Webdunia - Bharat's app for daily news and videos

Install App

ಕಾಸಿಗಾಗಿ ಓಟು; ಪ್ರಧಾನಿ ವಿರುದ್ಧ ಬಿಜೆಪಿಯಿಂದ ಹಕ್ಕುಚ್ಯುತಿ

Webdunia
ಮಂಗಳವಾರ, 22 ಮಾರ್ಚ್ 2011 (13:39 IST)
ಕಾಸಿಗಾಗಿ ಓಟು ಪ್ರಕರಣದ ಕುರಿತು ಪ್ರಧಾನ ಮಂತ್ರಿ ಮನಮೋಹನ್ ಸಿಂಗ್ ಸಂಸತ್ತಿನ ದಾರಿ ತಪ್ಪಿಸಲು ಯತ್ನಿಸಿದ್ದಾರೆ ಎಂದು ಆರೋಪಿಸಿರುವ ಪ್ರಮುಖ ಪ್ರತಿಪಕ್ಷ ಬಿಜೆಪಿ, ಅವರ ವಿರುದ್ಧ ಹಕ್ಕುಚ್ಯುತಿ ಮಂಡಿಸಿದೆ.

2008 ರ ಜುಲೈ ತಿಂಗಳಲ್ಲಿನ ನಡೆದ ವಿಶ್ವಾಸ ಮತದ ಸಂದರ್ಭದಲ್ಲಿ ಯಾವುದೇ ಸಂಸದರಿಗೆ ಲಂಚ ನೀಡಿರಲಿಲ್ಲ ಎಂದು ಪ್ರಧಾನಿಯವರು ಕಳೆದ ವಾರ ಸದನಕ್ಕೆ ಹೇಳಿಕೆ ನೀಡಿದ್ದರು.

ಇದರಿಂದ ಕುಪಿತಗೊಂಡಿದ್ದ ಬಿಜೆಪಿ, ಇಂದು ಪ್ರಧಾನಿ ವಿರುದ್ಧ ಹಕ್ಕುಚ್ಯುತಿ ಮಂಡಿಸಿತು. ಲೋಕಸಭೆಯ ಪ್ರತಿಪಕ್ಷದ ನಾಯಕಿ ಸುಷ್ಮಾ ಸ್ವರಾಜ್ ಅವರು ಹಕ್ಕುಚ್ಯುತಿ ಮಂಡನೆಯ ನೊಟೀಸನ್ನು ನೀಡಿದರು. ಇದನ್ನು ತಾನು ಪರಿಶೀಲನೆ ನಡೆಸುವುದಾಗಿ ಸ್ಪೀಕರ್ ಮೀರಾ ಕುಮಾರ್ ಸದನಕ್ಕೆ ತಿಳಿಸಿದರು.

ಬಿಜೆಪಿಯ ಹಕ್ಕುಚ್ಯುತಿ ಮಂಡನೆಯನ್ನು ಎಡಪಕ್ಷಗಳು ಕೂಡ ಬೆಂಬಲಿಸಿವೆ. ಬಿಜೆಪಿ ಹಕ್ಕುಚ್ಯುತಿ ನಿರ್ಣಯವನ್ನು ಕಾಂಗ್ರೆಸ್ ಸದಸ್ಯರು ತೀವ್ರವಾಗಿ ವಿರೋಧಿಸಿದರು. ಪ್ರತಿಪಕ್ಷಗಳ ವಿರುದ್ಧ ವಾಗ್ದಾಳಿ ನಡೆಸಿದರು. ಈ ಸಂದರ್ಭದಲ್ಲಿ ಲೋಕಸಭೆಯಲ್ಲಿ ಭಾರೀ ಕೋಲಾಹಲ ಸೃಷ್ಟಿಯಾಯಿತು.

ಈ ವಿಚಾರದ ಕುರಿತು ಸದನದಲ್ಲಿ ಚರ್ಚೆಗೆ ಅವಕಾಶ ನೀಡಬೇಕು ಎಂದು ಬಿಜೆಪಿ ಮತ್ತು ಎಡಪಕ್ಷಗಳು ಪಟ್ಟು ಹಿಡಿದಾಗ ಭಾರೀ ಗದ್ದಲ ಉಂಟಾಯಿತು. ಹಣಕಾಸು ಮಸೂದೆಗೆ ತಾವು ಅಡ್ಡಿ ಮಾಡುವುದಿಲ್ಲ, ಆದರೆ ಪ್ರಧಾನಿ ಹೇಳಿಕೆಯ ಕುರಿತು ಚರ್ಚೆ ನಡೆಯಬೇಕು ಎಂದು ಬಿಜೆಪಿ ಪಟ್ಟು ಹಿಡಿಯಿತು.

ಇದೇ ವೇಳೆ ಸುಷ್ಮಾ ಸ್ವರಾಜ್ ವಿರುದ್ಧ ಹಕ್ಕುಚ್ಯುತಿ ಮಂಡಿಸುವ ನಿರ್ಧಾರವನ್ನು ಕಾಂಗ್ರೆಸ್ ಪ್ರಕಟಿಸಿದೆ. ವಿಕಿಲೀಕ್ಸ್ ರಹಸ್ಯ ದಾಖಲೆ ಕುರಿತು ಪ್ರಧಾನಿ ಹೇಳಿಕೆ ನೀಡಿದ ನಂತರ ಸ್ಪೀಕರ್ ಮೀರಾ ಕುಮಾರ್ ಅವರ ಆದೇಶವನ್ನು ಧಿಕ್ಕರಿಸಿ ಪ್ರಧಾನಿಯವರಿಂದ ಸ್ಪಷ್ಟನೆ ಕೇಳಿದ್ದಕ್ಕಾಗಿ ಹಕ್ಕುಚ್ಯುತಿ ಮಂಡಿಸುವುದಾಗಿ ಹೇಳಿದೆ.

ಸಂಸತ್ತಿನ ನಿಯಮಗಳ ಪ್ರಕಾರ, ಪ್ರತಿಪಕ್ಷಗಳ ಒತ್ತಾಯದ ಮೇರೆಗೆ ಲೋಕಸಭೆಯಲ್ಲಿ ಸಚಿವರು ಅಥವಾ ಪ್ರಧಾನ ಮಂತ್ರಿ ಹೇಳಿಕೆ ನೀಡಿದ ನಂತರ ಅವರಿಂದ ಸ್ಪಷ್ಟನೆಯನ್ನು ಕೇಳುವಂತಿಲ್ಲ. ಇದಕ್ಕೆ ಅವಕಾಶ ಇರುವುದು ರಾಜ್ಯಸಭೆಯಲ್ಲಿ ಮಾತ್ರ.

ಪ್ರಧಾನಿ ಹೇಳಿಕೆ ಕುರಿತು ರಾಜ್ಯಸಭೆಯಲ್ಲಿ ಕೂಡ ಭಾರೀ ಕೋಲಾಹಲ ಸೃಷ್ಟಿಯಾಗಿತ್ತು. ಇದರಿಂದ ಕಲಾಪವನ್ನು ಕೆಲ ಕಾಲ ಮುಂದೂಡಲಾಯಿತು.

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ವರ್ಷದ ಹಿಂದೆ ಅಪಘಾತದಲ್ಲಿ ಕಾಲು ಕಳೆದುಕೊಂಡಿದ್ದ ಹೆಡ್‌ಕಾನ್‌ಸ್ಟೇಬಲ್‌ ಕ್ವಾಟ್ರಸ್‌ನಲ್ಲೇ ಆತ್ಮಹತ್ಯೆ

ಅತ್ಯಾಚಾರ ಪ್ರಕರಣ: ಇದೇ 30ರಂದು ಪ್ರಜ್ವಲ್ ರೇವಣ್ಣಗೆ ಜಾಮೀನಾ, ಜೈಲಾ, ಮಹತ್ವದ ತೀರ್ಪು

ಲೈವ್‌ನಲ್ಲಿ ವರದಿ ಮಾಡುತ್ತಿರುವಾಗಲೇ ಪ್ರವಾಹದಲ್ಲಿ ಕೊಚ್ಚಿ ಹೋದ ಪಾಕ್‌ ವರದಿಗಾರ, Viral Vdeo

ಶಾಸಕರು ಅಧಿಕಾರಿಗಳಿಗೆ ಕ್ಲಾಸ್ ತೆಗೆದುಕೊಳ್ಳುತ್ತಿರುವಾಗಲೇ ರಮ್ಮಿ ಆಡುತ್ತಾ ಕೂತಾ ಉಪ ಅರಣ್ಯ ಸಂರಕ್ಷಣಾಧಿಕಾರಿ

ನೂರಾರು ಹುಡುಗರ ಗುಂಪೊಂದು ಹಾವು ಹಿಡಿದು ಗುಡ್ಡವೇರಿದ ವಿಡಿಯೋ, ಭಯಾನಕವಾಗಿರುವ ಸಂಪ್ರದಾಯದ ಹಿಂದಿದೆ ನಂಬಿಕೆ

Show comments