Webdunia - Bharat's app for daily news and videos

Install App

ಕೇವಲ ಒಬ್ಬ ವ್ಯಕ್ತಿಯಿಂದ ದೇಶ ಮುನ್ನಡೆಸಲು ಸಾಧ್ಯ ಎನ್ನುವ ಭ್ರಮೆಯಲ್ಲಿ ವಿಪಕ್ಷಗಳು: ರಾಹುಲ್

Webdunia
ಶುಕ್ರವಾರ, 27 ಸೆಪ್ಟಂಬರ್ 2013 (12:58 IST)
PTI
ಬುಡಕಟ್ಟು ಸಮುದಾಯ ಮತ್ತು ಬಡವರ ಕೈಗೆ ಅಧಿಕಾರ ನೀಡುವ ಮೂಲಕ ಅಭಿವೃದ್ಧಿ ಪಥದತ್ತ ಸಾಗುವುದು ಕಾಂಗ್ರೆಸ್ ಪಕ್ಷದ ಗುರಿಯಾಗಿದೆ.ವಿಪಕ್ಷಗಳು ಒಬ್ಬ ವ್ಯಕ್ತಿಯಿಂದ ದೇಶವನ್ನೇ ಮುನ್ನಡೆಸುವ ಭ್ರಮೆಯಲ್ಲಿದ್ದಾರೆ ಎಂದು ಕಾಂಗ್ರಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಬಿಜೆಪಿಗೆ ತಿರುಗೇಟು ನೀಡಿದ್ದಾರೆ.

ಕಳೆದ ಮೇ 25 ರಂದು ಮಾವೋವಾದಿಗಳ ದಾಳಿಯಲ್ಲಿ ಪ್ರಮುಖ ಕಾಂಗ್ರೆಸ್ ನಾಯಕರು ಹತ್ಯೆಗಿಡಾಗಿದ್ದ ನಂತರ, ಮೊದಲ ಬಾರಿಗೆ ರಾಜ್ಯದ ಎಲ್ಲಾ ಪ್ರಮುಖ ನಾಯಕರು ಪಾಲ್ಗೊಳ್ಳುವ ಸಭೆಯಲ್ಲಿ ಪಾಲ್ಗೊಳ್ಳುವ ಸಭೆಗೆ ರಾಹುಲ್ ಹಾಜರಾಗಿದ್ದಾರೆ.

ದೇಶವನ್ನು ಜನತೆ ಮುನ್ನಡೆಸುತ್ತಾರೆ ಎಂದು ನಾವು ನಂಬಿದ್ದೇವೆ ಎಂದು ಯಾರ ಹೆಸರನ್ನು ಉಲ್ಲೇಖಿಸಿದೇ ವ್ಯಂಗ್ಯವಾಡಿದ ಅವರು, ನನ್ನ ನಂಬಿಕೆಯ ಪ್ರಕಾರ ದೇಶದಲ್ಲಿ ಎರಡು ಬಗೆಯ ಜನರಿರುತ್ತಾರೆ. ಒಬ್ಬರು ಜನತೆಯ ಹಿತಾಸಕ್ತಿಯನ್ನು ಗಮನದಲ್ಲಿಟ್ಟುಕೊಂಡು ಹೋರಾಟ ನಡೆಸುತ್ತಾರೆ. ಕೆಲವರು ತಮಗಾಗಿ ಹೋರಾಟ ನಡೆಸುತ್ತಿರುತ್ತಾರೆ ಎಂದು ಲೇವಡಿ ಮಾಡಿದರು.

ಬಸ್ತಾರ್‌ ನಗರದ ಯುವಜನತೆ ಮುಂದೆ ಬಂದು ರಾಜಕೀಯ ವಾಹಿನಿಯಲ್ಲಿ ಮುಂಚೂಣಿಯಲ್ಲಿದ್ದು ಬಡವರ ಮತ್ತು ಬುಡಕಟ್ಟು ಸಮುದಾಯದ ಜನತೆಯ ಏಳಿಗೆಯಲ್ಲಿ ತೊಡಗಿಸಿಕೊಂಡಲ್ಲಿ ಅಂತಹ ಪ್ರಯತ್ನಗಳಿಗೆ ನಾನು ಸಂಪೂರ್ಣ ಬೆಂಬಲ ನೀಡುತ್ತೇನೆ ಎಂದು ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಭರವಸೆ ನೀಡಿದ್ದಾರೆ.

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments