Webdunia - Bharat's app for daily news and videos

Install App

ಕೇಜ್ರಿವಾಲ್ ಮೇಲೆ ಇಂಕ್ ಚೆಲ್ಲಿದ ಬಿಜೆಪಿ ಕಾರ್ಯಕರ್ತ

Webdunia
ಸೋಮವಾರ, 18 ನವೆಂಬರ್ 2013 (19:04 IST)
PR
PR
ನವದೆಹಲಿ: ಅಣ್ಣಾಹಜಾರೆ ಮುಂದಾಳತ್ವದ ಭ್ರಷ್ಟಾಚಾರ ನಿಗ್ರಹ ಪ್ರತಿಭಟನೆಯ ಸಂದರ್ಭದಲ್ಲಿ ಸಂಗ್ರಹಿಸಿದ ನಿಧಿಯನ್ನು ಕೇಜ್ರಿವಾಲ್ ದೆಹಲಿ ಚುನಾವಣೆಯಲ್ಲಿ ಆಮ್ ಆದ್ಮಿ ಪಕ್ಷದ ಪ್ರಚಾರಕ್ಕೆ ಬಳಸಿಕೊಂಡಿದ್ದಾರೆಯೇ? ಹೀಗೆಂದು ಅನೇಕ ಜನರು ಅಣ್ಣಾ ಹಜಾರೆ ಅವರಿಗೆ ಕೇಜ್ರಿವಾಲ್ ವಿರುದ್ಧ ದೂರು ನೀಡಿದ್ದಾರೆ. ಪತ್ರಿಕಾ ಗೋಷ್ಠಿಯಲ್ಲಿ ತಮ್ಮ ನಿಲುವನ್ನು ಸ್ಪಷ್ಟಪಡಿಸಿ, ತಾವು ತಪ್ಪಿತಸ್ಥರೆಂದು ಕಂಡುಬಂದರೆ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ ಎಂದು ಕೇಜ್ರಿವಾಲ್ ಹೇಳಿದರು. ಪತ್ರಿಕಾಗೋಷ್ಠಿಯಲ್ಲಿ ಅವರು ತಮ್ಮ ನಿಲುವನ್ನು ವಿವರಿಸುತ್ತಿದ್ದಾಗಲೇ ಮಹಾರಾಷ್ಟ್ರದ ಬಿಜೆಪಿ ಕಾರ್ಯಕರ್ತನೊಬ್ಬ ಅವರ ಮೇಲೆ ಮಸಿ ಚೆಲ್ಲಿದ ಮತ್ತು ಅಣ್ಣಾ ಹಜಾರೆ ಅವರನ್ನು ಬೆಂಬಲಿಸಿ ಘೋಷಣೆ ಕೂಗಿದ.ತಕ್ಷಣ ಕಾರ್ಯಕರ್ತನನ್ನು ಹಿಡಿದು ಹೊರಗೆ ಸಾಗಿಸಲಾಯಿತು.

ಅಣ್ಣಾ ಅವರಿಂದ ಕಳೆದ ರಾತ್ರಿ ನನಗೆ ಪತ್ರಸಿಕ್ಕಿತು.ಅನೇಕ ಜನರು ನನ್ನ ಮೇಲೆ ದೂರು ನೀಡಿದ್ದಾರೆಂದು ಹೇಳಿದರು. ಆಂದೋಳನ ಹಣವನ್ನು ಚುನಾವಣೆ ಪ್ರಚಾರಕ್ಕೆ ಬಳಸಿಕೊಂಡಿಲ್ಲವೆಂದು ಆಶಿಸುವುದಾಗಿ ಅಣ್ಣಾ ತಿಳಿಸಿದ್ದರು. ಈ ಕುರಿತು ಯಾವುದೇ ಮಾಜಿ ನ್ಯಾಯಾಧೀಶರ ತನಿಖೆಗೆ ಆದೇಶಿಸಬಹುದು ಎಂದು ಕೇಜ್ರಿವಾಲ್ ಹೇಳಿದರು.ನನ್ನ ವಿರುದ್ಧ ತೀರ್ಪು ಬಂದರೆ, ನಾನು ದೆಹಲಿ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ ಎಂದು ಅವರು ಹೇಳಿದರು.

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments