಲ್ಲಿ ಸ್ಮರಿಸಬಹುದು.

ಕಳೆದ 41ವರ್ಷದಿಂದಲೂ ಲಿಬಿಯಾದ ಅಧ್ಯಕ್ಷಗಾದಿಯಲ್ಲಿರುವ ಸರ್ವಾಧಿಕಾರಿ ಮೊಮ್ಮರ್ ಗಡಾಫಿ ಪದತ್ಯಾಗ ಮಾಡುವಂತೆ ಆಗ್ರಹಿಸಿ ಜನರು ಪ್ರತಿಭಟನೆ ನಡೆಸುತ್ತಿದ್ದಾರೆ. ಆದರೆ ತಾನು ಯಾವುದೇ ಕಾರಣಕ್ಕೂ ಅಧ್ಯಕ್ಷಪಟ್ಟದಿಂದ ಕೆಳಗಿಳಿಯಲಾರೆ ಎಂದು ಪಟ್ಟು ಹಿಡಿದಿದ್ದಾರೆ. ಏತನ್ಮಧ್ಯೆ ಗಡಾಫಿ ನೇತೃತ್ವದ ಪಡೆ ಪ್ರತಿಭಟನಾಕಾರರನ್ನು ಹತ್ತಿಕ್ಕಲು ಗುಂಡಿನ ದಾಳಿ ನಡೆಸುತ್ತಿದೆ.

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಭಾರತವನ್ನು ನಿಂದಿಸಿದ ಡೊನಾಲ್ಡ್ ಟ್ರಂಪ್ ಮಾತು ಕೇಳಿದ್ರೆ ರೊಚ್ಚಿಗೇಳ್ತೀರಿ

ಗಾರ್ಡನ್ ಸಿಟಿಯನ್ನ ಜಿಹಾದಿ ಸಿಟಿ ಮಾಡಿದ ಕಾಂಗ್ರೆಸ್ ಸರ್ಕಾರಕ್ಕೆ ಧಿಕ್ಕಾರ: ಆರ್ ಅಶೋಕ್

Gold Price: ಪರಿಶುದ್ಧ ಚಿನ್ನದ ದರ ಇಂದು ಮತ್ತೆ ಬಲು ದುಬಾರಿ

ರಷ್ಯಾ ಉಕ್ರೇನ್ ಯುದ್ಧವಾದರೂ ನಿಲ್ಲಬಹುದು ಕಾಂಗ್ರೆಸ್ ಜಗಳ ನಿಲ್ಲಲ್ಲ: ವಿಜಯೇಂದ್ರ ಟಾಂಗ್

ಸಕ್ಸಸ್ ಸಿಗಬೇಕೆಂದರೆ ಏನು ಮಾಡಬೇಕು, ಇನ್ಫೋಸಿಸ್ ನಾರಾಯಣ ಮೂರ್ತಿ ಸಲಹೆಯೇನು

Show comments