Webdunia - Bharat's app for daily news and videos

Install App

ಕುಡುಕ ಅಪ್ಪನ ವಿರುದ್ಧ 12ರ ಹುಡುಗಿಯಿಂದ ದೂರು, ಬಂಧನ

Webdunia
ಭಾನುವಾರ, 20 ಮಾರ್ಚ್ 2011 (17:30 IST)
ಮಕ್ಕಳ ವಿದ್ಯಾಭ್ಯಾಸಕ್ಕೆ ತೊಂದರೆಯಾಗದಂತೆ ನೋಡಿಕೊಳ್ಳಬೇಕಾದ ಹೊಣೆಗಾರಿಕೆ ಹೆತ್ತವರದ್ದು. ಆದರೆ ಹೆತ್ತವರೇ ಕಿರಿಕಿರಿ ವಾತಾವರಣವನ್ನು ಸೃಷ್ಟಿಸಿದರೆ..? ಅದಕ್ಕೆ ಗುಜರಾತ್ ಬಾಲೆಯೊಬ್ಬಳು ಕಂಡುಕೊಂಡ ಮಾರ್ಗ ಪೊಲೀಸರಿಗೆ ದೂರು ನೀಡುವುದು.

ಹೌದು, ಗುಜರಾತಿನ ಕೆವಾಡಿಯಾ ಎಂಬಲ್ಲಿನ ಧಮಾದ್ರ ಗ್ರಾಮದ 12ರ ಹರೆಯದ ಬಾಲಕಿ ತನ್ನ ತಂದೆಯ ವಿರುದ್ಧ ಪೊಲೀಸರಿಗೆ ದೂರು ನೀಡಿದ್ದಾಳೆ. ಕುಡುಕ ತಂದೆ ವಿದ್ಯಾಭ್ಯಾಸಕ್ಕೆ ತೊಂದರೆಯನ್ನುಂಟು ಮಾಡುತ್ತಿದ್ದಾನೆ, ಪರೀಕ್ಷೆಗೆ ಓದಲು ಸಮಸ್ಯೆಯಾಗುತ್ತಿದೆ ಎಂದು ದೂರಿದ್ದಾಳೆ.

ಎಫ್ಐಆರ್ ದಾಖಲಿಸಿರುವ ಪೊಲೀಸರು, ಕುಡುಕ ಅಪ್ಪನನ್ನು ಬಂಧಿಸಿದ್ದಾರೆ.

ಏಳನೇ ತರಗತಿಯಲ್ಲಿ ಓದುತ್ತಿರುವ ಈ ವಿದ್ಯಾರ್ಥಿನಿಯ ಹೆಸರು ಶೋಭನಾ. ಸುಮಾರು 12 ಕಿಲೋ ಮೀಟರ್ ದೂರ ಸೈಕಲ್ ತುಳಿದುಕೊಂಡು ಏಕಾಂಗಿಯಾಗಿ ಶನಿವಾರ ಕೆವಾಡಿಯಾ ಪೊಲೀಸ್ ಠಾಣೆಗೆ ಬಂದ ಹುಡುಗಿ, ತಂದೆಯ ವಿರುದ್ಧ ದೂರು ದಾಖಲಿಸಿದಳು.

ನನ್ನ ಪರೀಕ್ಷೆಗಳು ಹತ್ತಿರ ಬರುತ್ತಿವೆ. ಆದರೆ ತಂದೆ ಕುಡಿದು ಮನೆಯವರ ಜತೆ ಗಲಾಟೆ ಮಾಡುವುದರಿಂದ ನನಗೆ ಓದಲು ಸಾಧ್ಯವಾಗುತ್ತಿಲ್ಲ. ತೊಂದರೆಯಾಗುತ್ತಿದೆ. ತಂದೆ ಪ್ರತಿದಿನ ಕುಡಿಯುತ್ತಾರೆ. ಬಳಿಕ ಗಲಾಟೆ ಮಾಡುತ್ತಾರೆ ಎಂದು ದೂರಿನಲ್ಲಿ ಶೋಭನಾ ನಮೂದಿಸಿದ್ದಾಳೆ.

ಪ್ರಕರಣ ದಾಖಲಿಸಿರುವ ಪೊಲೀಸರು, ಅಪ್ಪ ಚಂದು ತದ್ವಿಯನ್ನು ಬಂಧಿಸಿದ್ದಾರೆ. ಹುಡುಗಿಯ ವಿದ್ಯಾಭ್ಯಾಸಕ್ಕೆ ಪೂರಕ ವಾತಾವರಣ ಸೃಷ್ಟಿಸುವಂತೆ ಮನೆಯವರಿಗೆ ಸೂಚನೆ ನೀಡಿದ್ದಾರೆ.

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಹಿಮಾಚಲ ಮೇಘಸ್ಫೋಟದ ವೇಳೆ ಗರ್ಭಿಣಿ ಶಿಕ್ಷಕರನ್ನು ಹೊತ್ತೊಯ್ದ ವಿದ್ಯಾರ್ಥಿಗಳು, ಭಾರೀ ಮೆಚ್ಚುಗೆ

ನೈಜರ್‌ ಭಯೋತ್ಪಾದಕ ದಾಳಿ, ಇಬ್ಬರು ಭಾರತೀಯರು ಸಾವು, ಒಬ್ಬರ ಕಿಡ್ನ್ಯಾಪ್‌

ರೊಹಿಂಗ್ಯಾಗಳ ತಪಾಸಣೆಗೆ ಬಂದ ಶೋಭಾ ಕರಂದ್ಲಾಜೆ ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ

ಸಾಧನಾ ಸಮಾವೇಶ ಮುಗಿಸಿ ವಾ‍ಪಾಸ್ಸಾಗುತ್ತಿದ್ದ ಡಿಕೆ ಶಿವಕುಮಾರ್ ಬೆಂಗಾವಲು ವಾಹನ ಪಲ್ಟಿ, 4ಗಾಯ

ಸಿದ್ದರಾಮಯ್ಯನವರ ಹೆಸರನ್ನೇ ಪ್ರಧಾನಿ ಅಭ್ಯರ್ಥಿ ಎಂದು ಘೋಷಿಸಲಿ:ಛಲವಾದಿ ನಾರಾಯಣಸ್ವಾಮಿ

Show comments