Webdunia - Bharat's app for daily news and videos

Install App

ದೆಹಲಿ ಬಿಕ್ಕಟ್ಟು: 10 ದಿನಗಳ ಕಾಲಾವಕಾಶ ಕೋರಿದ ಕೇಜ್ರಿವಾಲ್

Webdunia
ಶನಿವಾರ, 14 ಡಿಸೆಂಬರ್ 2013 (12:38 IST)
PR
PR
ನವದೆಹಲಿ: ದೆಹಲಿಯಲ್ಲಿ ನೂತನ ಸರ್ಕಾರ ರಚನೆ ಬಿಕ್ಕಟ್ಟು ಈಗಲೂ ಮುಂದುವರಿದಿದ್ದು ಕೇಜ್ರಿವಾಲ್ 10 ದಿನಗಳ ಸಮಯಾವಕಾಶ ಕೋರಿದ್ದಾರೆ. ಲೆಫ್ಟಿನೆಂಟ್ ಗವರ್ನರ್ ನಜೀಬ್ ಜಂಗ್ ಅವರನ್ನು ಕೇಜ್ರಿವಾಲ್ ಭೇಟಿಯಾಗಿದ್ದಾಗ ಕೇಜ್ರಿವಾಲ್ ಈ ವಿಷಯವನ್ನು ಸ್ಪಷ್ಟಪಡಿಸಿದರು. ನಾವು ದೆಹಲಿಯಲ್ಲಿ ಸರ್ಕಾರ ರಚಿಸುತ್ತೇವೆ. ನಮ್ಮ ಷರತ್ತುಗಳಿಗೆ ಒಪ್ಪುವುದಾದರೆ ಮಾತ್ರ ಬೆಂಬಲ ನೀಡಬಹುದು ಎಂದು ಆಮ್ ಆದ್ಮಿ ಪಕ್ಷದ ಮುಖ್ಯಸ್ಥ ಕೇಜ್ರಿವಾಲ್ ಬಿಜೆಪಿ ಮತ್ತು ಕಾಂಗ್ರೆಸ್‌ಗೆ ಹೇಳಿದ್ದಾರೆ. ಬಿಜೆಪಿಗೆ ನಾಲ್ಕು ಸೀಟುಗಳನ್ನು ಖರೀದಿಸೋದು ದೊಡ್ಡ ಮಾತಲ್ಲ.

ಕಾಂಗ್ರೆಸ್ ಪಕ್ಷಕ್ಕೆ ದೆಹಲಿ ಜನರ ಬಗ್ಗೆ ಕಾಳಜಿಯಿಲ್ಲ. ನಮ್ಮ ಷರತ್ತುಗಳಿಗೆ ಒಪ್ಪುವುದಾದರೆ ಬೆಂಬಲ ಸೂಚಿಸಬಹುದು. ನಾವು ಯಾರಿಂದಲೂ ಬೆಂಬಲ ಕೇಳಿಲ್ಲ ಎಂದು ಅರವಿಂದ ಕೇಜ್ರಿವಾಲ್ ಹೇಳಿದ್ದಾರೆ. ಅಲ್ಲದೇ ಕೇಜ್ರಿವಾಲ್ 18 ಪ್ರಮುಖ ವಿಷಯಗಳ ಬಗ್ಗೆ ಉಭಯ ಪಕ್ಷಗಳ ನಿಲುವನ್ನು ಸ್ಪಷ್ಟಪಡಿಸಬೇಕು ಮತ್ತು ಬೇಷರತ್ ಬೆಂಬಲ ನೀಡುವುದರ ಉದ್ದೇಶವನ್ನು ಕೂಡ ಎರಡೂ ಪಕ್ಷಗಳು ಸ್ಪಷ್ಟಪಡಿಸಬೇಕು ಎಂದು ಹೇಳಿದ್ದಾರೆ.

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments