Webdunia - Bharat's app for daily news and videos

Install App

ಚುನಾವಣಾ ಆಯೋಗದ ಆದೇಶಕ್ಕೆ ಕೊನೆಗೂ ತಲೆಬಾಗಿದ ಮಮತಾ

Webdunia
ಬುಧವಾರ, 9 ಏಪ್ರಿಲ್ 2014 (16:43 IST)
ಚುನಾವಣಾ ಆಯೋಗದ ನಿರ್ದೇಶನದಂತೆ ಸರಕಾರಿ ಅಧಿಕಾರಿಗಳನ್ನು ವರ್ಗಾಯಿಸಲು ಮಮತಾ ಬ್ಯಾನರ್ಜಿ ಸರಕಾರ ಒಪ್ಪಿಕೊಂಡಿದೆ ಎಂದು ಮೂಲಗಳು ತಿಳಿಸಿವೆ.
PTI

ಎಂಟು ಅಧಿಕಾರಿಗಳನ್ನು ಮತದಾನದ ಕರ್ತವ್ಯದಿಂದ ತೆಗೆದಿರುವುದನ್ನು ಮರುಪರಿಶೀಲಿಸುವಂತೆ ಸೋಮವಾರ ಪಶ್ಚಿಮ ಬಂಗಾಳ ಸರಕಾರ ಸಲ್ಲಿಸಿದ್ದ ಪ್ರಸ್ತಾವನೆಯನ್ನು ಚುನಾವಣಾ ಆಯೋಗ ತಿರಸ್ಕರಿಸಿದ ಗಂಟೆಗಳೊಳಗೆ ಸರಕಾರ ಈ ನಡೆಯನ್ನು ಕೈಗೊಂಡಿದೆ.

ಬುಧವಾರದ ಒಳಗೆ ರಾಜ್ಯದ ಎಂಟು ಅಧಿಕಾರಿಗಳನ್ನು ವರ್ಗಾವಣೆ ಮಾಡಬೇಕು ಮತ್ತು ಅವರ ಬದಲಿಗೆ ಚುನಾವಣೆ ಆಯೋಗ ನಿರ್ದೇಶಿಸಿದ ಅಧಿಕಾರಿಗಳನ್ನು ಮರುಭರ್ತಿ ಮಾಡಬೇಕು ಎಂದು ಆಯೋಗ ಸ್ಪಷ್ಟ ಪಡಿಸಿತ್ತು.

ಐವರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು, ಒಬ್ಬರು ಜಿಲ್ಲಾ ಮ್ಯಾಜಿಸ್ಟ್ರೇಟ್ ಮತ್ತು ಎರಡು ಹೆಚ್ಚುವರಿ ಜಿಲ್ಲಾ ಮ್ಯಾಜಿಸ್ಟ್ರೇಟ್‌ರವರನ್ನು ಅವರ ವಿರುದ್ಧ ಬಂದಿರುವ ದೂರಿನನ್ವಯ ವರ್ಗಾವಣೆ ಮಾಡಬೇಕು ಎಂದು ಆಯೋಗ ಸೋಮವಾರ ಸರಕಾರಕ್ಕೆ ಆದೇಶ ನೀಡಿತ್ತು,ಮತ್ತು ಮರುಭರ್ತಿಗೆ ಅಧಿಕಾರಿಗಳನ್ನು ಹೆಸರಿಸಿತ್ತು.

ಸೋಮವಾರ ಚುನಾವಣೆಯಲ್ಲಿ ಸಭೆಯೊಂದರಲ್ಲಿ ಮಾತನಾಡುತ್ತ ಮುಖ್ಯಮಂತ್ರಿ ಮಮತಾ "ಅಧಿಕಾರಿಗಳ ವರ್ಗಾವಣೆಯ ಆದೇಶವನ್ನು ಸ್ವೀಕರಿಸುವುದಿಲ್ಲ" ಎಂದು ಗುಡುಗಿದ್ದರು.

ವೆಬ್ದುನಿಯಾವನ್ನು ಓದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments