Webdunia - Bharat's app for daily news and videos

Install App

ದಾವೂದ್ ಇಬ್ರಾಹಿಂನಿಂದ ಸಿಬಿಐ ಕಚೇರಿಗೆ ದಾಳಿ ಬೆದರಿಕೆ?

Webdunia
ಬುಧವಾರ, 23 ಮಾರ್ಚ್ 2011 (13:01 IST)
2 ಜಿ ತರಂಗಾಂತರ ಹಂಚಿಕೆ ಹಗರಣ ಮತ್ತೊಂದು ತಿರುವು ಪಡೆದುಕೊಂಡಿದೆ. ಹಗರಣದಲ್ಲಿ ಭೂಗತ ಪಾತಕಿ ದಾವೂದ್ ಇಬ್ರಾಹಿಂ ಪಾತ್ರವಿದೆ ಎಂಬ ಸುಳಿವಿನ ಹಿನ್ನೆಲೆಯಲ್ಲಿ ತನಿಖೆಗೆ ಮುಂದಾಗಿರುವ ಸಿಬಿಐ ಸ್ವತಃ ಈಗ ಬೆದರಿಕೆ ಎದುರಿಸುತ್ತಿದೆ. ಸಿಬಿಐ ಪ್ರಧಾನ ಕಚೇರಿ ಮೇಲೆ ದಾವೂದ್ ದಾಳಿ ಮಾಡಿಸಲಿದ್ದಾನೆ ಎಂಬ ಮಾಹಿತಿಗಳು ಬಂದಿವೆ.

2 ಜಿ ಹಗರಣಕ್ಕೆ ಸಂಬಂಧಪಟ್ಟ ಎಲ್ಲಾ ದಾಖಲೆಗಳನ್ನು ನಾಶ ಮಾಡುವ ಯತ್ನದ ಅಂಗವಾಗಿ ದೆಹಲಿಯಲ್ಲಿನ ಸಿಬಿಐ ಕಚೇರಿಯ ಮೇಲೆ ದಾವೂದ್ ಇಬ್ರಾಹಿಂನ ಕುಖ್ಯಾತ 'ಡಿ-ಕಂಪನಿ' ದಾಳಿ ನಡೆಸಲು ಯೋಜನೆ ರೂಪಿಸುತ್ತಿದೆ ಎಂಬ ಮಾಹಿತಿ ಮುಂಬೈಯಲ್ಲಿನ ಸಿಬಿಐ ಅಧಿಕಾರಿಗಳಿಗೆ ಸಿಕ್ಕಿದೆ. ತಕ್ಷಣವೇ ತನಿಖೆ ನಡೆಸುತ್ತಿರುವ ಅಧಿಕಾರಿಗಳಿಗೆ ಇದನ್ನು ಮುಟ್ಟಿಸಲಾಗಿದೆ.

ಬೆದರಿಕೆ ಹಿನ್ನೆಲೆಯಲ್ಲಿ ನವದೆಹಲಿಯಲ್ಲಿನ ಸಿಬಿಐ ಕಚೇರಿಗೆ ಭಾರೀ ಭದ್ರತೆ ಒದಗಿಸಲಾಗಿದೆ. 2ಜಿ ಹಗರಣಕ್ಕೆ ಸಂಬಂಧಪಟ್ಟ ದಾಖಲೆಗಳನ್ನು ಇಡಲಾಗಿರುವ ಕಟ್ಟಡಕ್ಕೆ ಸರ್ಪಗಾವಲು ಹಾಕಲಾಗಿದೆ. ಬೆದರಿಕೆ ಇರುವ ಬಗ್ಗೆ ಗೃಹ ಸಚಿವಾಲಯ ಮತ್ತು ರಾಷ್ಟ್ರೀಯ ತನಿಖಾ ದಳಕ್ಕೂ ಮಾಹಿತಿ ನೀಡಲಾಗಿದೆ.

ಮೂಲಗಳ ಪ್ರಕಾರ ಈ ಮಾಹಿತಿಯನ್ನು ಮುಂಬೈ ಸಿಬಿಐ ಕಚೇರಿಯು ಪ್ರಧಾನ ಕಚೇರಿಗೆ ನೀಡಿರುವುದು ಮೂರು ವಾರಗಳ ಹಿಂದೆ. ಆತನ ಡಿ-ಕಂಪನಿಯು ಸಿಬಿಐ ಪ್ರಧಾನ ಕಚೇರಿಯಲ್ಲಿನ ದಾಖಲೆಗಳ ಕೊಠಡಿಗೆ ದಾಳಿ ಮಾಡಬಹುದು ಎಂದು ಈ ಮಾಹಿತಿ ಹೇಳಿತ್ತು.

ಗುಪ್ತಚರ ಇಲಾಖೆಗಳ ಪ್ರಕಾರ ದಾವೂದ್ ಇಬ್ರಾಹಿಂ ಭಾರತದ ಕೆಲವು ದೂರವಾಣಿ ಕಂಪನಿಗಳ 2ಜಿ ತರಂಗಾಂತರ ಖರೀದಿಯಲ್ಲಿ ಬೇನಾಮಿ ಹೆಸರಲ್ಲಿ ಪಾಲ್ಗೊಂಡಿದ್ದಾನೆ. ಶಾಹಿದ್ ಬಲ್ವಾ ನೇತೃತ್ವದ ಸ್ವಾನ್ ಟೆಲಿಕಾಂ ಕಂಪನಿಯಲ್ಲಿ ಈತನ ಪಾಲು ಇರಬಹುದು ಎಂದು ಶಂಕಿಸಲಾಗಿದೆ.

2 ಜಿ ಹಗರಣ ಸಂಬಂಧ ಫೆಬ್ರವರಿ 8ರಂದು ಶಾಹಿದ್ ಬಲ್ವಾ‌ನನ್ನು ಸಿಬಿಐ ಬಂಧಿಸಿತ್ತು. ಪ್ರಸಕ್ತ ಆತ ನ್ಯಾಯಾಂಗ ಬಂಧನದಲ್ಲಿದ್ದಾನೆ. ಬಲ್ವಾನಿಗೆ ದಾವೂದ್ ಲಿಂಕ್ ಇರುವ ಕುರಿತು ಸಾಕಷ್ಟು ಮಾಹಿತಿಗಳು ಸಿಕ್ಕಿವೆ. ಸಿಬಿಐ ಕಚೇರಿ ಮೇಲೆ ದಾಳಿ ಮಾಡುವ ಬೆದರಿಕೆ ಇರುವುದು ಕೂಡ ಹೌದು. ಈ ಕುರಿತು ತನಿಖೆ ನಡೆಸುತ್ತಿದ್ದೇವೆ. ಭದ್ರತೆ ಬಿಗಿಗೊಳಿಸಲಾಗಿದೆ ಎಂದು ಹೆಸರು ಹೇಳಲಿಚ್ಛಿಸದ ಸಿಬಿಐ ಅಧಿಕಾರಿಯೊಬ್ಬರು ಖಚಿತಪಡಿಸಿದ್ದಾರೆ.

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಡಿಕೆಶಿಗೆ ಕ್ಯಾರೇ ಎನ್ನದ ಸಿದ್ದು, ಭುಗಿಲೆದ್ದ ಕಾಂಗ್ರೆಸ್ ಅಂತಃಕಲಹ, ಸೆಪ್ಟೆಂಬರ್‌ನಲ್ಲಿ ಮುಹೂರ್ತ ಫಿಕ್ಸ್: ಬಿಜೆಪಿ

ರಾಜ್ಯದ ಸಣ್ಣ ವ್ಯಾಪಾರಸ್ಥರ ಹಿತರಕ್ಷಣೆಗೆ ಬಿಜೆಪಿ ಸಹಾಯವಾಣಿ - ಛಲವಾದಿ ನಾರಾಯಣಸ್ವಾಮಿ

ಡಿಕೆಶಿ ಕುರ್ಚಿ ಕಸಿದುಕೊಳ್ಳುವ ದುಸ್ಸಾಹಸಕ್ಕೆ ಕೈಹಾಕಿದರೆ ಮನೆಯಲ್ಲಿ ಕೂರಿಸುವ ಎಚ್ಚರಿಕೆ ಕೊಟ್ರಾ ಸಿದ್ದರಾಮಯ್ಯ: ಆರ್ ಅಶೋಕ್‌

ಆರ್‌ಸಿಬಿ ಕಾಲ್ತುಳಿತ ಪ್ರಕರಣ, ಅಮಾಯಕರ ಕುಟುಂಬಕ್ಕೆ ನ್ಯಾಯ ಸಿಗುವವರೆಗೂ ಹೋರಾಟ ನಿಲ್ಲಲ್ಲ: ಆರ್‌ ಅಶೋಕ್‌

ತುರ್ತು ನಿರ್ವಹಣಾ ಕಾಮಗಾರಿ: ಬೆಂಗಳೂರಿನ ಈ ಭಾಗದಲ್ಲಿ ಜು.21, 22ರಂದು ವಿದ್ಯುತ್ ವ್ಯತ್ಯಯ

Show comments