Webdunia - Bharat's app for daily news and videos

Install App

ತುಳಜಾಪುರದಲ್ಲಿ ಭೀಕರ ಅಪಘಾತಕ್ಕೆ ಆರು ವಿದ್ಯಾರ್ಥಿಗಳು ಬಲಿ

Webdunia
ಶನಿವಾರ, 7 ಡಿಸೆಂಬರ್ 2013 (13:28 IST)
PR
PR
ತುಳಜಾಪುರ: ಮಹಾರಾಷ್ಟ್ರದ ತುಳಜಾಪುರ ಬಳಿ ಇಂದು ಭೀಕರ ಅಪಘಾತ ಸಂಭವಿಸಿದ್ದು ಮಿನಿ ಬಸ್- ವೋಲ್ವೋ ಬಸ್ ನಡುವೆ ಸಂಭವಿಸಿದ ಡಿಕ್ಕಿಯಲ್ಲಿ 6 ವಿದ್ಯಾರ್ಥಿಗಳು ಮೃತಪಟ್ಟಿದ್ದಾರೆ. ಮೃತರೆಲ್ಲರೂ ಕೊಲ್ಲಾಪುರ ಮೂಲದವರು. ಪ್ರವಾಸಕ್ಕೆ ಉತ್ಸಾಹದಿಂದ ಹೊರಟಿದ್ದ ವಿದ್ಯಾರ್ಥಿಗಳ ಪಾಲಿಗೆ ಈ ಪ್ರವಾಸವು ಮೃತ್ಯುಸದೃಶವಾಗುತ್ತದೆಂದು ಎಣಿಸಿರಲಿಲ್ಲ. ಆದರೆ ವಿಧಿಲಿಖಿತವೆಂಬಂತೆ 6 ವಿದ್ಯಾರ್ಥಿಗಳು ಸಾವಿನ ದವಡೆಗೆ ಬಲಿಯಾದರು.ಈ ವಿದ್ಯಾರ್ಥಿಗಳು ಕೊಲ್ಲಾಪುರದ ತುಳಜಾಪುರದ ಅಂಬಾಭವಾನಿ ದೇವಸ್ಥಾನಕ್ಕೆ ತೆರಳುತ್ತಿದ್ದಾಗ ಈ ದುರ್ಘಟನೆ ಸಂಭವಿಸಿದೆ.

ಅಪಘಾತದಲ್ಲಿ 6 ವಿದ್ಯಾರ್ಥಿಗಳು ಸತ್ತಿದ್ದು, 10 ವಿದ್ಯಾರ್ಥಿಗಳಿಗೆ ಗಾಯವಾಗಿದೆ. ಗಣೇಶ್ ಕುಂಬಾರ್, ಆಕಾಶ್, ಸೂರಜ್ ಪಾಟೀಲ್, ಪಂಕಜ್ ಕುಂಬಾರ್, ಅಕ್ಷಯ್, ಚಾಲಕ ಪ್ರತಾಪ್ ಮೃತರಾದ ದುರ್ದೈವಿಗಳು. ಗಾಯಾಳುಗಳನ್ನು ಸ್ಥಳೀಯ ಖಾಸಗಿ ಆಸ್ಪತ್ರೆಗೆ ದಾಖಲುಮಾಡಲಾಗಿದೆ. ಮಿನಿ ಬಸ್‌ನಲ್ಲಿ 17 ಜನರು ಪ್ರಯಾಣ ಮಾಡುತ್ತಿದ್ದರು.

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments