ವೈಎಸ್ಆರ್ ಕಾಂಗ್ರೆಸ್ ಪಕ್ಷದ ಅಧ್ಯಕ್ಷ ವೈ.ಎಸ್. ಜಗನ್ಮೋಹನ್ ರೆಡ್ಡಿಯವರ ಆರೋಗ್ಯದಲ್ಲಿ ಏರುಪೇರಾಗಿರುವುದರಿಂದ ಚಂಚಲಗೂಡ ಜೈಲಿನಿಂದ ಜಗನ್ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಗಿದೆ.
ಸಮೈಕ್ಯಾಂಧ್ರವನ್ನು ಬೆಂಬಲಿಸುತ್ತಿರುವ ಜಗನ್, ಆಂಧ್ರ ವಿಭಜನೆಯನ್ನು ವಿರೋಧಿಸಿ ಕಳೆದ ಭಾನುವಾರದಿಂದ ಅಮರಣಾಂತರ ಉಪವಾಸ ಕೈಗೊಂಡಿದ್ದರು.