Webdunia - Bharat's app for daily news and videos

Install App

ಕೇವಲ ಕಾನೂನು ಜಾರಿಯಿಂದ ಬಡತನ ನಿರ್ಮೂಲನೆಯಾಗುವುದಿಲ್ಲ: ಸೋನಿಯಾಗೆ ಮೋದಿ ತಿರುಗೇಟು

Webdunia
ಶುಕ್ರವಾರ, 29 ನವೆಂಬರ್ 2013 (13:14 IST)
PTI
ಕಾನೂನುಗಳಿಂದ ಮಾತ್ರ ಬಡತನ ನಿರ್ಮೂಲನೇ ಸಾಧ್ಯವಿಲ್ಲ. ಯುಪಿಎ ಸರಕಾರ ತನ್ನ ಅಧಿಕಾರವಧಿಯಲ್ಲಿ ನೀಡಿದ ಭರವಸೆಗಳನ್ನು ಈಡೇರಿಸಿಲ್ಲ.ದೇಶವನ್ನು ವಿನಾಶದ ಅಂಚಿಗೆ ತಳ್ಳಿದೆ ಎಂದು ಬಿಜೆಪಿ ಪ್ರಧಾನಿ ಅಭ್ಯರ್ಥಿ ನರೇಂದ್ರ ಮೋದಿ ಆರೋಪಿಸಿದ್ದಾರೆ.

ಚುನಾವಣೆ ಪ್ರಚಾರದಲ್ಲಿ ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ಯುಪಿಎ ಮುಖ್ಯಸ್ಥೆ ಸೋನಿಯಾ ಗಾಂಧಿ ಬಡವರ ಪರ ಯೋಜನೆಗಳನ್ನು ಜಾರಿ ಮಾಡಿದ್ದಾಗಿ ಹೇಳುತ್ತಾರೆ. ಆದರೆ, ಯೋಜನೆಗಳು ಬಡವರಿಗೆ ತಲುಪದಿದ್ದಲ್ಲಿ ಯಾವ ಪ್ರಯೋಜನ ಎಂದು ಟೀಕಿಸಿದ್ದಾರೆ.

ಬಡವರನ್ನು ಅಕ್ಷರಸ್ಥರನ್ನಾಗಿಸಬೇಕು ಎನ್ನುವ ಕಾಳಜಿಯಿಂದ ಅಂಬೇಡ್ಕರ್ ಸಂವಿಧಾನ ರಚಿಸಿದರು. ಆದರೆ, ಕಾಂಗ್ರೆಸ್ ಸರಕಾರ ಸಂವಿಧಾನ ಬದ್ಧ ಕರ್ತವ್ಯಗಳು ಮತ್ತು ಜವಾಬ್ದಾರಿಯನ್ನು ನಿರ್ವಹಿಸಲು ವಿಫಲವಾಗಿದೆ. ಕಾಂಗ್ರೆಸ್‌ನ 60 ವರ್ಷಗಳ ಅವಧಿ ದೇಶವನ್ನು ಅಧೋಗತಿಗೆ ಇಳಿಸಿದೆ ಎಂದು ಕಿಡಿಕಾರಿದರು.

ಒಂದು ವೇಳೆ ಸಿಂಹ ಎದುರಾದಲ್ಲಿ ಗನ್ ತೋರಿಸುವ ಬದಲು ಗನ್ ಲೈಸೆನ್ಸ್ ತೋರಿಸಿದರೆ ಬೆದರಿ ಹೋಗುತ್ತದೆಯೇ ಅದರಂತೆ, ಬಡವರಿಗಾಗಿ ಕೇವಲ ಕಾನೂನು ಜಾರಿ ಮಾಡಿದರೆ ಸಾಲದು ಅವುಗಳ ಜಾರಿಗೆ ಅತಿ ಮುಖ್ಯ ಎಂದು ತಿರುಗೇಟು ನೀಡಿದರು.

ಹಲವಾರು ರೈಲ್ವೆ ನಿಲ್ದಾಣಗಳಲ್ಲಿರುವ ಗೋದಾಮುಗಳಲ್ಲಿ ಧವಸ ಧಾನ್ಯ ಕೊಳೆಯುತ್ತಿರುವಾಗ ಬಡವರಿಗೆ ಹಂಚಿ ಎನ್ನುವ ಸುಪ್ರೀಂಕೋರ್ಟ್ ಆದೇಶವನ್ನು ಪಾಲಿಸದೇ ಬಡವರಿಗೆ ಯುಪಿಎ ಸರಕಾರ ಅನ್ಯಾಯವೆಸಗಿತು ಎಂದು ಬಿಜೆಪಿ ಪ್ರದಾನಿ ಅಭ್ಯರ್ಥಿ ನರೇಂದ್ರ ಮೋದಿ ಕಿಡಿಕಾರಿದರು.

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments