Webdunia - Bharat's app for daily news and videos

Install App

ಗೋಧ್ರಾ ನರಮೇಧ: ಪ್ರಮುಖ ಆರೋಪಿ ಇಸ್ಮಾಯಿಲ್ ಚುಂಗ ಸೆರೆ

Webdunia
ಶನಿವಾರ, 5 ಮಾರ್ಚ್ 2011 (12:19 IST)
ಗೋಧ್ರಾದಲ್ಲಿ ಮಕ್ಕಳು, ಮಹಿಳೆಯರ ಸಹಿತ 59 ಮಂದಿ ಕರಸೇವಕರಿದ್ದ ರೈಲಿಗೆ ಬೆಂಕಿ ಹಚ್ಚಿ ನರಮೇಧ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿ ಇಸ್ಮಾಯಿಲ್ ಯೂಸುಫ್ ಚುಂಗ ಎಂಬಾತನನ್ನು ಪೊಲೀಸರು ಬಂಧಿಸಿದ್ದು, ಗೋಧ್ರಾ ರೈಲ್ವೇ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.

2002 ರ ಫೆಬ್ರವರಿ 27ರಂದು ನಡೆದ ಘಟನೆಯ ಬಳಿಕ ತಲೆಮರೆಸಿಕೊಂಡಿದ್ದ ಈತನನ್ನು ಗುರುವಾರವೇ ಬಂಧಿಸಿದ್ದು, ಗುರುತು ಪತ್ತೆ ಹಚ್ಚುವ ಪೆರೇಡ್‌ಗಾಗಿ ಅಜ್ಞಾತ ಸ್ಥಳಕ್ಕೆ ಕರೆದೊಯ್ಯಲಾಗಿತ್ತು. ಸಾಬರಮತಿ ಎಕ್ಸ್‌ಪ್ರೆಸ್ ರೈಲಿನ ಎಸ್-6 ನಂಬರಿನ ಬೋಗಿಗೆ ಬೆಂಕಿ ಹಂಚ್ಚಿದವರಲ್ಲಿ ಇಸ್ಮಾಯಿಲ್ ಕೂಡ ಒಬ್ಬ. 16 ಮಂದಿ ತಲೆಮರೆಸಿಕೊಂಡಿದ್ದವರಲ್ಲಿ ಒಬ್ಬನಾಗಿರುವ ಈತನ ಬಂಧನವು ತನಿಖೆಯ ನಿಟ್ಟಿನಲ್ಲಿ ಗೋಧ್ರಾ ಪೊಲೀಸರ ಪ್ರಮುಖ ಯಶಸ್ಸು ಎಂದು ಹೇಳಲಾಗುತ್ತಿದೆ.

ಇದೊಂದು ಪೂರ್ವಯೋಜಿತ ಪಿತೂರಿ ಎಂಬ ವಾದವನ್ನು ಒಪ್ಪಿದ ನ್ಯಾಯಾಲಯವು ಕಳೆದ ಮಂಗಳವಾರವಷ್ಟೇ 11 ಮಂದಿಗೆ ಗಲ್ಲು ಶಿಕ್ಷೆ ಹಾಗೂ 20 ಮಂದಿಗೆ ಜೀವಾವಧಿ ಶಿಕ್ಷೆಯನ್ನು ವಿಧಿಸಿತ್ತು.

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅಧ್ಯಕ್ಷ ಸ್ಥಾನದಿಂದ ಕೆಳಗಿಳಿದ ಅಣ್ಣಾಮಲೈಗೆ ಮುಂದಿನ ಎಲೆಕ್ಷನ್‌ನಲ್ಲೂ ಟಿಕೆಟ್‌ ಡೌಟ್‌, ಕಾರಣ ಇಲ್ಲಿದೆ

ಧರ್ಮಸ್ಥಳ ಉತ್ಖನನ ವೇಳೆ ಕಂಡಿದ್ದೇನು: ಬಿಗ್ ಟ್ವಿಸ್ಟ್

ರಾಹುಲ್ ಗಾಂಧಿಯ ಚುನಾವಣಾ ಅಕ್ರಮ ಪ್ರತಿಭಟನೆ ಕಪಟ ನಾಟಕ: ಬಿವೈ ವಿಜಯೇಂದ್ರ

ನನ್ನನ್ನು ನಾನು ದ್ವೇಷಿಸುತ್ತೇನೆ, ನಾನು ಸೋತವನು: ಹೀಲಿಯಂ ಅನಿಲ ಸೇವಿಸಿ ಸಿಎ ಆತ್ಮಹತ್ಯೆ

ಧರ್ಮಸ್ಥಳದಲ್ಲಿ ಎರಡನೇ ದಿನ ಹುಡುಕಾಡುತ್ತಿರುವ ಎಸ್ಐಟಿ ತಂಡಕ್ಕೆ ಸಿಕ್ಕಿದ್ದೇನು

Show comments